AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪ್ರತಿಷ್ಠಿತ ​ಹೋಟೆಲ್​ಗೆ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರಿನಲ್ಲಿ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್​ ಬರುತ್ತಿದ್ದವು. ಈಗ ಬೆಂಗಳೂರಿನ ಐಷಾರಾಮಿ ಹೋಟೆಲ್​ಗಳಿಗೂ ಬಾಂಬ್ ಬೆದರಿಕೆ ಇ-ಮೇಲ್​ಗಳು ಬರುಲು ಶುರುವಾಗಿವೆ. ಈಗ ಮತ್ತೊಂದು ಬೆಂಗಳೂರಿನ ಐಬಿಎಸ್ ಹೋಟೆಲ್​ಗೆ ಬಾಂಬ್​ ಬೆದರಿಕೆ ಬಂದಿದೆ.

ಬೆಂಗಳೂರಿನ ಪ್ರತಿಷ್ಠಿತ ​ಹೋಟೆಲ್​ಗೆ ಬಾಂಬ್ ಬೆದರಿಕೆ ಸಂದೇಶ
ಐಬಿಎಸ್ ಹೋಟೆಲ್
Jagadisha B
| Edited By: |

Updated on: Nov 11, 2024 | 10:22 PM

Share

ಬೆಂಗಳೂರು, (ನವೆಂಬರ್ 11): ಬೆಂಗಳೂರಿನ ಐಬಿಎಸ್ ಹೋಟೆಲ್​ಗೆ ಬಾಂಬ್ ಬೆದರಿಕೆ ಬಂದಿದೆ. ರಾಜಾರಾಮ್ ಮೋಹನ್ ರಾಯ್ ರಸ್ತೆಯಲ್ಲಿರುವ ಐಬಿಎಸ್ ಹೋಟೆಲ್ ಮೇಲ್ ಐಡಿಗೆ ಅಪರಿಚಿತರಿಂದ ಬೆದರಿಕೆ ಸಂದೇಶ ಬಂದಿದೆ. ಇದನ್ನು ನೋಡಿ ನೋಡಿ ಹೋಟೆಲ್​ ಸಿಬ್ಬಂದಿ ಕೆಲ ಕಾಲ ಆತಂಕಗೊಂಡಿದ್ದು, ಕೂಡಲೇ ಸಂಪಂಗಿರಾಮನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶ್ವಾನ ದಳ, ಬಾಂಬ್ ಪತ್ತೆ ದಳ ದೌಡಾಯಿಸಿ ಹೋಟೆಲ್​ನಲ್ಲಿದ್ದ ಎಲ್ಲರನ್ನೂ ಹೊರಗೆ ಕಳುಹಿಸಿ ತಪಾಸಣೆ ನಡೆಸಿದರು.

ಇಂದು (ನವೆಂಬರ್ 11) ಸಂಜೆ 7 ಗಂಟೆ ಸುಮಾರಿಗೆ ಯಾವುದೇ ಹೋಟೆಲ್ ಹೆಸರು ಅಥವಾ ಸ್ಥಳ ಉಲ್ಲೇಖಿಸದೆ ಐಬಿಎಸ್ ಹೋಟೆಲ್ ಮೇಲ್ ಐಡಿಗೆ ಅಪರಿಚಿತರು ಬೆದರಿಕೆ ಸಂದೇಶ ಕಳುಹಿಸಿದ್ದು, ಯಾವುದೇ ಕ್ಷಣದಲ್ಲಿ ಸ್ಫೋಟವಾಗಬಹುದು ಎಂದು ಉಲ್ಲೇಖಿಸಿದ್ದಾರೆ. ಬಾಂಬ್ ಬೆದರಿಕೆ ಸಂದೇಶ ನೋಡಿ ಹೋಟೆಲ್ ಸಿಬ್ಬಂದಿ ಕೂಡಲೇ ಸಂಪಂಗಿರಾಮನಗರ  ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಶ್ವಾನ ದಳ, ಬಾಂಬ್ ಪತ್ತೆ ದಳ ಐಬಿಎಸ್ ಹೋಟೆಲ್​ನಲ್ಲಿ ತಪಾಸಣೆ ನಡೆಸಿದೆ. ಆದ್ರೆ, ಹೋಟೆಲ್​ನಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಖಾಸಗಿ ಹೋಟೆಲ್​​ಗೆ ಬಾಂಬ್ ಬೆದರಿಕೆ ಪತ್ರ: ಗ್ರಾಹಕರನ್ನು ಹೊರಕಳಿಸಿ ಪೊಲೀಸರಿಂದ ಪರಿಶೀಲನೆ

ಕಳೆದ ಸೆಪ್ಟೆಂಬರ್​ನಲ್ಲಿ ನಗರದ ತಾಜ್ ವೆಸ್ಟೆಂಡ್ ಹೋಟೆಲ್ ಗೆ ಇ ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದರು. ಇದು ನಗರದ ಲಕ್ಷುರಿ ಹೊಟೇಲ್‌ ಗಳಲ್ಲಿ ಒಂದಾಗಿದ್ದು, ರಾಜಕಾರಣಿಗಳು, ಕ್ರಿಕೆಟರ್ ಗಳು, ಸಿನೆಮಾ ತಾರೆಯರು ಆಗಾಗ ವಾಸ್ತವ್ಯ ಹೂಡುವ ಪ್ರತಿಷ್ಠಿತ ಹೋಟೆಲ್ ಆಗಿದೆ. ಮಾಹಿತಿ ಬಂದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಗೊತ್ತಾಯಿತು.

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸಂಸ್ಥೆಗಳು, ಶಾಲೆಗಳು, ಆಸ್ಪತ್ರೆಗಳು ಮತ್ತು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಮೇಲ್‌ಗಳನ್ನು ಕಳುಹಿಸುವ ಬೆದರಿಕೆ ಹೆಚ್ಚುತ್ತಿದೆ. ಈವರೆಗೆ ಬಂದಿರುವುದೆಲ್ಲ ನಕಲಿ ಎಂದು ಬಳಿಕ ತನಿಖೆಯಿಂದ ತಿಳಿದಿದೆ. ಆದರೂ ಕಳೆದ ಮಾರ್ಚ್ 1 ರಂದು ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದ ಬಳಿಕ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ. ಕಳೆದ ಮೇ ತಿಂಗಳಿನಲ್ಲಿ ಕೂಡ ನಗರದ ಕೆಲವು ಫೈವ್‌ ಸ್ಟಾರ್ ಹೊಟೇಲ್‌ ಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ