AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಸ್ಯೆ ಹೇಳಲು ಬಂದ ಮಹಿಳೆ ಮೇಲೆ ಶಾಸಕ ಅರವಿಂದ್ ಲಿಂಬಾವಳಿ ದರ್ಪ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಸಮಸ್ಯೆ ಹೇಳಲು ಬಂದ ಮಹಿಳೆಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಬೈದಿದ್ದಾರೆ ಎಂದು ಆರೋಪ ಮಾಡಲಾಗಿದೆ. ಬೆಂಗಳೂರಿನ ವರ್ತೂರು ಕೆರೆ ಕೋಡಿ ವೀಕ್ಷಣೆ ವೇಳೆ ಘಟನೆ ನಡೆದಿದೆ.

ಸಮಸ್ಯೆ ಹೇಳಲು ಬಂದ ಮಹಿಳೆ ಮೇಲೆ ಶಾಸಕ ಅರವಿಂದ್ ಲಿಂಬಾವಳಿ ದರ್ಪ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ, ಮಹಿಳೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Sep 03, 2022 | 11:40 AM

ಬೆಂಗಳೂರು: ಸಮಸ್ಯೆ ಹೇಳಲು ಬಂದ ಮಹಿಳೆಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ (Arvind Limbavali) ಬೈದಿದ್ದಾರೆ ಎಂದು ಆರೋಪ ಮಾಡಲಾಗಿದೆ. ಬೆಂಗಳೂರಿನ ವರ್ತೂರು ಕೆರೆ ಕೋಡಿ ವೀಕ್ಷಣೆ ವೇಳೆ ಘಟನೆ ನಡೆದಿದೆ. ಮಹಿಳೆಗೆ ಬೈದಿರುವ ಎನ್ನಲಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಳೆ ಹಾನಿ ವೀಕ್ಷಣೆ ವೇಳೆ ಮನವಿ ಸಲ್ಲಿಸಲು ಮಹಿಳೆ ಬಂದಿದ್ದರು. ಮನವಿ ಪತ್ರ ಕಸಿದುಕೊಂಡು ಮಹಿಳೆ (woman) ಗೆ ಆವಾಜ್ ಹಾಕಿದ ಆರೋಪ ಮಾಡಲಾಗಿದೆ. ನಿನಗೆ ಮಾನ ಮರ್ಯಾದೆ ಏನಾದ್ರೂ ಇದ್ಯಾ? ನಾಚಿಕೆ ಆಗಲ್ವಾ? ಮಹಿಳೆಯನ್ನು ಠಾಣೆಗೆ ಕರೆದೊಯ್ದು ಕೂರಿಸಿ ಎಂದು ಶಾಸಕರು ಆವಾಜ್​ ಹಾಕಿದ್ದಾರೆ ಎನ್ನಲಾಗುತ್ತಿದೆ. ಸಮಸ್ಯೆ ಹೇಳಲು ಬಂದ ಮಹಿಳೆ ಮೇರಿ ಸಗಾಯಿಯನ್ನು ಪೊಲೀಸರು ಬಂಧಿಸಿದ್ದು, ಈ ಹಿನ್ನೆಲೆ ವೈಟ್‌ಫೀಲ್ಡ್ ಪೊಲೀಸ್ ಸ್ಟೇಷನ್ ಬಳಿ ಮಹಿಳೆಯರು ಪ್ರತಿಭಟನೆ ನಡೆಸಿದರು. ಮೇರಿ ಸಗಾಯಿಯನ್ನು ಯಾಕೆ ಸ್ಟೇಷನ್‌ಗೆ ಕರೆದೋಯ್ದಿದ್ದೀರಾ? ಯಾಕೆ ಪೊಲೀಸರು ಈ ರೀತಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್​ ಕಾರ್ಯಕರ್ತರು ನನ್ನ ವಿರುದ್ಧ ಧರಣಿ ಮಾಡುತ್ತಿದ್ದಾರೆ: ಅರವಿಂದ ಲಿಂಬಾವಳಿ

ಈ ಕುರಿತಾಗಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಟಿವಿ9ಗೆ ಹೇಳಿಕೆ ನೀಡಿದ್ದು, ಸರ್ಕಾರಿ ಜಾಗ ಅತಿಕ್ರಮಿಸಿ ಅಲ್ಲಿ ಕಟ್ಟಡ ನಿರ್ಮಿಸಿಕೊಂಡಿದ್ದಾರೆ. ದೂರು ನೀಡಿದ ಮಹಿಳೆ ಕಾಂಗ್ರೆಸ್​ ಕಾರ್ಯಕರ್ತೆ. ಕಾಂಗ್ರೆಸ್​ ಕಾರ್ಯಕರ್ತರು ನನ್ನ ವಿರುದ್ಧ ಧರಣಿ ಮಾಡುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್​ ಪಕ್ಷದವರು ಅಕ್ರಮಕ್ಕೆ ಬೆಂಬಲಿಸುತ್ತಿದ್ದಾರೆ. ದರ್ಪ, ಹಲ್ಲೆ ಸೇರಿದಂತೆ ಏನ್ ಬೇಕಾದರೂ ಪದ ಬಳಸಿಕೊಳ್ಳಲಿ. ಅಕ್ರಮವಾಗಿ ರಾಜಕಾಲುವೆ ಮೇಲೆ ಮನೆ ಕಟ್ಟಿಕೊಂಡಿದ್ದಾರೆ. ಅಕ್ರಮ ಕಟ್ಟಡವನ್ನು ಮೊದಲು ತೆರವು ಮಾಡಲಿ ಎಂದು ಹೇಳಿದರು.

ಶಾಸಕರು ಸಾರ್ವಜನಿಕವಾಗಿ ಕ್ಷಮೇ ಕೇಳಬೇಕು: ಮೇರಿ ಸಗಾಯಿ ಪತಿ ಅಶೋಕ್

ಮೇರಿ ಸಗಾಯಿ ಪತಿ ಅಶೋಕ್ ಮೃತ್ಯುಂಜಯ ಹೇಳಿಕೆ ನೀಡಿದ್ದು, ಶಾಸಕರ ವರ್ತನೆ ತುಂಬಾ ಬೇಸರವಾಗಿದೆ. ನ್ಯಾಯ ಕೇಳಲು ಹೋದ ನನ್ನ ಮೇಲೆ ಗಲಾಟೆಗೆ ಮುಂದಾಗಿದ್ರು. ಪೊಲೀಸ್​ರನ್ನ ಕರೆದು ಅರೆಸ್ಟ್ ಮಾಡಿ ಇವನಿಗೆ ಅಂದ್ರು. ಬಿಜೆಪಿ ಹೆಸರು ಹಾಳಾಗುತ್ತೆ ಇತಂಹ ಶಾಸಕರಿಂದ. ಶಾಸಕರು ಸಾರ್ವಜನಿಕವಾಗಿ ಕ್ಷಮೇ ಕೇಳಬೇಕು. ಕ್ಷಮೆಯಾಚಿಸುವವರೆಗೂ ಕಾನೂನು ಹೋರಾಟ ಮಾಡ್ತೀವಿ ಎಂದು ಹೇಳಿದರು.

ಶಾಸಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮಹಿಳೆ ವಿರುದ್ಧ ಎಫ್​ಐಆರ್

ಇನ್ನೂ ಈ ವಿಚಾರವಾಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಹಿನ್ನಲೆ ಮಹಿಳೆ ವಿರುದ್ಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ಕಂದಾಯ ಅಧಿಕಾರಿ ಪಾರ್ಥ ಸಾರಥಿ ಕೊಟ್ಟ ದೂರಿನ ಆಧಾರದ ಮೇಲೆ ಎಫ್​ಐಆರ್ ದಾಖಲಾಗಿದೆ. ಮಹಿಳೆ ಮೇರಿ ಸಗಾಯಿ ವೈಟ್ ಭಾಗದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಆಗಿದ್ದು, ಮಹಿಳೆಯ ಕಮರ್ಷಿಯಲ್ ಬಿಲ್ಡಿಂಗ್ ಇದ್ದು, ಕಾಂಪೌಂಡ್ ರಾಜಕಾಲುವೆ ಒತ್ತುವರಿಯಾಗಿದೆ ಎಂಬ ಆರೋಪ ಮಾಡಲಾಗಿದೆ.

ಸಿಎಂ ಬರುವ ಹಿನ್ನಲೆ ಅಂದು ಮಧ್ಯಾಹ್ನ ಅಧಿಕಾರಿಗಳು ಒತ್ತುವರಿ ತೆರವು ಮಾಡಿದ್ದರು. ಇದೇ ವೇಳೆ ಪರಿಶೀಲನೆಗೆ ಬಂದಿದ್ದ ಶಾಸಕ ಅರವಿಂದ ಲಿಂಬಾವಳಿಗೆ ನೋಟೀಸ್ ಸಹ ನೀಡದೆ ಕಾಂಪೌಂಡ್ ತೆರವು ಎಂದು ದೂರು ನೀಡಲಾಗಿದೆ. ಯಾವುದೇ ಒತ್ತುವರಿ ಬಿಡುವುದಿಲ್ಲ‌ ಎಂದು ಕೋಪದಲ್ಲಿ ಶಾಸಕರು ಬೈಯ್ದಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:18 am, Sat, 3 September 22

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ