AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರ ಹಾಕಿಸಿಕೊಳ್ಳುವ ನೆಪದಲ್ಲಿ ಮನೆಗೆ ನುಗ್ಗಿ ವೃದ್ದೆಯ ಕತ್ತುಕೊಯ್ದು ಚಿನ್ನದ ಸರ ಎಗರಿಸಿದ ಖದೀಮ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪಟ್ಟಣದ ಲಕ್ಷ್ಮೀ ಚಿತ್ರಮಂದಿರ ರಸ್ತೆಯ ಮನೆಯೊಂದರಲ್ಲಿ ಭಯಾನಕ ಘಟನೆ ನಡೆದಿದೆ. ಮಂತ್ರ ಹಾಕಿಸಿಕೊಳ್ಳುವ ನೆಪದಲ್ಲಿ ಬೆಳ್ಳಂ ಬೆಳಿಗ್ಗೆ ಮನೆಗೆ ನುಗ್ಗಿದ ಕಿರಾತಕ ವೃದ್ದೆಯ ಕತ್ತುಕೊಯ್ದು ಚಿನ್ನದ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ. ಘಟನೆಯಲ್ಲಿ ವೃದ್ಧೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂತ್ರ ಹಾಕಿಸಿಕೊಳ್ಳುವ ನೆಪದಲ್ಲಿ ಮನೆಗೆ ನುಗ್ಗಿ ವೃದ್ದೆಯ ಕತ್ತುಕೊಯ್ದು ಚಿನ್ನದ ಸರ ಎಗರಿಸಿದ ಖದೀಮ
ಘಟನೆ ನಡೆದ ಸ್ಥಳ
ರಾಮು, ಆನೇಕಲ್​
| Edited By: |

Updated on: Nov 20, 2023 | 12:55 PM

Share

ಆನೇಕಲ್, ನ.20: ಮಂತ್ರ ಹಾಕಿಸಿಕೊಳ್ಳುವ ನೆಪದಲ್ಲಿ ಬೆಳ್ಳಂ ಬೆಳಿಗ್ಗೆ ಮನೆಗೆ ನುಗ್ಗಿದ ಕಿರಾತಕ ವೃದ್ದೆಯ ಕತ್ತುಕೊಯ್ದು ಚಿನ್ನದ ಸರ ಕದ್ದೊಯ್ದ (Gold Chain) ಭಯಾನಕ ಘಟನೆ ಆನೇಕಲ್​ನಲ್ಲಿ (Anekal) ನಡೆದಿದೆ. ವೃದ್ದೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯಿಂದ ಇಡೀ ಆನೇಕಲ್​ನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪಟ್ಟಣದ ಲಕ್ಷ್ಮೀ ಚಿತ್ರಮಂದಿರ ರಸ್ತೆಯಲ್ಲಿ ಘಟನೆ ನಡೆದಿದೆ.

ವೃದ್ದೆ ಅಕ್ಕಯ್ಯಮ್ಮ ಹಾಗೂ ಪತಿ ನಾರಾಯಾಣಾಚಾರಿ ಇಬ್ಬರೂ ಕಾಲು, ಕೈ ಉಳುಕಿದೆ ಮಂತ್ರ ಹಾಕುತ್ತಿದ್ದರು. ಹೀಗಾಗಿ ಮಂತ್ರ ಹಾಕಿಸಿಕೊಳ್ಳುವ ನೆಪದಲ್ಲಿ ಬೆಳಿಗ್ಗೆ 8.30 ರ ಸುಮಾರಿಗೆ ಮನೆಗೆ ನುಗ್ಗಿದ ದುಷ್ಕರ್ಮಿ ಅಕ್ಕಯ್ಯಮ್ಮ ಎಂಬ ವೃದ್ದೆಯ ಕತ್ತು ಕೊಯ್ದು ಚಿನ್ನದ ಸರ ಎಗರಿಸಿದ್ದಾನೆ.

ಕಳೆದ ಶನಿವಾರ ವೃದ್ದರ ಮನೆಗೆ ಉಳುಕು ಮಂತ್ರ ಹಾಕಿ ಎಂದು ಬಂದಿದ್ದ ಕಳ್ಳ ಕಾಲು ಉಳುಕಿದೆ ಎಂದು ಮಂತ್ರ ಹಾಕಿಸಿಕೊಂಡು 50 ರೂಪಾಯಿ ಕೊಟ್ಟು ಹೋಗಿದ್ದ. ಮತ್ತೆ ಇಂದು ಬೆಳಿಗ್ಗೆ 8.30 ರ ಸುಮಾರಿಗೆ ಮನೆಗೆ ಬಂದು ನೀವು ಮಂತ್ರ ಹಾಕಿದ್ದಕ್ಕೆ ನಮ್ಮ ಮಗು ಸಾವಿಗೀಡಾಗಿದೆ ಎಂದು ಬೆದರಿಸಿದ್ದ. ಏಕಾಏಕಿ ಮನೆಯ ಬಾಗಿಲು ಹಾಕಿ ಮನೆಯಲ್ಲಿನ ಒಡವೆ ಕೊಡಿ ಎಂದು ಬೆದರಿಕೆ ಹಾಕಿದ್ದ. ವೃದ್ದೆ ಸರ ನೀಡಲು ನಿರಾಕರಿಸುತ್ತಿದ್ದಂತೆ ಮನೆಯಲ್ಲಿದ್ದ ಚಾಕುವಿನಿಂದ ಕತ್ತು ಕೊಯ್ದು ಚಿನ್ನದ ಮಾಂಗಲ್ಯ ಸರ ಕದ್ದು ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಕಿಡ್ನಾಪರ್ಸ್​​ಗೆ ಸಾಥ್​​​​ ನೀಡಿದ್ದ ಪ್ರೋಬೇಶನರಿ ಪಿಎಸ್ಐ ಅರೆಸ್ಟ್​

ಕುಡಗೋಲಿನ ಸಮೇತವಾಗಿ ಹೊಂಚು ಹಾಕಿ ಬಂದಿದ್ದ ಕಳ್ಳ‌ ಸರ ಕದ್ದಿದ್ದು ಪತ್ನಿಯ ಮೇಲಿನ ಹಲ್ಲೆ ತಡೆಯಲು ಮುಂದಾದ ವೃದ್ಧನ ಮೇಲೂ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ವೃದ್ಧ ನಾರಾಯಣಾಚಾರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಾರಾಯಣಾಚಾರಿ ಅವರು ಕೂಗಾಡಿಕೊಂಡಿದ್ದು ಚೀರಾಟ ಕೇಳಿ ಅಕ್ಕಪಕ್ಕದ ಮನೆಯ ನಿವಾಸಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವೃದ್ಧೆಯನ್ನು ಆನೇಕಲ್ ಪಟ್ಟಣದ ವಿಜಯ್ ನರ್ಸಿಂಗ್ ಹೋಂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ