AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಖುಷಿ ಖುಷಿಯಿಂದ ಮನೆಯಿಂದ ಆಚೆ ಬಂದ ರವಿಯನ್ನು ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ತಪ್ಪಿಸಿಕೊಳ್ಳೋ ಭರದಲ್ಲಿ ಓಡಿದ ರವಿಯನ್ನ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದಾರೆ. ಕೊಚ್ಚಿ ಕೊಲೆ ಮಾಡಿ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾರೆ.

Bengaluru News: ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on:May 25, 2023 | 7:25 AM

Share

ಬೆಂಗಳೂರು: ಲಗ್ಗೆರೆ ಬಳಿಕ ಚೌಡೇಶ್ವರಿನಗರದ ಹಳ್ಳಿರುಚಿ ಹೋಟೆಲ್ ಬಳಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆಯಾಗಿದೆ(Congress Worker Murder). ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿರವಿ(42) ಎಂಬುವವರನ್ನು ಬೈಕ್​ಗಳಲ್ಲಿ ಬಂದ ಐದಾರು ದುಷ್ಕರ್ಮಿಗಳು ಹತ್ಯೆ ಮಾಡಿ ಎಸ್ಕೇಪ್ ಅಗಿದ್ದಾರೆ. CMH​ ಬಾರ್ ಬಳಿಯಿಂದ ರವಿಯನ್ನು ಅಟ್ಟಾಡಿಸಿಕೊಂಡು ಹಳ್ಳಿರುಚಿ ಹೊಟೇಲ್ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಲಾಗಿದೆ(Murder).

ಏರಿಯಾದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಹರಿದು ದರ್ಪ

ರವಿ ಕೊಲೆ ಮಾಡಿದ ಹಂತಕರು ಕೊಲೆಗೂ ಮುನ್ನ ಏರಿಯಾದಲ್ಲಿ ಹಾಕಿದ್ದ ರವಿಕುಮಾರ್ ಅವರ ಫ್ಲೆಕ್ಸ್ ಹರಿದು ಹಾಕಿದ್ದಾರೆ. ಬಳಿಕ ರವಿ ಮನೆ ಮುಂದೆ ಬಂದು ಕಾದು ಕುಳಿತಿದ್ದರು. ಮೇ 24ರಂದು ಕಾಂಗ್ರೆಸ್ ಮುಖಂಡ ಹಾಗೂ ಫೈನಾನ್ಷಿಯರ್ ಕೃಷ್ಣ ಮೂರ್ತಿ ಹುಟ್ಟುಹಬ್ಬ ಇತ್ತು. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ನೂರಾರು ಕಾರ್ಯಕರ್ತರು ಆಗಮಿಸಿದ್ದರು. ಇದೇ ಹುಟ್ಟುಹಬ್ಬಕ್ಕೆ ಹಾಜರಾಗಲು ರವಿ ಖುಷಿ ಖುಷಿಯಿಂದ ಮನೆಯಿಂದ ಆಚೆ ಬಂದಾಗ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ತಪ್ಪಿಸಿಕೊಳ್ಳೋ ಭರದಲ್ಲಿ ಓಡಿದ ರವಿಯನ್ನ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದಾರೆ. ಕೊಚ್ಚಿ ಕೊಲೆ ಮಾಡಿ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾರೆ. ಇನ್ನು ಕುರಿ, ಮೇಕೆ ಸಾಕಾಣಿಕೆ ಮಾಡಿಕೊಂಡಿದ್ದ ರವಿ ಮೇಲೆ ಈ ಹಿಂದೆಯೂ ಕೂಡ ಹಲವು ಕೇಸ್ ಗಳಿವೆ ಎಂದು ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ಹಂಕತರ ಪತ್ತೆಗೆ ಬಲೆ ಬೀಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: BJP ಕಾರ್ಯಕರ್ತನ ಮೇಲೆ ಕೈ ಮುಖಂಡರಿಂದ ಹಲ್ಲೆ ಆರೋಪ: ಐಸಿಯುನಲ್ಲಿ ಚಿಕಿತ್ಸೆ</a

ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ಹಲ್ಲೆ

ಮಂಗಳೂರು: ಭಜರಂಗದಳ (Bajrang Dal) ಮತ್ತು ಬಿಜೆಪಿ (BJP) ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಮಾಣಿ ಎಂಬಲ್ಲಿ ಬುಧವಾರ ನಡೆದಿದೆ. ದಾಳಿ ನಡೆಸಿದವರು ಕಾಂಗ್ರೆಸ್ (Congress) ಕಾರ್ಯಕರ್ತರು ಎಂಬ ಆರೋಪ ಕೇಳಿಬಂದಿದೆ. ಚುನಾವಣಾ ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರ ಈ ದಾಳಿ ನಡೆದಿರುವ ಶಂಕೆ ಇದೆ ಎಂದು ಹೇಳಲಾಗುತ್ತಿದೆ. ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಣಿ ಜಂಕ್ಷನ್​ ಬಳಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ಯುವಕರ ಮೇಲೆ ತಂಡವೊಂದು ದಾಳಿ ನಡೆಸಿದೆ. ಓಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್​​ಗೆ ಡಿಕ್ಕಿ ಹೊಡೆಸಿ ನಂತರ ತಲವಾರಿನಿಂದ ಹಲ್ಲೆ ನಡೆಸಿದೆ. ಮಹೇಂದ್ರ ಹಾಗೂ ಪ್ರಶಾಂತ್ ನಾಯ್ಕ್ ಅವರ ಕಾಲು ಮತ್ತು ತಲೆಯ ಭಾಗಕ್ಕೆ ಗಾಯವಾಗಿದೆ. ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಹಾಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ‌ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ವಿಟ್ಲ ಪೋಲೀಸರ ತಂಡ ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:59 am, Thu, 25 May 23

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?