AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಚೇಸ್​ ಮಾಡಿಕೊಂಡು ಬಂದು ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಿಡಿಗೇಡಿಗಳು

ಬೆಂಗಳೂರಿನಲ್ಲಿ ಪುಂಡರ ಹಾವಳಿ ಮಿತಿ ಮೀರಿದೆ. ಬೈಕ್​​ನಲ್ಲಿ ಹಿಂಬಾಲಿಸಿಕೊಂಡು ಬಂದು ಕಾರನ್ನು ಅಡ್ಡಗಟ್ಟಿ ಗಲಾಟೆ‌ ಮಾಡಿರುವ ಘಟನೆ ಇಂದಿರಾನಗರದಲ್ಲಿ ನಡೆದಿದೆ. ಮತ್ತೊಂದು ಘಟನೆಯಲ್ಲಿ ನಿಮಿಷಾಂಭ ದೇಗುಲದ ಸಿಗ್ನಲ್ ಬಳಿ ಫುಡ್ ಡೆಲಿವರಿ ಬಾಯ್​​ಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ.

ಬೆಂಗಳೂರು: ಚೇಸ್​ ಮಾಡಿಕೊಂಡು ಬಂದು ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಿಡಿಗೇಡಿಗಳು
ಕಾರು ಅಡ್ಡಗಟ್ಟಿದ ಕಿಡಿಗೇಡಿಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 20, 2024 | 3:07 PM

Share

ಬೆಂಗಳೂರು, ಆಗಸ್ಟ್​ 20: ನಗರದಲ್ಲಿ ರೋಡ್ ರೇಜ್ ಕೇಸ್​ಗಳು ಮುಂದುವರೆದಿವೆ. ಬೈಕ್​​ನಲ್ಲಿ ಹಿಂಬಾಲಿಸಿಕೊಂಡು ಬಂದು ಕಾರನ್ನು ಅಡ್ಡಗಟ್ಟಿ ಗಲಾಟೆ‌ ಮಾಡಿರುವ ಘಟನೆ ಇಂದಿರಾನಗರದಲ್ಲಿ (Indiranagar) ನಡೆದಿದೆ. ಜಿತಿನ್ ರಾಜ್ ಎಂಬುವವರು ಕಾರಲ್ಲಿ ಗೆಳೆಯನ ಜೊತೆ ಇಂದಿರಾನಗರದಲ್ಲಿರುವ ಮತ್ತೊಬ್ಬ ಗೆಳೆಯನ ಮನೆಗೆ ಹೋಗುತ್ತಿದ್ದರು. ಇವರ ಕಾರನ್ನು 3-4 ಕಿಮೀನಿಂದ ಹಿಂಬಾಲಿಸಿಕೊಂಡು ಬಂದ ಕಿಡಿಗೇಡಿಗಳು ಇಂದಿರಾನಗರ ಸಿಗ್ನಲ್​ನಲ್ಲಿ ಓವರ್​ ಟೇಕ್​ ಮಾಡಿ ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.

ಆರೋಪಿಗಳು ಅಡ್ಡುಗಟ್ಟಿದ ದೃಶ್ಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರುಚಾಲಕ ಜಿತಿನ್ ರಾಜ್ ಅವರು ಸಾಮಜಿಕ ಜಾಲತಾಣ ಎಕ್ಸ್​ನಲ್ಲಿ ಘಟನೆ ಬಗ್ಗೆ ಪೋಸ್ಟ್​​ ಹಾಕಿ ನಗರ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ.

ಫುಡ್ ಡೆಲಿವರಿ ಬಾಯ್​​ಗೆ ಹಿಗ್ಗಾಮುಗ್ಗಾ ಥಳಿತ

ಫುಡ್ ಡೆಲಿವರಿ ಬಾಯ್​​ಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಯನಗರದ ನಿಮಿಷಾಂಭ ದೇಗುಲದ ಸಿಗ್ನಲ್ ಬಳಿ ನಡೆದಿದೆ. ಬಸ್​ನಲ್ಲಿ ತೆರಳುವ ವ್ಯಕ್ತಿ ಗಲಾಟೆಯ ದೃಶ್ಯವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಫುಡ್ ಡೆಲಿವರಿ ಬಾಯ್ ಬೈಕ್​​ ಮುಂದೆ ಹೋಗುತ್ತಿದ್ದ ಆಟೋಗೆ ಟಚ್ ಆಗಿದೆ. ಇದೇ ವಿಚಾರಕ್ಕೆ ಆಟೋ ಚಾಲಕ ಮತ್ತು ಫುಡ್ ಡೆಲಿವರಿ ಬಾಯ್ ಮಧ್ಯೆ ಮಾತಿಗೆ ಮಾತು ಬೆಳೆದಿದೆ.

ಇದನ್ನೂ ಓದಿ: ಹೆಚ್ಚಿದ ಬೀದಿ ನಾಯಿ ಕಾಟ, ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಳ

ಮುಂದಿನ ಸಿಗ್ನಲ್ ಬಳಿ ಆಟೋ ಚಾಲಕ ಮತ್ತು ಆತನ ಸ್ನೇಹಿತರು ಫುಡ್ ಡಿಲಿವರಿ ಬಾಯ್​ನನ್ನು ಹಿಡಿದು ಹಲ್ಲೆ ಮಾಡಿದ್ದಾರೆ. ಸದ್ಯ ಜಯನಗರ ಠಾಣಾ ಪೊಲೀಸರು ಫುಡ್ ಡಿಲಿವರಿ ಬಾಯ್​ ಅವರನ್ನು ಕರೆದು ಮಾಹಿತಿ ಪಡೆದಿದ್ದಾರೆ.

ಕಾರು ಗ್ಲಾಸ್​ ಒಡೆದು ಗಲಾಟೆ

ಕ್ಷುಲ್ಲಕ ಕಾರಣಕ್ಕೆ ಯುವಕ ಕಾರಿನ ಗ್ಲಾಸ್​ ಒಡೆದು ಅಟ್ಟಹಾಸ ಮೆರೆದಿರುವ ಘಟನೆ ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನೆಹಳ್ಳಿಯಲ್ಲಿ ನಡೆದಿದೆ. ಗ್ಲಾಸ್ ಒಡೆಯುತ್ತಿದ್ದಂತೆ ಕಾರಿನ‌ ಒಳಗಿದ್ದವರು ಚೀರಾಡಿದ್ದಾರೆ. ಕಾರಿನಲ್ಲಿ ಪುಟ್ಟ ಮಗು ಇದೆ ಎಂದು ಚಾಲಕ ಹೇಳಿದರೂ ಯುವಕ ಗಲಾಟೆ ಮುಂದುವರೆಸಿದ್ದಾನೆ. ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್