ವರ್ಗಾವಣೆ ದಂಧೆಯಲ್ಲಿ ಶಾಸಕ ಜೆಟಿ ಪಾಟೀಲ್ ಪಿಎ ಭಾಗಿ ಆರೋಪ; ಸಚಿವ ದಿನೇಶ್ ಗುಂಡೂರಾವ್ ಆಪ್ತ ಕಾರ್ಯದರ್ಶಿ ದೂರು

ಈ ಹಿಂದೆ ಹಿದಾಯತ್ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಜೆ.ಟಿ ಪಾಟೀಲ್ ಅವರು ಸ್ಪೀಕರ್​ಗೆ  ಪತ್ರ ಬರೆದಿದ್ದರು. ಈ ಹಿನ್ನೆಲೆ ಕೆ.ಎ ಹಿದಾಯತ್ ಅವರು ವಾಸ್ತವ ಅಂಶಗಳೊಂದಿಗೆ ದಾಖಲೆಗಳ ಸಮೇತ ಪೊಲೀಸರಿಗೆ ದೂರು ನೀಡಿ, ಶಾಸಕ ಜೆ.ಟಿ ಪಾಟೀಲ್ ಪಿ.ಎ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ವರ್ಗಾವಣೆ ದಂಧೆಯಲ್ಲಿ ಶಾಸಕ ಜೆಟಿ ಪಾಟೀಲ್ ಪಿಎ ಭಾಗಿ ಆರೋಪ; ಸಚಿವ ದಿನೇಶ್ ಗುಂಡೂರಾವ್ ಆಪ್ತ ಕಾರ್ಯದರ್ಶಿ ದೂರು
ವಿಧಾನಸೌಧ ಪೊಲೀಸ್​ ಠಾಣೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 11, 2023 | 4:27 PM

ಬೆಂಗಳೂರು, ಅ.11: ವರ್ಗಾವಣೆ ದಂಧೆಯಲ್ಲಿ ಶಾಸಕ ಜೆಟಿ ಪಾಟೀಲ್(JT Patil) ಪಿ.ಎ ಪ್ರಕಾಶ್ ಬೀಳಗಿ ಅವರು ಭಾಗಿ ಆದ ಆರೋಪ ಕೇಳಿಬಂದಿದ್ದು, ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ಆಪ್ತ ಕಾರ್ಯದರ್ಶಿ​ ಹಿದಾಯತ್ ಎಂಬುವವರು ಪ್ರಕಾಶ್​ ಬೀಳಗಿ ವಿರುದ್ಧ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಹೌದು, ವರ್ಗಾವಣೆ ಕೋರಿಕೆ ಪರಿಶೀಲಿಸಿರುವ ಆಪ್ತ ಕಾರ್ಯದರ್ಶಿ ಹಿದಾಯತ್, ದಾಖಲೆಗಳ ಸಮೇತ ಪೊಲೀಸರಿಗೆ ದೂರು ನೀಡಿದ್ದಾರೆ. ಜೊತೆಗೆ ಬೆದರಿಕೆ ಹಾಕಿ ಬ್ಲ್ಯಾಕ್​ಮೇಲ್ ಮಾಡಿದ ಬಗ್ಗೆಯೂ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಈ ಹಿಂದೆ ಹಿದಾಯತ್ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಜೆ.ಟಿ ಪಾಟೀಲ್ ಅವರು ಸ್ಪೀಕರ್​ಗೆ  ಪತ್ರ ಬರೆದಿದ್ದರು. ಈ ಹಿನ್ನೆಲೆ ಕೆ.ಎ ಹಿದಾಯತ್ ಅವರು ವಾಸ್ತವ ಅಂಶಗಳೊಂದಿಗೆ ದಾಖಲೆಗಳ ಸಮೇತ ಪೊಲೀಸರಿಗೆ ದೂರು ನೀಡಿ, ಶಾಸಕ ಜೆ.ಟಿ ಪಾಟೀಲ್ ಪಿ.ಎ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ಜೆ.ಟಿ ಪಾಟೀಲ್ ಅವರ ಪಿ.ಎ ಪ್ರಕಾಶ್ ಬೀಳಗಿ ವರ್ಗಾವಣೆ ದಂದೆಯಲ್ಲಿ ತೊಡಗಿದ್ದಾರಾ.?

ಹೌದು, ಈ ಬಗ್ಗೆ ಅನುಮಾನ ವ್ತಕ್ತವಾದ ಹಿನ್ನೆಲೆಯಲ್ಲಿ ಪ್ರಕಾಶ್ ಬೀಳಗಿ ಅವರು ನೀಡಿದ ವರ್ಗಾವಣೆ ಕೋರಿಕೆಗಳನ್ನು ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿ ಪರಿಶೀಲನೆ ನಡೆಸಿದ್ದು, ಈ ವೇಳೆ ಪ್ರಕಾಶ್ ಬೀಳಗಿ ಅವರು ಕೇವಲ ತಮ್ಮ ಶಾಸಕರದ್ದಲ್ಲದೇ ಬೇರೆ ಬೇರೆ ಇಲಾಖೆಯವರ ಕಡೆಯಿಂದಲೂ ವರ್ಗಾವಣೆ ಪತ್ರಗಳನ್ನು ತಂದು ಪಟ್ಟು ಹಿಡಿಯುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಜೊತೆಗೆ ಚಿತ್ರದುರ್ಗದಲ್ಲಿ ಮೈಲಾರ ಲಿಂಗೇಶ್ವರ ಫಾರ್ಮಸಿ ಕಾಲೇಜಿಗೆ ಅನುಮತಿ ಕೇಳಿದ್ದಾರೆ. ಆದರೆ, ಫಾರ್ಮಸಿ ಕಾಲೇಜಿಗೂ, ಶಾಸಕರ ಪಿ.ಎ ಪ್ರಕಾಶ್​ಗೆ ಸಂಬಂಧವೇ ಇಲ್ಲ.

ಇದನ್ನೂ ಓದಿ:DKS Vs HDK; ವರ್ಗಾವಣೆ ದಂಧೆ ನಡೆಯುತ್ತಿದೆ ಅಂತ ಕುಮಾರಸ್ವಾಮಿಯವರಲ್ಲಿ ಮಾಹಿತಿ ಇದ್ದರೆ ದಯವಿಟ್ಟು ನೀಡಲಿ: ಡಿಕೆ ಶಿವಕುಮಾರ್

ಬ್ಲ್ಯಾಕ್​ಮೇಲ್​ಗೆ ಬಗ್ಗದ ಹಿನ್ನೆಲೆ ಸ್ಪೀಕರ್ ಗೆ ಶಾಸಕರಿಂದ ದೂರು

ಇನ್ನು ಬೀಳಗಿಯವರ ಬ್ಲ್ಯಾಕ್​ಮೇಲ್​ಗೆ ಬಗ್ಗದ ಹಿನ್ನೆಲೆಯಲ್ಲಿ ಆಪ್ತ ಕಾರ್ಯದರ್ಶಿಯವರ ವಿರುದ್ಧ ಸ್ಪೀಕರ್​ಗೆ ಶಾಸಕರಿಂದ ದೂರು ಕೊಡಿಸಿದ್ದಾರೆ. ಅಷ್ಟೇ ಅಲ್ಲ, ಪತ್ರಿಕೆಗಳಲ್ಲಿ ಅಪಪ್ರಚಾರ ಮಾಡುವ ಬೆದರಿಕೆ ಹಾಕಿ ಬ್ಲ್ಯಾಕ್ ಮೇಲೆ ಮಾಡಿದ್ದರು ಎಂದು ಹಿದಾಯತ್ ದೂರು ದಾಖಲಿಸಿದ್ದಾರೆ. ನಾನು ಕಚೇರಿಯಲ್ಲಿ ಇಲ್ಲದಿರುವಾಗ ನಮ್ಮ ಕಚೇರಿಯ ಸಿಬ್ಬಂದಿಗಳ ಎದುರು ಅನುಚಿತವಾಗಿ ವರ್ತಿಸಿ, ಬೆದರಿಕೆ ಹಾಕಿ ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Wed, 11 October 23

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us