AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MP, MLA ಹೆಸರೇಳಿ ಥೇಟ್ ಸಿನಿಮಾ ಸ್ಟೈಲ್​ನಲ್ಲಿ ಯುವಕನ ಕಿಡ್ನ್ಯಾಪ್; ಇಬ್ಬರು ಅರೆಸ್ಟ್

ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಜೂನ್ 16ರಂದು ನಡೆದ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿ ಹಲಸೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ತನಿಖೆ ವೇಳೆ ಕಿಡ್ನಾಪ್ ಮಾಡಿದ ಅಸಲಿ ಸತ್ಯ ಬಯಲಾಗಿದೆ. ಕೊಟ್ಟ ಹಣ ಬರಲಿಲ್ಲ ಅನ್ನೋ ಕೋಪಕ್ಕೆ ಕಿಡ್ನಾಪ್ ಮಾಡಿ ಹಲ್ಲೆ ನಡೆಸಿ ಹಣ ವಸೂಲಿ ಮಾಡಲು ಯತ್ನಿಸಲಾಗಿದೆ.

MP, MLA ಹೆಸರೇಳಿ ಥೇಟ್ ಸಿನಿಮಾ ಸ್ಟೈಲ್​ನಲ್ಲಿ ಯುವಕನ ಕಿಡ್ನ್ಯಾಪ್; ಇಬ್ಬರು ಅರೆಸ್ಟ್
ಸಾಂದರ್ಭಿಕ ಚಿತ್ರ
Shivaprasad B
| Edited By: |

Updated on: Jun 30, 2024 | 1:15 PM

Share

ಬೆಂಗಳೂರು, ಜೂನ್.30: ಕೆಲ ದಿನಗಳ ಹಿಂದೆ ಥೇಟ್ ಸಿನಿಮಾ ಸ್ಟೈಲ್​ನಲ್ಲಿ ಎಂ.ಜಿ. ರಸ್ತೆಯಲ್ಲಿ ನಡೆದ ಕಿಡ್ನಾಪ್ (Kidnap)​ ಕೇಸ್ ಸಂಬಂಧ ಹಲಸೂರು ಠಾಣೆ ಪೊಲೀಸರು (Halasuru Police Station) ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಜೂನ್ 16 ರಂದು MP, MLA ಹೆಸರೇಳಿ ಯುವಕನ ಕಿಡ್ನಾಪ್ ಮಾಡಿದ್ದರು. ಅಪಹರಣ ಬಳಿಕ ಯುವಕನ ಕತ್ತಿನ ಮೇಲೆ ಚಾಕು ಇಟ್ಟು ಐದು ಕೋಟಿ ಹಣ, ಬಿಟ್ ಕಾಯಿನ್​ಗಳಿಗೆ ಆರೋಪಿಗಳು ಬೇಡಿಕೆ ಇಟ್ಟಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಲಾಗಿದೆ. ದೇವರ ಕೊಂಡ ಶಿವಕೃಷ್ಣಾಚಾರಿ ಬಂಧಿತ ಆರೋಪಿ.

ಐಷಾರಾಮಿ ಜೀವನ ನಡೆಸುತ್ತಿದ್ದ ರಾಜು ಎಂಬ ಯುವಕನನ್ನು ಆಂಧ್ರ ಮೂಲದ ಆರೋಪಿಗಳ ಗ್ಯಾಂಗ್ ಕಿಡ್ನಾಪ್ ಮಾಡಿತ್ತು. ರಾಜು ಅಲಿಯಾಸ್ ಅಜ್ಮೀರ ರಾಜು ಸ್ಟಾಕ್ ಮಾರ್ಕೆಟ್​ನಲ್ಲಿ ಇನ್ವೆಸ್ಟ್ ಮಾಡಿದ್ದ. ದುಬೈ ಲೈಫ್, ಐಷಾರಾಮಿ ಕಾರು, ಹಿಂದೆ ಹುಡುಗರು, ಪಾರ್ಶ್ ಲೈಫ್ (ವಿಲಾಸಿ ಜೀವನ) ನಡೆಸುತ್ತಿದ್ದ. ಅಲ್ಲದೆ ಕ್ರಿಕೆಟರ್​ಗಳ ಜೊತೆ ಫೋಟೋಸ್​ಗಳನ್ನೂ ತೆಗೆಸಿಕೊಂಡಿದ್ದ. ಹೀಗಾಗಿ ಆರೋಪಿಗಳ ಗ್ಯಾಂಗ್ ಈತನೊಬ್ಬ ಶ್ರೀಮಂತನೆಂದು ಭಾವಿಸಿ ಯುವಕನ ಕಿಡ್ನಾಪ್ ಮಾಡಿತ್ತು. ಕಿಡ್ನಾಪ್ ಮಾಡಿ ತೆಲಂಗಾಣಕ್ಕೆ ಕರೆದೊಯ್ದು ಫಾರ್ಮ್ ಹೌಸ್​ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದರು.

ಬಳಿಕ ಕತ್ತಿನ ಮೇಲೆ ಚಾಕು ಇಟ್ಟು ಬೆದರಿಸಿ ಐದು ಕೋಟಿ ಹಣ, ಬಿಟ್ ಕಾಯಿನ್​ಗೆ ಬೇಡಿಕೆ ಇಟ್ಟಿದ್ದರು. ಇಂಟರ್ ನ್ಯಾಷನಲ್ ಅಕೌಂಟ್​ನಲ್ಲಿರುವ ಹಣ ಟ್ರಾನ್ಸ್‌ಫರ್ ಮಾಡುವಂತೆ ಬೆದರಿಸಿದ್ದರು. ಇನ್ನು ಇತ್ತ ರಾಜು ಸ್ನೇಹಿತ ಕಿಡ್ನಾಪ್ ಬಗ್ಗೆ ಹಲಸೂರು ಠಾಣೆಗೆ ದೂರು ನೀಡಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಕಾಲಿನ ಗಾಯಕ್ಕೆ ಆಸ್ಪತ್ರೆಗೆ ದಾಖಲಾದ ಬಾಲಕನ ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು

ಕಿಡ್ನಾಪ್ ಆದ ಯುವಕನ ಮೇಲೂ ಇದೆ ಪ್ರಕರಣ, ತನಿಖೆ ವೇಳೆ ಸತ್ಯ ಬಯಲು

ಕಿಡ್ನಾಪ್ ಆಗಿರುವ ರಾಜು ವಿರುದ್ಧ ತೆಲಂಗಾಣದಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ತೆಲಂಗಾಣದ ಸಿಸಿಎಸ್ ನಲ್ಲಿ ಕಿಡ್ನಾಪ್ ಆಗಿದ್ದ ರಾಜು ವಿರುದ್ಧ ಎಫ್​ಐಆರ್ ದಾಖಲಾಗಿದೆ. ರಾಜುವನ್ನ ಸಿಸಿಎಸ್ ಪೊಲೀಸರು ಮುಂಬೈನಲ್ಲಿ ಬಂಧಿಸಿ ಕರೆ ತಂದಿದ್ದರು. ಆ ಬಳಿಕ ವಂಚನೆ ಕೇಸ್ ನಲ್ಲಿ ಜಾಮೀನು ಪಡೆದು ರಾಜು ಬೆಂಗಳೂರಿನಲ್ಲಿ ಬಂದು ವಾಸವಾಗಿದ್ದ. ಕಳೆದ ಆರು ತಿಂಗಳಿಂದ ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿನ ಹೋಟೆಲ್​ನಲ್ಲಿ ವಾಸವಾಗಿದ್ದ.

ಕಿಡ್ನಾಪ್ ಆಗಿರುವ ರಾಜು ಮೂಲತಃ ತೆಲಂಗಾಣದವನು. ತೆಲಂಗಾಣ ಮಾಜಿ ಮುಖ್ಯಮಂತ್ರಿ ಜಗನ್ ಹಾಗೂ ಸಹೋದರ ಅನಿಲ್ ಹೆಸರು ಬಳಿಸಿಕೊಂಡು ಕೆಲಸ ಕೊಡಿಸುವುದಾಗಿ ಹಲವರಿಂದ ಹಣ ಪಡೆದು ವಂಚನೆ ಮಾಡಿರುವ ಆರೋಪ ರಾಜು ವಿರುದ್ಧ ಕೇಳಿ ಬಂದಿದೆ. ಹಣ ಕೊಟ್ಟಿರುವಂತ ವ್ಯಕ್ತಿಗಳು ಪೊಲೀಸರಿಗೆ ದೂರು ಕೊಟ್ಟು ರಾಜು ಅರೆಸ್ಟ್ ಆಗಿದ್ದ. ತೆಲಂಗಾಣ ಪೊಲೀಸರ ಬಂಧನದ ಬಳಿಕ ಜಾಮೀನು ಪಡೆದು ಹೊರಬಂದು ಬೆಂಗಳೂರಿನಲ್ಲಿ 6 ತಿಂಗಳಿನಿಂದ ವಾಸವಿದ್ದ.

ಕೊಟ್ಟ ಹಣ ಬರಲಿಲ್ಲ ಅನ್ನೋ ಕೋಪಕ್ಕೆ ರಾಜು ಬೆಂಗಳೂರಿನಲ್ಲಿರುವ ವಿಚಾರ ತಿಳಿದು ಕಿಡ್ನಾಪ್ ಮಾಡಲಾಗಿದೆ ಎಂದು ತ‌ನಿಖೆಯ ವೇಳೆ ಕಾರಣ ರಿವೀಲ್ ಆಗಿದೆ. ಹಲಸೂರು ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಒದಲು ಇದರ ಮೇಲೆ ಕ್ಲಿಕ್ ಮಾಡಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​