AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿ ಹಳ್ಳಿಯಲ್ಲಿ ತಲ್ವಾರ್ ಹಿಡಿದು ಧಮ್ಕಿ- ವಿಡಿಯೋ ವೈರಲ್! ಹಣ ವಸೂಲಿಗೆ ಮುಂದಾದ ಕಿರಾತಕರ ವಿರುದ್ಧ ಕ್ರಮಕ್ಕೆ ಸೂಚನೆ

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋದಲ್ಲಿ, ಕೆಜಿ ಹಳ್ಳಿಯ 7ನೇ ಕ್ರಾಸ್ನಲ್ಲಿ‌ ಪುಂಡರು ಅಂಗಡಿಯೊಂದಕ್ಕೆ ನುಗ್ಗಿ ಮಾರಕಾಸ್ತ್ರ ತೋರಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಹಣ ಕೊಡದಿದ್ದರೆ ಕೊಲೆ ಮಾಡೋದಾಗಿ ಅಂಗಡಿ‌ಯವನಿಗೆ ಬೆದರಿಕೆ ಹಾಕಿದ್ದಾರೆ.

ಕೆಜಿ ಹಳ್ಳಿಯಲ್ಲಿ ತಲ್ವಾರ್ ಹಿಡಿದು ಧಮ್ಕಿ- ವಿಡಿಯೋ ವೈರಲ್! ಹಣ ವಸೂಲಿಗೆ ಮುಂದಾದ ಕಿರಾತಕರ ವಿರುದ್ಧ ಕ್ರಮಕ್ಕೆ ಸೂಚನೆ
ತಲ್ವಾರ್ ಹಿಡಿದು ಧಮ್ಕಿ- ವಿಡಿಯೋ ವೈರಲ್! ಹಣ ವಸೂಲಿಗೆ ಮುಂದಾದ ಕಿರಾತಕರ ವಿರುದ್ಧ ಕ್ರಮ ಕೈಗೊಳ್ಳಲು ಕೆಜಿ ಹಳ್ಳಿ ಪೊಲೀಸರಿಗೆ ಸೂಚನೆ
TV9 Web
| Updated By: ಆಯೇಷಾ ಬಾನು|

Updated on:Feb 21, 2022 | 12:04 PM

Share

ಬೆಂಗಳೂರು: ತಮ್ಮ ಮನೆ, ಕುಟುಂಬ ಎಲ್ಲವನ್ನೂ ಬಿಟ್ಟು ಬದುಕು ಕಟ್ಟಿಕೊಳ್ಳಲು ಹಳ್ಳಿಗಳಿಂದ ಲಕ್ಷಾಂತರ ಜನರು ಬೆಂಗಳೂರಿಗೆ ಬರುತ್ತಾರೆ. ಆದ್ರೆ ಈ ಮಹಾನಗರ ಜೀವನಕ್ಕೆ ಎಷ್ಟು ಸೇಫ್ ಎಂಬ ಪ್ರಶ್ನೆ ಎದ್ದಿದೆ. ಗಾಂಜಾ, ಡ್ರಗ್ಸ್, ಗನ್ ಮಾಫಿಯಾದಂತಹ ತಲೆ ಇತ್ತಿರುವ ಜಾಲದ ನಡುವೆ ಮತ್ತೊಂದು ಬೆಚ್ಚಿ ಬೀಳಿಸುವ ಹಾಗೂ ಜನರಲ್ಲಿ ಭಯ ಹುಟ್ಟಿಸಿರುವಂತಹ ಘಟನೆ ನಗರದಲ್ಲಿ ನಡೆಯುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಕಾಟ ಹೆಚ್ಚಾಗಿದ್ದು ತಲ್ವಾರ್ ಹಿಡಿದು ಅಂಗಡಿಗಳಲ್ಲಿ ಹಣ ವಸೂಲಿ ಮಾಡುವ ಖದೀಮರಿಂದ ಜನಕ್ಕೆ ಹೆದರಿಗೆ ಶುರುವಾಗಿದೆ. ಪುಡಿ ರೌಡಿಗಳ ಅಟ್ಟಹಾಸ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಿನಿಮಾಗಳಲ್ಲಿ ಪುಡಿ ರೌಡಿಗಳು ಲಾಂಗ್ ಹಿಡಿದು ಜನರ ಬಳಿ ಹಣ ಮಸೂಲಿ ಮಾಡುವಂತಯೇ ನಗರದಲ್ಲೂ ಘಟನೆಯೊಂದು ನಡೆದಿದೆ. ಸಿನಿಮೀಯ ರೀತಿಯಲ್ಲೇ ಕೆಲ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಜನರ ಬಳಿ ಲೂಟಿಗೆ ಮುಂದಾಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು ಜನರಲ್ಲಿ ಆತಂಕ ಸೃಷ್ಟಿ ಆಗಿದೆ. ಜನನಿಬಿಡ ಪ್ರದೇಶದ ಅಂಗಡಿಗೆ ತಲ್ವರ್ ಜೊತೆ ಎಂಟ್ರಿ ಕೊಟ್ಟು ಹಣಕೊಡುವಂತೆ ಧಮ್ಕಿ ಹಾಕಿ ಹೆದರಿಸುವ ವಿಡಿಯೋ ಜನರಲ್ಲಿ ನಡುಕ ಹುಟ್ಟಿಸಿದೆ. ಪುಂಡರು ಪೊಲೀಸರ ಭಯವಿಲ್ಲದೆ ರಸ್ತೆಗಳಲ್ಲಿ‌ ದರ್ಬಾರ್ ಮಾಡುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋದಲ್ಲಿ, ಕೆಜಿ ಹಳ್ಳಿಯ 7ನೇ ಕ್ರಾಸ್ನಲ್ಲಿ‌ ಪುಂಡರು ಅಂಗಡಿಯೊಂದಕ್ಕೆ ನುಗ್ಗಿ ಮಾರಕಾಸ್ತ್ರ ತೋರಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಹಣ ಕೊಡದಿದ್ದರೆ ಕೊಲೆ ಮಾಡೋದಾಗಿ ಅಂಗಡಿ‌ಯವನಿಗೆ ಬೆದರಿಕೆ ಹಾಕಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯರು ಟ್ವಿಟರ್ನಲ್ಲಿ‌ ಬೆಂಗಳೂರು ಸಿಟಿ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡುತ್ತಿದ್ದಾರೆ. ಅಂಗಡಿಯವನಿಗೆ ಬೆದರಿಸಿ ಮತ್ತೊಬ್ಬನನ್ನ ಅಟ್ಟಿಸಿಕೊಂಡು ಹೋಗುತ್ತಿರುವ ವಿಡಿಯೋ ಹಾಕಿ ಈ ಬಗ್ಗೆ ತನಿಖೆ ನಡೆಸಲು ಟ್ವಿಟರ್ನಲ್ಲೇ ಹಿರಿಯ ಅಧಿಕಾರಿಗಳು ಕೆಜಿ ಹಳ್ಳಿ‌ ಪೊಲೀಸ್ ಠಾಣೆಗೆ ಸೂಚನೆ ನೀಡಿದ್ದಾರೆ. ಕೆಜಿ ಹಳ್ಳಿ ಪೊಲೀಸರು ವಿಡಿಯೋ ಕುರಿತು ಪರಿಶೀಲನೆ‌ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಶಕುಂತಲೆ ಅವತಾರದಲ್ಲಿ ಸಮಂತಾ; ‘ಶಾಕುಂತಲಂ’ ಫಸ್ಟ್​ ಲುಕ್​ ಪೋಸ್ಟರ್​ ಕಂಡು ಫ್ಯಾನ್ಸ್​ ಫಿದಾ

ವ್ಯಕ್ತಿ ನುಡಿಸಿದ ಬಾಂಜೋ ನಾದಕ್ಕೆ ಕಿವಿಯಾಡಿಸಿದ ನರಿ; ವಿಡಿಯೋ ಕಂಡು ಅಚ್ಚರಿಗೊಂಡ ನೆಟ್ಟಿಗರು

Published On - 12:04 pm, Mon, 21 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ