AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikmagalur Politics: ಜ 14ಕ್ಕೆ ಜೆಡಿಎಸ್​ನಿಂದ ಕಾಂಗ್ರೆಸ್​ಗೆ ವೈಎಸ್​ವಿ ದತ್ತ

YSV Datta: ಹೆಚ್​ಡಿ ದೇವೇಗೌಡರ ‘ಮಾನಸಪುತ್ರ’ನೆಂದೇ ಖ್ಯಾತಿಯಾಗಿದ್ದ ವೈಎಸ್‍ವಿ ದತ್ತಾ ಅವರು ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ.

Chikmagalur Politics: ಜ 14ಕ್ಕೆ ಜೆಡಿಎಸ್​ನಿಂದ ಕಾಂಗ್ರೆಸ್​ಗೆ ವೈಎಸ್​ವಿ ದತ್ತ
ಶಾಸಕ H​.ನಾಗೇಶ್​, YSV ದತ್ತಾ
TV9 Web
| Edited By: |

Updated on:Jan 11, 2023 | 11:14 AM

Share

ಬೆಂಗಳೂರು: ಶಾಸಕ H​.ನಾಗೇಶ್​, YSV ದತ್ತಾ ಕಾಂಗ್ರೆಸ್​​ ಸೇರ್ಪಡೆಗೆ ಮುಹೂರ್ತ ಫಿಕ್ಸ್​ ಆಗಿದೆ. ಜನವರಿ 14ರಂದು ಮುಳಬಾಗಿಲು ಶಾಸಕ ಹೆಚ್​.ನಾಗೇಶ್ ಹಾಗೂ YSV ದತ್ತಾ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಹೆಚ್​​.ನಾಗೇಶ್​ ಮುಳಬಾಗಿಲು ಕ್ಷೇತ್ರದ ಟಿಕೆಟ್ ಕೊಡಿ ಎಂದು ಕಾಂಗ್ರೆಸ್​ಗೆ ಕೇಳಿದ್ದಾರೆ. ಆದ್ರೆ ಮುಳಬಾಗಿಲು ಬೇಡ, ಮಹದೇವಪುರ ಕ್ಷೇತ್ರದಿಂದ ಸ್ಪರ್ಧಿಸಿ ಎಂದು ರಾಜ್ಯ ಕಾಂಗ್ರೆಸ್ ವರಿಷ್ಠರು ತಿಳಿಸಿದ್ದಾರೆ. ಕಾಂಗ್ರೆಸ್​​ ವರಿಷ್ಠರ ಮಾತಿಗೆ ಶಾಸಕ ಹೆಚ್​​.ನಾಗೇಶ್ ಒಪ್ಪಿಗೆ ನೀಡಿದ್ದಾರೆ. ಮಹಾದೇವಪುರ‌ ಕ್ಷೇತ್ರಕ್ಕೆ ಹೆಚ್ ನಾಗೇಶ್ ಕಾಂಗ್ರೆಸ್ ಅಭ್ಯರ್ಥಿ ಆಗುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ. ಮತ್ತೊಂದೆಡೆ ಕಡೂರು ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿ ಆಗಿರುವ ವೈಎಸ್ ವಿ ದತ್ತ ಅವರು ಭಿನ್ನಾಭಿಪ್ರಾಯಗಳ ನಡುವೆಯೂ ಟಿಕೆಟ್ ಸಿಗುವ ಭರವಸೆ ಹೊಂದಿದ್ದಾರೆ.

ಜೆಡಿಎಸ್​ನಿಂದ ಕಾಂಗ್ರೆಸ್​ಗೆ YSV ದತ್ತಾ

ಹೆಚ್​ಡಿ ದೇವೇಗೌಡರ ‘ಮಾನಸಪುತ್ರ’ನೆಂದೇ ಖ್ಯಾತಿಯಾಗಿದ್ದ ವೈಎಸ್‍ವಿ ದತ್ತಾ ಅವರು ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ವೈಎಸ್‍ವಿ ದತ್ತಾ ಜೆಡಿಎಸ್​ ತೊರೆಯುತ್ತಿರುವುದು ಅಧಿಕೃತವಾದ ಬಳಿಕ ಜೆಡಿಎಸ್ ಕೆಲ ನಾಯಕರು ಆಕ್ರೋಶ ಹೊರ ಹಾಕಿದ್ದರು. ದೇವೇಗೌಡರ ಜೊತೆ ತಂದೆ-ಮಗನಂತೆ ಇದ್ದು ಎಲ್ಲವನ್ನೂ ಸಂಪಾದಿಸಿ, ಖ್ಯಾತಿ ಪಡೆದು ಈಗ ಪಕ್ಷ ತೊರೆಯುವ ಮೂಲಕ ದ್ರೋಹ ಮಾಡುತ್ತಿದ್ದಾರೆ ಎಂಬ ಕೂಗುಗಳು ಕೇಳಿ ಬಂದಿದ್ದವು.

ಇದನ್ನೂ ಓದಿ: ಶೀಘ್ರವೇ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರುತ್ತೇನೆ: ಬೆಂಗಳೂರಿನಲ್ಲಿ ಮಾಜಿ ಶಾಸಕ ವೈಎಸ್‌ವಿ ದತ್ತ ಹೇಳಿಕೆ

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಕೊತ್ತೂರು ಮಂಜುನಾಥ್‌ ಅವರು ಕೆಲವು ಕಾರಣಗಳಿಂದ ಕೊನೆಯ ಕ್ಷಣದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಆಗ ಕಾಂಗ್ರೆಸ್‌ ಪಕ್ಷ ನಾಗೇಶ್‌ ಅವರನ್ನು ಬೆಂಬಲಿಸಿತ್ತು. ಈ ಕಾರಣದಿಂದ ನಾಗೇಶ್‌ ಗೆಲುವು ಸಾಧಿಸಿದ್ದರು. ಮೈತ್ರಿ ಸರಕಾರದ ಅವಧಿಯಲ್ಲಿ ಸರಕಾರವನ್ನು ಬೆಂಬಲಿಸಿದ್ದ ನಾಗೇಶ್‌ ಬಳಿಕ ಆಪರೇಷನ್‌ ಕಮಲದ ಮೂಲಕ ಹುಟ್ಟಿಕೊಂಡ ಬಿಜೆಪಿ ನೇತೃತ್ವದ ಸರ್ಕಾರದ ಬೆಂಬಲಕ್ಕೆ ನಿಂತರು. ಈ ವೇಳೆ ಅವರನ್ನು ಮಂತ್ರಿ ಮಾಡಿ ಅಬಕಾರಿ ಖಾತೆಯನ್ನೂ ನೀಡಲಾಗಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:14 am, Wed, 11 January 23

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ