AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಗಾವಣೆ ದಂಧೆಯಲ್ಲಿ ಶಾಸಕ ಜೆಟಿ ಪಾಟೀಲ್ ಪಿಎ ಭಾಗಿ ಆರೋಪ; ಸಚಿವ ದಿನೇಶ್ ಗುಂಡೂರಾವ್ ಆಪ್ತ ಕಾರ್ಯದರ್ಶಿ ದೂರು

ಈ ಹಿಂದೆ ಹಿದಾಯತ್ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಜೆ.ಟಿ ಪಾಟೀಲ್ ಅವರು ಸ್ಪೀಕರ್​ಗೆ  ಪತ್ರ ಬರೆದಿದ್ದರು. ಈ ಹಿನ್ನೆಲೆ ಕೆ.ಎ ಹಿದಾಯತ್ ಅವರು ವಾಸ್ತವ ಅಂಶಗಳೊಂದಿಗೆ ದಾಖಲೆಗಳ ಸಮೇತ ಪೊಲೀಸರಿಗೆ ದೂರು ನೀಡಿ, ಶಾಸಕ ಜೆ.ಟಿ ಪಾಟೀಲ್ ಪಿ.ಎ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ವರ್ಗಾವಣೆ ದಂಧೆಯಲ್ಲಿ ಶಾಸಕ ಜೆಟಿ ಪಾಟೀಲ್ ಪಿಎ ಭಾಗಿ ಆರೋಪ; ಸಚಿವ ದಿನೇಶ್ ಗುಂಡೂರಾವ್ ಆಪ್ತ ಕಾರ್ಯದರ್ಶಿ ದೂರು
ವಿಧಾನಸೌಧ ಪೊಲೀಸ್​ ಠಾಣೆ
ಪ್ರಸನ್ನ ಗಾಂವ್ಕರ್​
| Updated By: ಕಿರಣ್ ಹನುಮಂತ್​ ಮಾದಾರ್|

Updated on:Oct 11, 2023 | 4:27 PM

Share

ಬೆಂಗಳೂರು, ಅ.11: ವರ್ಗಾವಣೆ ದಂಧೆಯಲ್ಲಿ ಶಾಸಕ ಜೆಟಿ ಪಾಟೀಲ್(JT Patil) ಪಿ.ಎ ಪ್ರಕಾಶ್ ಬೀಳಗಿ ಅವರು ಭಾಗಿ ಆದ ಆರೋಪ ಕೇಳಿಬಂದಿದ್ದು, ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ಆಪ್ತ ಕಾರ್ಯದರ್ಶಿ​ ಹಿದಾಯತ್ ಎಂಬುವವರು ಪ್ರಕಾಶ್​ ಬೀಳಗಿ ವಿರುದ್ಧ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಹೌದು, ವರ್ಗಾವಣೆ ಕೋರಿಕೆ ಪರಿಶೀಲಿಸಿರುವ ಆಪ್ತ ಕಾರ್ಯದರ್ಶಿ ಹಿದಾಯತ್, ದಾಖಲೆಗಳ ಸಮೇತ ಪೊಲೀಸರಿಗೆ ದೂರು ನೀಡಿದ್ದಾರೆ. ಜೊತೆಗೆ ಬೆದರಿಕೆ ಹಾಕಿ ಬ್ಲ್ಯಾಕ್​ಮೇಲ್ ಮಾಡಿದ ಬಗ್ಗೆಯೂ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಈ ಹಿಂದೆ ಹಿದಾಯತ್ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಜೆ.ಟಿ ಪಾಟೀಲ್ ಅವರು ಸ್ಪೀಕರ್​ಗೆ  ಪತ್ರ ಬರೆದಿದ್ದರು. ಈ ಹಿನ್ನೆಲೆ ಕೆ.ಎ ಹಿದಾಯತ್ ಅವರು ವಾಸ್ತವ ಅಂಶಗಳೊಂದಿಗೆ ದಾಖಲೆಗಳ ಸಮೇತ ಪೊಲೀಸರಿಗೆ ದೂರು ನೀಡಿ, ಶಾಸಕ ಜೆ.ಟಿ ಪಾಟೀಲ್ ಪಿ.ಎ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ಜೆ.ಟಿ ಪಾಟೀಲ್ ಅವರ ಪಿ.ಎ ಪ್ರಕಾಶ್ ಬೀಳಗಿ ವರ್ಗಾವಣೆ ದಂದೆಯಲ್ಲಿ ತೊಡಗಿದ್ದಾರಾ.?

ಹೌದು, ಈ ಬಗ್ಗೆ ಅನುಮಾನ ವ್ತಕ್ತವಾದ ಹಿನ್ನೆಲೆಯಲ್ಲಿ ಪ್ರಕಾಶ್ ಬೀಳಗಿ ಅವರು ನೀಡಿದ ವರ್ಗಾವಣೆ ಕೋರಿಕೆಗಳನ್ನು ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿ ಪರಿಶೀಲನೆ ನಡೆಸಿದ್ದು, ಈ ವೇಳೆ ಪ್ರಕಾಶ್ ಬೀಳಗಿ ಅವರು ಕೇವಲ ತಮ್ಮ ಶಾಸಕರದ್ದಲ್ಲದೇ ಬೇರೆ ಬೇರೆ ಇಲಾಖೆಯವರ ಕಡೆಯಿಂದಲೂ ವರ್ಗಾವಣೆ ಪತ್ರಗಳನ್ನು ತಂದು ಪಟ್ಟು ಹಿಡಿಯುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಜೊತೆಗೆ ಚಿತ್ರದುರ್ಗದಲ್ಲಿ ಮೈಲಾರ ಲಿಂಗೇಶ್ವರ ಫಾರ್ಮಸಿ ಕಾಲೇಜಿಗೆ ಅನುಮತಿ ಕೇಳಿದ್ದಾರೆ. ಆದರೆ, ಫಾರ್ಮಸಿ ಕಾಲೇಜಿಗೂ, ಶಾಸಕರ ಪಿ.ಎ ಪ್ರಕಾಶ್​ಗೆ ಸಂಬಂಧವೇ ಇಲ್ಲ.

ಇದನ್ನೂ ಓದಿ:DKS Vs HDK; ವರ್ಗಾವಣೆ ದಂಧೆ ನಡೆಯುತ್ತಿದೆ ಅಂತ ಕುಮಾರಸ್ವಾಮಿಯವರಲ್ಲಿ ಮಾಹಿತಿ ಇದ್ದರೆ ದಯವಿಟ್ಟು ನೀಡಲಿ: ಡಿಕೆ ಶಿವಕುಮಾರ್

ಬ್ಲ್ಯಾಕ್​ಮೇಲ್​ಗೆ ಬಗ್ಗದ ಹಿನ್ನೆಲೆ ಸ್ಪೀಕರ್ ಗೆ ಶಾಸಕರಿಂದ ದೂರು

ಇನ್ನು ಬೀಳಗಿಯವರ ಬ್ಲ್ಯಾಕ್​ಮೇಲ್​ಗೆ ಬಗ್ಗದ ಹಿನ್ನೆಲೆಯಲ್ಲಿ ಆಪ್ತ ಕಾರ್ಯದರ್ಶಿಯವರ ವಿರುದ್ಧ ಸ್ಪೀಕರ್​ಗೆ ಶಾಸಕರಿಂದ ದೂರು ಕೊಡಿಸಿದ್ದಾರೆ. ಅಷ್ಟೇ ಅಲ್ಲ, ಪತ್ರಿಕೆಗಳಲ್ಲಿ ಅಪಪ್ರಚಾರ ಮಾಡುವ ಬೆದರಿಕೆ ಹಾಕಿ ಬ್ಲ್ಯಾಕ್ ಮೇಲೆ ಮಾಡಿದ್ದರು ಎಂದು ಹಿದಾಯತ್ ದೂರು ದಾಖಲಿಸಿದ್ದಾರೆ. ನಾನು ಕಚೇರಿಯಲ್ಲಿ ಇಲ್ಲದಿರುವಾಗ ನಮ್ಮ ಕಚೇರಿಯ ಸಿಬ್ಬಂದಿಗಳ ಎದುರು ಅನುಚಿತವಾಗಿ ವರ್ತಿಸಿ, ಬೆದರಿಕೆ ಹಾಕಿ ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Wed, 11 October 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ