AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ; ಬೈಕ್​ನಲ್ಲಿ ಬಂದವರಿಂದ ಮನೆ ಮುಂದೆ ನಿಲ್ಲಿಸಿದ್ದ 17 ಕಾರಿನ ಗಾಜುಗಳು ಪುಡಿ ಪುಡಿ

ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮನೆ ಮುಂದೆ ನಿಂತಿದ್ದ ಕಾರ್ಗಳ ಗ್ಲಾಸ್ ಒಡೆದು ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಬೈಕ್ ಮೇಲೆ ಬಂದ ಮೂವರು ಕಿಡಿಗೇಡಿಗಳು 17 ಕ್ಕೂ ಅಧಿಕ ಕಾರ್ಗಳ ಫ್ರೇಂಟ್ ಗ್ಲಾಸ್ ಹಾಗೂ ಸೈಡ್ ಗ್ಲಾಸ್‌ ಒಡೆದು ಪುಡಿ ಪುಡಿ ಮಾಡಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ; ಬೈಕ್​ನಲ್ಲಿ ಬಂದವರಿಂದ ಮನೆ ಮುಂದೆ ನಿಲ್ಲಿಸಿದ್ದ 17 ಕಾರಿನ ಗಾಜುಗಳು ಪುಡಿ ಪುಡಿ
ಕಾರ್​ ಗ್ಲಾಸ್​ ಪುಡಿ ಮಾಡಿದ ವಿದ್ಯಾರ್ಥಿಗಳ ಬಂಧನ
TV9 Web
| Updated By: ಆಯೇಷಾ ಬಾನು|

Updated on:Sep 24, 2021 | 12:30 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಬೆಂಗಳೂರಿನ R.R.ನಗರದ ಕೃಷ್ಣಾ ಗಾರ್ಡನ್‌ನಲ್ಲಿ ಮನೆ ಮುಂದೆ ನಿಲ್ಲಿಸಿದ್ದ 17 ಕಾರಿನ ಗಾಜುಗಳನ್ನು ಒಡೆದು ಪುಡಿ ಪುಡಿ ಮಾಡಿದ್ದಾರೆ.

ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮನೆ ಮುಂದೆ ನಿಂತಿದ್ದ ಕಾರ್ಗಳ ಗ್ಲಾಸ್ ಒಡೆದು ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಬೈಕ್ ಮೇಲೆ ಬಂದ ಮೂವರು ಕಿಡಿಗೇಡಿಗಳು 17 ಕ್ಕೂ ಅಧಿಕ ಕಾರ್ಗಳ ಫ್ರೇಂಟ್ ಗ್ಲಾಸ್ ಹಾಗೂ ಸೈಡ್ ಗ್ಲಾಸ್‌ ಒಡೆದು ಪುಡಿ ಪುಡಿ ಮಾಡಿದ್ದಾರೆ. ಕಿಡಿಗೇಡಿಗಳ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೇರೆಯಾಗಿದೆ.

ಇನ್ನು ಜುಲೈ ತಿಂಗಳಲ್ಲಿ ಇದೇ ರೀತಿಯ ಘಟನೆಯೊಂದು ನಡೆದಿತ್ತು. ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ ನಿವಾಸಿ ಸತೀಶ್ (26) ಎಂಬಾತ ಕುಡಿದ ಮತ್ತಿನಲ್ಲಿ ಕಂಡ ಕಂಡ ಕಾರ್​ಗಳ ಗಾಜು ಹೊಡೆದು ಪುಂಡಾಟ ಮೆರೆದಿದ್ದ. ಕುಡಿದ ಮತ್ತಿನಲ್ಲಿ ಮಹಾಲಕ್ಷ್ಮೀ ಲೇಔಟ್ನಲ್ಲಿ ಮತ್ತು ಬಸವೇಶ್ವರನಗರದಲ್ಲಿ 5 ಕಾರುಗಳನ್ನು ಜಖಂಗೊಳಿಸಿದ್ದ. ಕುಡಿದ ಮತ್ತಿನಲ್ಲಿ ಬೈಕ್ನಲ್ಲಿ ಬಂದು ಕೃತ್ಯ ಎಸಗಿದ್ದ.

ಮನೆಗಳ ಮುಂದೆ ರಸ್ತೆ ಬದಿ ನಿಲ್ಲಿಸಿದ್ದ ಕಾರುಗಳ ಗಾಜನ್ನು ದೊಣ್ಣೆಯಿಂದ ಹೊಡೆದು ಭೀಕರವಾಗಿ ವರ್ತಿಸಿದ್ದ. ಘಟನೆ ಬಳಿಕ ತಲಾಶ್ ಶುರು ಮಾಡಿದ್ದ ಬಸವೇಶ್ವರನಗರ ಪೊಲೀಸರು ಆರೋಪಿ ಸತೀಶ್ನನ್ನು ಬಂಧಿಸಿದ್ದರು.

ಇದನ್ನೂ ಓದಿ: ಮೈಸೂರಿನಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು; ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ದೇವಸ್ಥಾನದಲ್ಲೇ ಮಹಿಳೆ ಜೊತೆ ಅಸಭ್ಯ ವರ್ತನೆ, ಪ್ರಶ್ನಿಸಿದಕ್ಕೆ ಪತಿ ಕೈ ಬೆರಳು ಮುರಿದು ಹಲ್ಲೆ.. ಕಿಡಿಗೇಡಿಗಳ ಕೃತ್ಯ ಕಂಡೂ ಕಾಣದಂತೆ ನಿಂತ ಭಕ್ತರು

Published On - 12:29 pm, Fri, 24 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ