AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸದ್ದು ಮಾಡುತ್ತಿವೆ ಲಾಂಗು, ಮಚ್ಚು: ಹಣಕ್ಕಾಗಿ ಮಾರಕಾಸ್ತ್ರಗಳಿಂದ ಹಲ್ಲೆ, ಮತ್ತೊಂದೆಡೆ ಹುಡುಗಿಗಾಗಿ ಲಾಂಗ್​ ಹಿಡಿದು ಮಾರಾಮಾರಿ

ಪ್ಲೇವುಡ್ ಅಂಗಡಿಗೆ ಏಕಾಏಕಿ ನುಗ್ಗಿದ ಕೆಲ ಯುವಕರು ಹಣ ಕೊಡುವಂತೆ ಡಿಮ್ಯಾಂಡ್ ಮಾಡಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಅಂಗಡಿ ಮಾಲೀಕ ಪನ್ನಾ ಲಾಲ್ ಮೇಲೆ ಹಲ್ಲೆ ಮಾಡ್ತಿರೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನಲ್ಲಿ ಸದ್ದು ಮಾಡುತ್ತಿವೆ ಲಾಂಗು, ಮಚ್ಚು: ಹಣಕ್ಕಾಗಿ ಮಾರಕಾಸ್ತ್ರಗಳಿಂದ ಹಲ್ಲೆ, ಮತ್ತೊಂದೆಡೆ ಹುಡುಗಿಗಾಗಿ ಲಾಂಗ್​ ಹಿಡಿದು ಮಾರಾಮಾರಿ
ಹಣಕ್ಕಾಗಿ ಮಾರಕಾಸ್ತ್ರಗಳಿಂದ ಹಲ್ಲೆ
TV9 Web
| Edited By: |

Updated on: Sep 20, 2022 | 12:14 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪುಡಿ ರೌಡಿಗಳ ಅಟ್ಟಹಾಸ ಹೆಚ್ಚಾಗುತ್ತಿದೆ. ಪೊಲೀಸರು ಅಂದ್ರೆ ಭಯವೇ ಇಲ್ಲದಂತಾಗುತ್ತಿದೆ. ಹಾಡ ಹಗಲೇ ಯುವಕರು ಲಾಂಗ್, ಮಚ್ಚು ಹಿಡಿದು ಸಾರ್ವಜನಿಕರನ್ನು ಬೆದರಿಸುತ್ತಿರುವ ಘಟನೆ ನಗರದಲ್ಲಿ ನಡೆದಿದೆ.

ಸೆ. 2ರ ಮಧ್ಯಾಹ್ನ ಹೆಣ್ಣೂರು ಠಾಣಾ ವ್ಯಾಪ್ತಿಯ ಪ್ಲೇವುಡ್ ಅಂಗಡಿಗೆ ಏಕಾಏಕಿ ನುಗ್ಗಿದ ಕೆಲ ಯುವಕರು ಹಣ ಕೊಡುವಂತೆ ಡಿಮ್ಯಾಂಡ್ ಮಾಡಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಅಂಗಡಿ ಮಾಲೀಕ ಪನ್ನಾ ಲಾಲ್ ಮೇಲೆ ಹಲ್ಲೆ ಮಾಡ್ತಿರೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೆ. 2ರಂದು ಖದೀಮರು ಮಚ್ಚು ಹಿಡಿದು ಹಣ ಕೊಡು ಇಲ್ಲವಾದರೆ ನಿನ್ನ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರಂತೆ. ಬಳಿಕ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾಗಿದ್ದು, ಈ ವೇಳೆ ಭಯದಿಂದ ಮಾಲೀಕ ಕಿರುಚಿಕೊಂಡಿದ್ದ. ಇದೇ ವೇಳೆ ಅಕ್ಕಪಕ್ಕದ ಜನ ಸೇರುತ್ತಿದ್ದಂತೆ, ಅಲ್ಲಿಂದ ಖದೀಮರು ಕಾಲ್ಕಿತ್ತಿದ್ದರು. ಸದ್ಯ ಖದೀಮರ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಹುಡುಕಾಡುತ್ತಿದ್ದಾರೆ.

ಹುಡುಗಿ ವಿಚಾರಕ್ಕೆ ಯುವಕರ ಮಾರಾಮಾರಿ

ಇನ್ನು ಮತ್ತೊಂದು ಕಡೆ ಬೆಂಗಳೂರಿನ ಕ್ವೀನ್ಸ್​​ ರಸ್ತೆಯಲ್ಲಿ ಕೆಲ ಯುವಕರು ಹುಡುಗಿ ವಿಚಾರಕ್ಕೆ ಮಾರಾಮಾರಿ ಮಾಡಿಕೊಂಡಿದ್ದಾರೆ. ಲಾಂಗ್​ ಹಿಡಿದುಕೊಂಡು ಹೊಡೆದಾಡಿಕೊಂಡಿದ್ದಾರೆ. ನಗರ ಪೊಲೀಸ್ ಆಯಕ್ತರ ಕಚೇರಿ ಬಳಿಯೇ ಘಟನೆ ನಡೆದಿದ್ದು ಘಟನೆ ಕುರಿತು ವಿಧಾನಸೌಧ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಗಲಾಟೆಯ ವಿಡಿಯೋ ವೈರಲ್ ಆಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ