AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JCB Theft: ರಸ್ತೆ ಬದಿ ನಿಲ್ಲಿಸಿದ್ದ ದೈತ್ಯ ಜೆಸಿಬಿಯನ್ನೇ ಕದ್ದರು! ಕಳ್ಳನಿಗಾಗಿ ಹುಡುಕುತಿದಾರೆ ಪೊಲೀಸರು

ರಾಮಮೂರ್ತಿ ಎಂಬುವವರ ಒಡೆತನದಲ್ಲಿದ್ದ ಜೆಸಿಬಿ ಕಳ್ಳತನವಾಗಿದೆ ಎಂದು ಜನವರಿ 11 ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಚಾಲಕನಾದ ಲಕ್ಷ್ಮಣ್ ಎಂಬಾತ ಮಿಲ್ಕ್ ಕಾಲೋನಿಯ ರಸ್ತೆ ಬದಿ ಜೆಸಿಬಿ ನಿಲ್ಲಿಸಿ ಮನೆಗೆ ತೆರಳಿದ್ದ.

JCB Theft: ರಸ್ತೆ ಬದಿ ನಿಲ್ಲಿಸಿದ್ದ ದೈತ್ಯ ಜೆಸಿಬಿಯನ್ನೇ ಕದ್ದರು! ಕಳ್ಳನಿಗಾಗಿ ಹುಡುಕುತಿದಾರೆ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 17, 2022 | 12:32 PM

Share

ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಸೈಕಲ್, ಬೈಕ್, ಕಾರು ಕಳ್ಳತನವಾಗುವುದನ್ನು ನಾವು ಸಾಮಾನ್ಯವಾಗಿ ಕೇಳಿದ್ದೇವೆ. ಆದ್ರೆ ಇಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಜೆಸಿಬಿ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಬ್ರಹ್ಮಣ್ಯಪುರ ಬಳಿ ಇರುವ ಮಿಲ್ಕ್ ಕಾಲೋನಿ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಜೆಸಿಬಿ ಕಳವಾಗಿದೆ.

ರಾಮಮೂರ್ತಿ ಎಂಬುವವರ ಒಡೆತನದಲ್ಲಿದ್ದ ಜೆಸಿಬಿ ಕಳ್ಳತನವಾಗಿದೆ ಎಂದು ಜನವರಿ 11 ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಚಾಲಕನಾದ ಲಕ್ಷ್ಮಣ್ ಎಂಬಾತ ಮಿಲ್ಕ್ ಕಾಲೋನಿಯ ರಸ್ತೆ ಬದಿ ಜೆಸಿಬಿ ನಿಲ್ಲಿಸಿ ಮನೆಗೆ ತೆರಳಿದ್ದ. ಜನವರಿ 11 ರ ರಾತ್ರಿ 10 ಗಂಟೆಯವರೆಗೂ ಜೆಸಿಬಿ ಇದ್ದಜಾಗದಲ್ಲೇ ಇತ್ತು. ಆದರೆ ಬೆಳಗಿನ ಜಾವ 4.30ರ ಸಮಯದಲ್ಲಿ ಜೆಸಿಬಿ ನಾಪತ್ತೆಯಾಗಿತ್ತು. ಈ‌ ಹಿಂದೆ ಆಂಧ್ರದ ಪ್ರತಾಪ್ ರೆಡ್ಡಿ‌ ಎಂಬಾತನಿಂದ ರಾಮಮೂರ್ತಿ ಎಂಬುವವರು ಜೆಸಿಬಿಯನ್ನು ಖರೀದಿಸಿದ್ದರು. Ka-34-a-8075 ನಂಬರಿನ ಜೆಸಿಬಿ ಕಳ್ಳತನವಾಗಿದೆ.

ಆನೇಕಲ್ ಕ್ರೈಂ ಪೊಲೀಸರಿಗೆ ಕೊರೊನಾ ಆತಂಕ ಆನೇಕಲ್ ಭಾಗದ ಕ್ರೈಂ ಪೊಲೀಸರಿಗೆ ಕೊರೊನಾ ಆತಂಕ ಹೆಚ್ಚಾಗಿದೆ. ಕ್ರಿಮಿನಲ್ ಕೇಸ್ ತನಿಖೆಗೆ ಸುತ್ತಾಡುತ್ತಿದ್ದ ಪೊಲೀಸರಿಗೆ ಸಂಕಷ್ಟ ಎದುರಾಗಿದೆ. ಪೊಲೀಸರು ತೀವ್ರ ಜ್ವರ, ತಲೆನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಕ್ರೈಂ ಪ್ರಕರಣಗಳ ತನಿಖೆಗೆ ಪೊಲೀಸ್ ಸಿಬ್ಬಂದಿ ಕೊರತೆ ಎದುರಾಗಿದೆ. ಕಾಂಗ್ರೆಸ್ ಪಾದಯಾತ್ರೆ ಭದ್ರತೆಗೆ ತೆರಳಿದ್ದ ಪೊಲೀಸರಿಗೂ ಕಂಟಕ ಎದುರಾಗಿದೆ. 20 ಪೊಲೀಸರ ಪೈಕಿ ಇಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. 8 ಪೊಲೀಸ್ ಸಿಬ್ಬಂದಿಗೆ ಕೊರೊನಾ ರೋಗ ಲಕ್ಷಣಗಳಿವೆ. ಹೀಗಾಗಿ ಆನೇಕಲ್, ಜಿಗಣಿ, ಬನ್ನೇರುಘಟ್ಟ, ಹೆಬ್ಬಗೋಡಿ, ಸೂರ್ಯನಗರ ಠಾಣೆ ಪೊಲೀಸ್ ಸಿಬ್ಬಂದಿಗೆ ಕೊರೊನಾ ಟೆನ್ಶನ್ ಶುರುವಾಗಿದೆ. ಉಳಿದಿರುವ ಸಿಬ್ಬಂದಿಗೂ ಕೊರೊನಾ ಸೋಂಕು ಹಬ್ಬಿದರೆ ಕರ್ನಾಟಕ, ತಮಿಳುನಾಡು ಗಡಿಯಲ್ಲಿ ತಪಾಸಣೆ ಮಾಡುವುದು ಕೂಡ ಕಷ್ಟವಾಗಲಿದೆ.

ಇದನ್ನೂ ಓದಿ: ಮಂದಿರಕ್ಕೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಸಿಖ್​​ ಭಕ್ತರಿಗೆ ಥಳಿಸಿದ ಗುಂಪು; ಐವರನ್ನು ವಶಕ್ಕೆ ಪಡೆದ ಪೊಲೀಸರು

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ