AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಡೆಯುತ್ತಿರುವ ಫುಟ್ಬಾಲ್ ಟೂರ್ನಿಯಲ್ಲಿ ನಡೆಯುತ್ತಿದ್ಯಾ ಫಿಕ್ಸಿಂಗ್​?​ ಶಾಸಕ ಹ್ಯಾರಿಸ್​ ದೂರಿನ ಮೇರೆಗೆ ತನಿಖೆ ಚುರುಕು

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇಂಡಿಯನ್ ಸೂಪರ್ ಲೀಗ್ ಫುಟ್ಬಾಲ್ ಮ್ಯಾಚ್​ಗಳು ನಡೆಯುತ್ತಿವೆ. ಬಹುತೇಕ ಮ್ಯಾಚ್​ಗಳು ಫಿಕ್ಸಿಂಗ್ ಆಗಿವೇ ಎಂದು ಹ್ಯಾರಿಸ್ ಅವರು ದೂರಿನಲ್ಲಿ ಉಲ್ಲೇಖಿಸಿ ವಾರದ ಹಿಂದೆ ನಗರ ಪೊಲೀಸ್ ಆಯುಕ್ತ ದಯಾನಂದ್​ಗೆ ದೂರು ನೀಡಿದ್ದರು. ಕಮಿಷನರ್ ದಯಾನಂದ್ ಅವರು ದೂರು ಸ್ವೀಕರಿಸಿ ಸಿಸಿಬಿ ತನಿಖೆಗೆ ಆದೇಶ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಫುಟ್ಬಾಲ್ ಟೂರ್ನಿಯಲ್ಲಿ ನಡೆಯುತ್ತಿದ್ಯಾ ಫಿಕ್ಸಿಂಗ್​?​ ಶಾಸಕ ಹ್ಯಾರಿಸ್​ ದೂರಿನ ಮೇರೆಗೆ ತನಿಖೆ ಚುರುಕು
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 20, 2023 | 10:02 AM

Share

ಬೆಂಗಳೂರು, ಅ.20: ಭಾರತೀಯ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು (Football Match Fixing) ಖುದ್ದು ಕರ್ನಾಟಕ ಪುಟ್ಬಾಲ್ ಅಸೋಸಿಯೇಷನ್ ನ ಅಧ್ಯಕ್ಷ, ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌ನ ಉಪಾಧ್ಯಕ್ಷರೂ ಆಗಿರುವ ಶಾಸಕ ಎನ್.ಎ. ಹ್ಯಾರಿಸ್ (N A Haris) ಅವರು ದೂರು ದಾಖಲಿಸಿದ್ದಾರೆ. ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸದ್ಯ ದೂರಿನ ಆಧಾರದ ಮೇಲೆ ಸಿಸಿಬಿ ಪೊಲೀಸರು (CCB Police) ವಿಚಾರಣೆ ನಡೆಸುತ್ತಿದ್ದಾರೆ. ಅನುಮಾನಾಸ್ಪದ ಪಂದ್ಯಗಳ ವಿಡಿಯೋ ವೀಕ್ಷಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿದೇಶಿ ಬುಕ್ಕಿಗಳ ಜಾಲಕ್ಕೆ ಭಾರತೀಯ ಫುಟ್ಬಾಲ್ ಭವಿಷ್ಯ ಬಲಿಯಾಗುತ್ತಾ ಇದೆ ಎಂದು ಶಾಸಕ ಎನ್.ಎ. ಹ್ಯಾರಿಸ್ ಅವರು ದೂರು ನೀಡಿದ್ದರು. ಸದ್ಯ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇಂಡಿಯನ್ ಸೂಪರ್ ಲೀಗ್ ಫುಟ್ಬಾಲ್ ಮ್ಯಾಚ್​ಗಳು ನಡೆಯುತ್ತಿವೆ. ಬಹುತೇಕ ಮ್ಯಾಚ್​ಗಳು ಫಿಕ್ಸಿಂಗ್ ಆಗಿವೇ ಎಂದು ಹ್ಯಾರಿಸ್ ಅವರು ದೂರಿನಲ್ಲಿ ಉಲ್ಲೇಖಿಸಿ ವಾರದ ಹಿಂದೆ ನಗರ ಪೊಲೀಸ್ ಆಯುಕ್ತ ದಯಾನಂದ್​ಗೆ ದೂರು ನೀಡಿದ್ದರು. ಕಮಿಷನರ್ ದಯಾನಂದ್ ಅವರು ದೂರು ಸ್ವೀಕರಿಸಿ ಸಿಸಿಬಿ ತನಿಖೆಗೆ ಆದೇಶ ನೀಡಿದ್ದಾರೆ.

ಸಿಸಿಬಿ ಅಧಿಕಾರಿಗಳು ಕಳೆದ ಒಂದು ವಾರದಿಂದ ಗೌಪ್ಯವಾಗಿ ತನಿಖೆ ಮಾಡ್ತಾ ಇದ್ದಾರೆ. ಸಿಸಿಬಿ ತನಿಖೆ ವೇಳೆ ವಿದೇಶದಿಂದ ಮ್ಯಾಚ್ ಫಿಕ್ಸಿಂಗ್‌ ಆಗ್ತಾ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸದ್ಯ ಎಲ್ಲಾ ಆಯಾಮದಲ್ಲೂ ತನಿಖೆ ಮುಂದುವರೆದಿದೆ. ಪ್ರಾಥಮಿಕ ತನಿಖೆ ಬಳಿಕ‌ ದೂರುದಾರ ಶಾಸಕ ಹ್ಯಾರಿಸ್​ಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಪ್ರಕರಣದ ಕುರಿತಾಗಿ ಇನ್ನೂ ಹೆಚ್ಚಿನ ಮಾಹಿತಿ ಹಾಗೂ ದಾಖಲೆ ಇದ್ದರೆ ನೀಡುವಂತೆ ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: ಪ. ಬಂಗಾಳದಲ್ಲಿ ಫುಟ್ಬಾಲ್ ಅಕಾಡೆಮಿ: ಸ್ಪೇನ್ ಪ್ರವಾಸದಲ್ಲಿ ಲಾ ಲಿಗಾ ಅಧಿಕಾರಿಗಳನ್ನು ಭೇಟಿಯಾದ ಮಮತಾ ಬ್ಯಾನರ್ಜಿ

ಬಿಡಿಎಫ್‌ಎ ಸೂಪರ್ ಡಿವಿಷನ್ ಲೀಗ್ ಫುಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಮ್ಯಾಚ್ ಫಿಕ್ಸಿಂಗ್ ಆಗಿರುವ ಬಗ್ಗೆ ಖಚಿತ ಮಾಹಿತಿ ಇದ್ದು, ಅದನ್ನು ಆಧರಿಸಿ ತನಿಖೆ ಮುಂದುವರಿಸಲಾಗಿದೆ. ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌ ಪ್ರತಿನಿಧಿಗಳ ನೆರವು ಪಡೆದು, ಪಂದ್ಯಗಳ ವಿಡಿಯೋ ಪರಿಶೀಲನೆ ನಡೆಸಲಾಗುತ್ತಿದೆ. ಆಟಗಾರರ ಆಟದಲ್ಲಿ ವ್ಯತ್ಯಾಸಗಳು ಕಂಡುಬಂದರೆ, ಅವರನ್ನು ವಿಚಾರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತದೆ ಎಂದು ಸಿಸಿಬಿ ಮೂಲಗಳಿಂದ ತಿಳಿದು ಬಂದಿದೆ.

ಇನ್ನು ಫುಟ್‌ಬಾಲ್‌ ಆಟಗಾರರ ಭವಿಷ್ಯದ ದೃಷ್ಟಿಯಿಂದ, ಸದ್ಯಕ್ಕೆ ತಂಡದ ಯಾರನ್ನೂ ವಿಚಾರಣೆ ನಡೆಸಿಲ್ಲ. ಮ್ಯಾಚ್ ಫಿಕ್ಸಿಂಗ್ ಆರೋಪದ ಬಗ್ಗೆ ಪುರಾವೆಗಳನ್ನು ಸಂಗ್ರಹಿಸಲಾಗುತ್ತಿದೆ. ಅದಾದ ನಂತರವೇ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಸಿಬಿ ಮೂಲಗಳು ಹೇಳಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:15 am, Fri, 20 October 23

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ