AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ; 60 ಜನರಿಗೆ 15 ಲಕ್ಷಕ್ಕೂ ಹೆಚ್ಚು ಹಣ ವಂಚಿಸಿದ ಗ್ಯಾಂಗ್ ಬಂಧನ

ಆ ಯುವಕರ ಗುಂಪು ಸುಲಭವಾಗಿ ಹಣ ಮಾಡಲು ಕೆಲಸ ಹುಡುಕುವವರನ್ನೇ ಟಾರ್ಗೆಟ್ ಮಾಡಿದ್ದರು, ಬಿಬಿಎಂಪಿಯಲ್ಲಿ ಕೆಲಸ ಕೊಡಿಸ್ತಿವಿ, ನಿವೇಶನ ಕೊಡಿಸ್ತೀವಿ ಅಂತೇಳಿ ಅಮಾಯಕರನ್ನ ವಂಚಿಸಿ ಹಣ ಪೀಕ್ತಿದ್ದರು. ಇದೀಗ ಆ ಮೂವರ ಗ್ಯಾಂಗ್ ಲಾಕ್ ಆಗಿದೆ‌. ಕೆಲಸ ಕೊಡಿಸೋದಾಗಿ ನಂಬಿಸಿ 8 ರಿಂದ 10 ಸಾವಿರ ಹಣ ಪಡೆದುಕೊಂಡು ನಂತರ ಎಸ್ಕೇಪ್ ಆಗುತ್ತಿದ್ದರು. ಹೀಗೆ 60 ಕ್ಕೂ ಹೆಚ್ಚು ಅಮಾಯರಿಗೆ ವಂಚಿಸಿ 15 ಲಕ್ಷ ಹಣವನ್ನು ವಂಚಿಸಿದ್ದಾರೆಂದು ತನಿಖೆಯಲ್ಲಿ ಗೊತ್ತಾಗಿದೆ.

ಬಿಬಿಎಂಪಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ; 60 ಜನರಿಗೆ 15 ಲಕ್ಷಕ್ಕೂ ಹೆಚ್ಚು ಹಣ ವಂಚಿಸಿದ ಗ್ಯಾಂಗ್ ಬಂಧನ
ಸಾಂದರ್ಭಿಕ ಚಿತ್ರ
Shivaprasad B
| Edited By: |

Updated on: Feb 07, 2024 | 3:00 PM

Share

ಬೆಂಗಳೂರು, ಫೆ.07: ಬಿಬಿಎಂಪಿಯಲ್ಲಿ (BBMP) ಕೆಲಸ ಕೊಡಿಸುವುದಾಗಿ ಹೇಳಿ 60 ಜನರಿಗೆ 15 ಲಕ್ಷಕ್ಕೂ ಹೆಚ್ಚು ಹಣ ವಂಚಿಸಿರುವ (Cheating) ಘಟನೆ ನಡೆದಿದೆ. ದೀಪಕ್, ಹರೀಶ್ ಸೇರಿದಂತೆ ಇನ್ನು ಕೆಲ ಸ್ನೇಹಿತರು ಸೇರಿಕೊಂಡು ಯುವಕರಿಗೆ, ಮಹಿಳೆಯರಿಗೆ ಬಿಬಿಎಂಪಿ, ಸಬ್ಸಿಡಿ ಹಣ ಸಿಗುತ್ತೆ ಕಾರು, ಸೈಟ್, ಮನೆ ಕೊಡಿಸುವ ನೆಪದಲ್ಲಿ ವಂಚಿಸ್ತಿದ್ದರು. ಅಮಾಯಕ ಹೆಂಗಸರು, ಗೃಹಿಣಿಯರ ನಂಬರ್ ಪಡೆದುಕೊಂಡು ಬಿಬಿಎಂಪಿಯಲ್ಲಿ ಕೆಲಸ ಕೊಡಿಸೋದಾಗಿ ನಂಬಿಸಿ 8 ರಿಂದ 10 ಸಾವಿರ ಹಣ ಪಡೆದುಕೊಂಡು ನಂತರ ಎಸ್ಕೇಪ್ ಆಗುತ್ತಿದ್ದರು. ಹೀಗೆ 60 ಕ್ಕೂ ಹೆಚ್ಚು ಅಮಾಯರಿಗೆ ವಂಚಿಸಿ 15 ಲಕ್ಷ ಹಣವನ್ನು ವಂಚಿಸಿದ್ದಾರೆಂದು ತನಿಖೆಯಲ್ಲಿ ಗೊತ್ತಾಗಿದೆ. ಇದೀಗ ಈ ಆರೋಪಿಗಳ ಗ್ಯಾಂಗ್ ಕಂಬಿ ಹಿಂದೆ ಬಿದ್ದಿದೆ.

ಇನ್ನು ಕಾರು ಸೇರಿದಂತೆ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ದೀಪಕ್, ತೇಜಸ್ ಮತ್ತು ಭರತ್ ಈ ಮೂವರು‌ ಸಹ ಆರ್.ಆರ್‌ ನಗರ, ಹನುಮಂತನಗರ ಸೇರಿಸಿದಂತೆ ಅನೇಕ ಕಡೆಗಳಲ್ಲಿ ಮನೆ ಮುಂದೆ ಮತ್ತು ಪಾರ್ಕಿಂಗ್ ಸ್ಥಳದಲ್ಲಿ ಕಾರು, ಬೈಕ್​ಗಳನ್ನು ನಕಲಿ ಕೀ ಬಳಸಿ ಕ್ಷಣಾರ್ಧದಲ್ಲಿ ಎಗರಿಸುತ್ತಿದ್ದರು. ಇದೀಗ ಈ ಮೂವರಿಂದ ಹತ್ತು ಲಕ್ಷ ಮೌಲ್ಯದ 5 ಕಾರು ಮತ್ತು 2 ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕಚೇರಿಯೊಳಗೆ ನುಗ್ಗಲು, ವಿಧಾನಸೌಧದ ದಕ್ಷಿಣ ದ್ವಾರಕ್ಕೆ ಬೀಗ ಹಾಕಲು ಯತ್ನಿಸಿದ ಅಶೋಕ್​, ವಿಜಯೇಂದ್ರ

ಇನ್ನು ಕೆ.ಆರ್ ಪುರಂ ಪೊಲೀಸರು ‌ಚೈನ್ ಸ್ನ್ಯಾಚ್ ಮಾಡುತ್ತಿದ್ದ ಪ್ರಜ್ವಲ್ ಎಂಬ ಖದೀಮನೊಬ್ಬನನ್ನು ಬಂಧಿಸಿದ್ದಾರೆ. ಕಳೆದ ಜನವರಿ 11ರಂದು ಬೆಳಗ್ಗಿನ ಜಾವ ಮಹಿಳೆಯೊಬ್ಬರು ಒಬ್ಬರೇ ಹೋಗುವಾಗ ಈ ಪ್ರಜ್ವಲ್ ಮತ್ತು ಈತನ ಸಹಚರರು ಅವರ ಕತ್ತಿನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ಸರವನ್ನು ಎಗರಿಸಿ ಎಸ್ಕೇಪ್ ಆಗಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಈತನನ್ನು ವಶಕ್ಕೆ ಪಡೆದು ಇನ್ನುಳಿದ ಇಬ್ಬರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಅದೇನೆ ಇರಲಿ ಒಟ್ನಲ್ಲಿ ಬಿಬಿಎಂಪಿ, ಬಿಡಿಎ, ಸಬ್ಸಿಡಿ ಹಣ, ಕಾರು ಸೈಟ್, ಮನೆ ಕೊಡಿಸುವ ನೆಪದಲ್ಲಿ ವಂಚಿಸ್ತಿದ್ದ ಗ್ಯಾಂಗ್ ಮತ್ತಷ್ಟು ಜನರಿಗೆ ವಂಚಿಸಿರುವ ಆರೋಪ ಇದ್ದು ಆರೋಪಿಗಳಾದ ದೀಪಕ್ ಮತ್ತು ಹರೀಶ್​ನನ್ನು ಮತ್ತಷ್ಟು ತನಿಖೆಗೆ ಒಳಪಡಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Shivaprasad B
Shivaprasad B
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ