AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikmagalur Politics: ಜ 14ಕ್ಕೆ ಜೆಡಿಎಸ್​ನಿಂದ ಕಾಂಗ್ರೆಸ್​ಗೆ ವೈಎಸ್​ವಿ ದತ್ತ

YSV Datta: ಹೆಚ್​ಡಿ ದೇವೇಗೌಡರ ‘ಮಾನಸಪುತ್ರ’ನೆಂದೇ ಖ್ಯಾತಿಯಾಗಿದ್ದ ವೈಎಸ್‍ವಿ ದತ್ತಾ ಅವರು ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ.

Chikmagalur Politics: ಜ 14ಕ್ಕೆ ಜೆಡಿಎಸ್​ನಿಂದ ಕಾಂಗ್ರೆಸ್​ಗೆ ವೈಎಸ್​ವಿ ದತ್ತ
ಶಾಸಕ H​.ನಾಗೇಶ್​, YSV ದತ್ತಾ
TV9 Web
| Updated By: ಆಯೇಷಾ ಬಾನು|

Updated on:Jan 11, 2023 | 11:14 AM

Share

ಬೆಂಗಳೂರು: ಶಾಸಕ H​.ನಾಗೇಶ್​, YSV ದತ್ತಾ ಕಾಂಗ್ರೆಸ್​​ ಸೇರ್ಪಡೆಗೆ ಮುಹೂರ್ತ ಫಿಕ್ಸ್​ ಆಗಿದೆ. ಜನವರಿ 14ರಂದು ಮುಳಬಾಗಿಲು ಶಾಸಕ ಹೆಚ್​.ನಾಗೇಶ್ ಹಾಗೂ YSV ದತ್ತಾ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಹೆಚ್​​.ನಾಗೇಶ್​ ಮುಳಬಾಗಿಲು ಕ್ಷೇತ್ರದ ಟಿಕೆಟ್ ಕೊಡಿ ಎಂದು ಕಾಂಗ್ರೆಸ್​ಗೆ ಕೇಳಿದ್ದಾರೆ. ಆದ್ರೆ ಮುಳಬಾಗಿಲು ಬೇಡ, ಮಹದೇವಪುರ ಕ್ಷೇತ್ರದಿಂದ ಸ್ಪರ್ಧಿಸಿ ಎಂದು ರಾಜ್ಯ ಕಾಂಗ್ರೆಸ್ ವರಿಷ್ಠರು ತಿಳಿಸಿದ್ದಾರೆ. ಕಾಂಗ್ರೆಸ್​​ ವರಿಷ್ಠರ ಮಾತಿಗೆ ಶಾಸಕ ಹೆಚ್​​.ನಾಗೇಶ್ ಒಪ್ಪಿಗೆ ನೀಡಿದ್ದಾರೆ. ಮಹಾದೇವಪುರ‌ ಕ್ಷೇತ್ರಕ್ಕೆ ಹೆಚ್ ನಾಗೇಶ್ ಕಾಂಗ್ರೆಸ್ ಅಭ್ಯರ್ಥಿ ಆಗುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ. ಮತ್ತೊಂದೆಡೆ ಕಡೂರು ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿ ಆಗಿರುವ ವೈಎಸ್ ವಿ ದತ್ತ ಅವರು ಭಿನ್ನಾಭಿಪ್ರಾಯಗಳ ನಡುವೆಯೂ ಟಿಕೆಟ್ ಸಿಗುವ ಭರವಸೆ ಹೊಂದಿದ್ದಾರೆ.

ಜೆಡಿಎಸ್​ನಿಂದ ಕಾಂಗ್ರೆಸ್​ಗೆ YSV ದತ್ತಾ

ಹೆಚ್​ಡಿ ದೇವೇಗೌಡರ ‘ಮಾನಸಪುತ್ರ’ನೆಂದೇ ಖ್ಯಾತಿಯಾಗಿದ್ದ ವೈಎಸ್‍ವಿ ದತ್ತಾ ಅವರು ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ವೈಎಸ್‍ವಿ ದತ್ತಾ ಜೆಡಿಎಸ್​ ತೊರೆಯುತ್ತಿರುವುದು ಅಧಿಕೃತವಾದ ಬಳಿಕ ಜೆಡಿಎಸ್ ಕೆಲ ನಾಯಕರು ಆಕ್ರೋಶ ಹೊರ ಹಾಕಿದ್ದರು. ದೇವೇಗೌಡರ ಜೊತೆ ತಂದೆ-ಮಗನಂತೆ ಇದ್ದು ಎಲ್ಲವನ್ನೂ ಸಂಪಾದಿಸಿ, ಖ್ಯಾತಿ ಪಡೆದು ಈಗ ಪಕ್ಷ ತೊರೆಯುವ ಮೂಲಕ ದ್ರೋಹ ಮಾಡುತ್ತಿದ್ದಾರೆ ಎಂಬ ಕೂಗುಗಳು ಕೇಳಿ ಬಂದಿದ್ದವು.

ಇದನ್ನೂ ಓದಿ: ಶೀಘ್ರವೇ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರುತ್ತೇನೆ: ಬೆಂಗಳೂರಿನಲ್ಲಿ ಮಾಜಿ ಶಾಸಕ ವೈಎಸ್‌ವಿ ದತ್ತ ಹೇಳಿಕೆ

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಕೊತ್ತೂರು ಮಂಜುನಾಥ್‌ ಅವರು ಕೆಲವು ಕಾರಣಗಳಿಂದ ಕೊನೆಯ ಕ್ಷಣದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಆಗ ಕಾಂಗ್ರೆಸ್‌ ಪಕ್ಷ ನಾಗೇಶ್‌ ಅವರನ್ನು ಬೆಂಬಲಿಸಿತ್ತು. ಈ ಕಾರಣದಿಂದ ನಾಗೇಶ್‌ ಗೆಲುವು ಸಾಧಿಸಿದ್ದರು. ಮೈತ್ರಿ ಸರಕಾರದ ಅವಧಿಯಲ್ಲಿ ಸರಕಾರವನ್ನು ಬೆಂಬಲಿಸಿದ್ದ ನಾಗೇಶ್‌ ಬಳಿಕ ಆಪರೇಷನ್‌ ಕಮಲದ ಮೂಲಕ ಹುಟ್ಟಿಕೊಂಡ ಬಿಜೆಪಿ ನೇತೃತ್ವದ ಸರ್ಕಾರದ ಬೆಂಬಲಕ್ಕೆ ನಿಂತರು. ಈ ವೇಳೆ ಅವರನ್ನು ಮಂತ್ರಿ ಮಾಡಿ ಅಬಕಾರಿ ಖಾತೆಯನ್ನೂ ನೀಡಲಾಗಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:14 am, Wed, 11 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ