ಮಂತ್ರ ಹಾಕಿಸಿಕೊಳ್ಳುವ ನೆಪದಲ್ಲಿ ಮನೆಗೆ ನುಗ್ಗಿ ವೃದ್ದೆಯ ಕತ್ತುಕೊಯ್ದು ಚಿನ್ನದ ಸರ ಎಗರಿಸಿದ ಖದೀಮ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪಟ್ಟಣದ ಲಕ್ಷ್ಮೀ ಚಿತ್ರಮಂದಿರ ರಸ್ತೆಯ ಮನೆಯೊಂದರಲ್ಲಿ ಭಯಾನಕ ಘಟನೆ ನಡೆದಿದೆ. ಮಂತ್ರ ಹಾಕಿಸಿಕೊಳ್ಳುವ ನೆಪದಲ್ಲಿ ಬೆಳ್ಳಂ ಬೆಳಿಗ್ಗೆ ಮನೆಗೆ ನುಗ್ಗಿದ ಕಿರಾತಕ ವೃದ್ದೆಯ ಕತ್ತುಕೊಯ್ದು ಚಿನ್ನದ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ. ಘಟನೆಯಲ್ಲಿ ವೃದ್ಧೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂತ್ರ ಹಾಕಿಸಿಕೊಳ್ಳುವ ನೆಪದಲ್ಲಿ ಮನೆಗೆ ನುಗ್ಗಿ ವೃದ್ದೆಯ ಕತ್ತುಕೊಯ್ದು ಚಿನ್ನದ ಸರ ಎಗರಿಸಿದ ಖದೀಮ
ಘಟನೆ ನಡೆದ ಸ್ಥಳ
Follow us
| Updated By: ಆಯೇಷಾ ಬಾನು

Updated on: Nov 20, 2023 | 12:55 PM

ಆನೇಕಲ್, ನ.20: ಮಂತ್ರ ಹಾಕಿಸಿಕೊಳ್ಳುವ ನೆಪದಲ್ಲಿ ಬೆಳ್ಳಂ ಬೆಳಿಗ್ಗೆ ಮನೆಗೆ ನುಗ್ಗಿದ ಕಿರಾತಕ ವೃದ್ದೆಯ ಕತ್ತುಕೊಯ್ದು ಚಿನ್ನದ ಸರ ಕದ್ದೊಯ್ದ (Gold Chain) ಭಯಾನಕ ಘಟನೆ ಆನೇಕಲ್​ನಲ್ಲಿ (Anekal) ನಡೆದಿದೆ. ವೃದ್ದೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯಿಂದ ಇಡೀ ಆನೇಕಲ್​ನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪಟ್ಟಣದ ಲಕ್ಷ್ಮೀ ಚಿತ್ರಮಂದಿರ ರಸ್ತೆಯಲ್ಲಿ ಘಟನೆ ನಡೆದಿದೆ.

ವೃದ್ದೆ ಅಕ್ಕಯ್ಯಮ್ಮ ಹಾಗೂ ಪತಿ ನಾರಾಯಾಣಾಚಾರಿ ಇಬ್ಬರೂ ಕಾಲು, ಕೈ ಉಳುಕಿದೆ ಮಂತ್ರ ಹಾಕುತ್ತಿದ್ದರು. ಹೀಗಾಗಿ ಮಂತ್ರ ಹಾಕಿಸಿಕೊಳ್ಳುವ ನೆಪದಲ್ಲಿ ಬೆಳಿಗ್ಗೆ 8.30 ರ ಸುಮಾರಿಗೆ ಮನೆಗೆ ನುಗ್ಗಿದ ದುಷ್ಕರ್ಮಿ ಅಕ್ಕಯ್ಯಮ್ಮ ಎಂಬ ವೃದ್ದೆಯ ಕತ್ತು ಕೊಯ್ದು ಚಿನ್ನದ ಸರ ಎಗರಿಸಿದ್ದಾನೆ.

ಕಳೆದ ಶನಿವಾರ ವೃದ್ದರ ಮನೆಗೆ ಉಳುಕು ಮಂತ್ರ ಹಾಕಿ ಎಂದು ಬಂದಿದ್ದ ಕಳ್ಳ ಕಾಲು ಉಳುಕಿದೆ ಎಂದು ಮಂತ್ರ ಹಾಕಿಸಿಕೊಂಡು 50 ರೂಪಾಯಿ ಕೊಟ್ಟು ಹೋಗಿದ್ದ. ಮತ್ತೆ ಇಂದು ಬೆಳಿಗ್ಗೆ 8.30 ರ ಸುಮಾರಿಗೆ ಮನೆಗೆ ಬಂದು ನೀವು ಮಂತ್ರ ಹಾಕಿದ್ದಕ್ಕೆ ನಮ್ಮ ಮಗು ಸಾವಿಗೀಡಾಗಿದೆ ಎಂದು ಬೆದರಿಸಿದ್ದ. ಏಕಾಏಕಿ ಮನೆಯ ಬಾಗಿಲು ಹಾಕಿ ಮನೆಯಲ್ಲಿನ ಒಡವೆ ಕೊಡಿ ಎಂದು ಬೆದರಿಕೆ ಹಾಕಿದ್ದ. ವೃದ್ದೆ ಸರ ನೀಡಲು ನಿರಾಕರಿಸುತ್ತಿದ್ದಂತೆ ಮನೆಯಲ್ಲಿದ್ದ ಚಾಕುವಿನಿಂದ ಕತ್ತು ಕೊಯ್ದು ಚಿನ್ನದ ಮಾಂಗಲ್ಯ ಸರ ಕದ್ದು ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಕಿಡ್ನಾಪರ್ಸ್​​ಗೆ ಸಾಥ್​​​​ ನೀಡಿದ್ದ ಪ್ರೋಬೇಶನರಿ ಪಿಎಸ್ಐ ಅರೆಸ್ಟ್​

ಕುಡಗೋಲಿನ ಸಮೇತವಾಗಿ ಹೊಂಚು ಹಾಕಿ ಬಂದಿದ್ದ ಕಳ್ಳ‌ ಸರ ಕದ್ದಿದ್ದು ಪತ್ನಿಯ ಮೇಲಿನ ಹಲ್ಲೆ ತಡೆಯಲು ಮುಂದಾದ ವೃದ್ಧನ ಮೇಲೂ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ವೃದ್ಧ ನಾರಾಯಣಾಚಾರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಾರಾಯಣಾಚಾರಿ ಅವರು ಕೂಗಾಡಿಕೊಂಡಿದ್ದು ಚೀರಾಟ ಕೇಳಿ ಅಕ್ಕಪಕ್ಕದ ಮನೆಯ ನಿವಾಸಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವೃದ್ಧೆಯನ್ನು ಆನೇಕಲ್ ಪಟ್ಟಣದ ವಿಜಯ್ ನರ್ಸಿಂಗ್ ಹೋಂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ