AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿ ಹಳ್ಳಿಯಲ್ಲಿ ತಲ್ವಾರ್ ಹಿಡಿದು ಧಮ್ಕಿ- ವಿಡಿಯೋ ವೈರಲ್! ಹಣ ವಸೂಲಿಗೆ ಮುಂದಾದ ಕಿರಾತಕರ ವಿರುದ್ಧ ಕ್ರಮಕ್ಕೆ ಸೂಚನೆ

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋದಲ್ಲಿ, ಕೆಜಿ ಹಳ್ಳಿಯ 7ನೇ ಕ್ರಾಸ್ನಲ್ಲಿ‌ ಪುಂಡರು ಅಂಗಡಿಯೊಂದಕ್ಕೆ ನುಗ್ಗಿ ಮಾರಕಾಸ್ತ್ರ ತೋರಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಹಣ ಕೊಡದಿದ್ದರೆ ಕೊಲೆ ಮಾಡೋದಾಗಿ ಅಂಗಡಿ‌ಯವನಿಗೆ ಬೆದರಿಕೆ ಹಾಕಿದ್ದಾರೆ.

ಕೆಜಿ ಹಳ್ಳಿಯಲ್ಲಿ ತಲ್ವಾರ್ ಹಿಡಿದು ಧಮ್ಕಿ- ವಿಡಿಯೋ ವೈರಲ್! ಹಣ ವಸೂಲಿಗೆ ಮುಂದಾದ ಕಿರಾತಕರ ವಿರುದ್ಧ ಕ್ರಮಕ್ಕೆ ಸೂಚನೆ
ತಲ್ವಾರ್ ಹಿಡಿದು ಧಮ್ಕಿ- ವಿಡಿಯೋ ವೈರಲ್! ಹಣ ವಸೂಲಿಗೆ ಮುಂದಾದ ಕಿರಾತಕರ ವಿರುದ್ಧ ಕ್ರಮ ಕೈಗೊಳ್ಳಲು ಕೆಜಿ ಹಳ್ಳಿ ಪೊಲೀಸರಿಗೆ ಸೂಚನೆ
TV9 Web
| Edited By: |

Updated on:Feb 21, 2022 | 12:04 PM

Share

ಬೆಂಗಳೂರು: ತಮ್ಮ ಮನೆ, ಕುಟುಂಬ ಎಲ್ಲವನ್ನೂ ಬಿಟ್ಟು ಬದುಕು ಕಟ್ಟಿಕೊಳ್ಳಲು ಹಳ್ಳಿಗಳಿಂದ ಲಕ್ಷಾಂತರ ಜನರು ಬೆಂಗಳೂರಿಗೆ ಬರುತ್ತಾರೆ. ಆದ್ರೆ ಈ ಮಹಾನಗರ ಜೀವನಕ್ಕೆ ಎಷ್ಟು ಸೇಫ್ ಎಂಬ ಪ್ರಶ್ನೆ ಎದ್ದಿದೆ. ಗಾಂಜಾ, ಡ್ರಗ್ಸ್, ಗನ್ ಮಾಫಿಯಾದಂತಹ ತಲೆ ಇತ್ತಿರುವ ಜಾಲದ ನಡುವೆ ಮತ್ತೊಂದು ಬೆಚ್ಚಿ ಬೀಳಿಸುವ ಹಾಗೂ ಜನರಲ್ಲಿ ಭಯ ಹುಟ್ಟಿಸಿರುವಂತಹ ಘಟನೆ ನಗರದಲ್ಲಿ ನಡೆಯುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಕಾಟ ಹೆಚ್ಚಾಗಿದ್ದು ತಲ್ವಾರ್ ಹಿಡಿದು ಅಂಗಡಿಗಳಲ್ಲಿ ಹಣ ವಸೂಲಿ ಮಾಡುವ ಖದೀಮರಿಂದ ಜನಕ್ಕೆ ಹೆದರಿಗೆ ಶುರುವಾಗಿದೆ. ಪುಡಿ ರೌಡಿಗಳ ಅಟ್ಟಹಾಸ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಿನಿಮಾಗಳಲ್ಲಿ ಪುಡಿ ರೌಡಿಗಳು ಲಾಂಗ್ ಹಿಡಿದು ಜನರ ಬಳಿ ಹಣ ಮಸೂಲಿ ಮಾಡುವಂತಯೇ ನಗರದಲ್ಲೂ ಘಟನೆಯೊಂದು ನಡೆದಿದೆ. ಸಿನಿಮೀಯ ರೀತಿಯಲ್ಲೇ ಕೆಲ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಜನರ ಬಳಿ ಲೂಟಿಗೆ ಮುಂದಾಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು ಜನರಲ್ಲಿ ಆತಂಕ ಸೃಷ್ಟಿ ಆಗಿದೆ. ಜನನಿಬಿಡ ಪ್ರದೇಶದ ಅಂಗಡಿಗೆ ತಲ್ವರ್ ಜೊತೆ ಎಂಟ್ರಿ ಕೊಟ್ಟು ಹಣಕೊಡುವಂತೆ ಧಮ್ಕಿ ಹಾಕಿ ಹೆದರಿಸುವ ವಿಡಿಯೋ ಜನರಲ್ಲಿ ನಡುಕ ಹುಟ್ಟಿಸಿದೆ. ಪುಂಡರು ಪೊಲೀಸರ ಭಯವಿಲ್ಲದೆ ರಸ್ತೆಗಳಲ್ಲಿ‌ ದರ್ಬಾರ್ ಮಾಡುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋದಲ್ಲಿ, ಕೆಜಿ ಹಳ್ಳಿಯ 7ನೇ ಕ್ರಾಸ್ನಲ್ಲಿ‌ ಪುಂಡರು ಅಂಗಡಿಯೊಂದಕ್ಕೆ ನುಗ್ಗಿ ಮಾರಕಾಸ್ತ್ರ ತೋರಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಹಣ ಕೊಡದಿದ್ದರೆ ಕೊಲೆ ಮಾಡೋದಾಗಿ ಅಂಗಡಿ‌ಯವನಿಗೆ ಬೆದರಿಕೆ ಹಾಕಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯರು ಟ್ವಿಟರ್ನಲ್ಲಿ‌ ಬೆಂಗಳೂರು ಸಿಟಿ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡುತ್ತಿದ್ದಾರೆ. ಅಂಗಡಿಯವನಿಗೆ ಬೆದರಿಸಿ ಮತ್ತೊಬ್ಬನನ್ನ ಅಟ್ಟಿಸಿಕೊಂಡು ಹೋಗುತ್ತಿರುವ ವಿಡಿಯೋ ಹಾಕಿ ಈ ಬಗ್ಗೆ ತನಿಖೆ ನಡೆಸಲು ಟ್ವಿಟರ್ನಲ್ಲೇ ಹಿರಿಯ ಅಧಿಕಾರಿಗಳು ಕೆಜಿ ಹಳ್ಳಿ‌ ಪೊಲೀಸ್ ಠಾಣೆಗೆ ಸೂಚನೆ ನೀಡಿದ್ದಾರೆ. ಕೆಜಿ ಹಳ್ಳಿ ಪೊಲೀಸರು ವಿಡಿಯೋ ಕುರಿತು ಪರಿಶೀಲನೆ‌ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಶಕುಂತಲೆ ಅವತಾರದಲ್ಲಿ ಸಮಂತಾ; ‘ಶಾಕುಂತಲಂ’ ಫಸ್ಟ್​ ಲುಕ್​ ಪೋಸ್ಟರ್​ ಕಂಡು ಫ್ಯಾನ್ಸ್​ ಫಿದಾ

ವ್ಯಕ್ತಿ ನುಡಿಸಿದ ಬಾಂಜೋ ನಾದಕ್ಕೆ ಕಿವಿಯಾಡಿಸಿದ ನರಿ; ವಿಡಿಯೋ ಕಂಡು ಅಚ್ಚರಿಗೊಂಡ ನೆಟ್ಟಿಗರು

Published On - 12:04 pm, Mon, 21 February 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?