AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಲಾಕರ್ ರಹಸ್ಯ ಬಯಲು: ಇಡಿಗೆ ಸಿಕ್ತು 44 ಕೆಜಿ ಚಿನ್ನ

ಕ್ಯಾಸಿನೋ ಬ್ಯುಸಿನೆಸ್, ಆನ್​ಲೈನ್​, ಆಫ್​ಲೈನ್​ ಬೆಟ್ಟಿಂಗ್​​ ಪ್ರಕರಣದಲ್ಲಿ ಕಾಂಗ್ರೆಸ್​​ ಶಾಸಕ, ಉದ್ಯಮಿ ವೀರೇಂದ್ರ ಪಪ್ಪಿಯ ಸಾಮ್ರಾಜ್ಯ ನೋಡಿ ಇಡಿ ಅಧಿಕಾರಿಗಳು ಶಾಕ್ ಆಗಿದ್ದರು. ಇದೀಗ ಮತ್ತೊಮ್ಮೆ ಶಾಕ್​​ ಆಗಿದ್ದಾರೆ. ಬ್ಯಾಂಕ್​ನ 2 ಲಾಕರ್​ನಲ್ಲಿದ್ದ 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನ ಸೀಜ್ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಲಾಕರ್ ರಹಸ್ಯ ಬಯಲು: ಇಡಿಗೆ ಸಿಕ್ತು 44 ಕೆಜಿ ಚಿನ್ನ
ಸೀಜ್ ಮಾಡಲಾದ ಚಿನ್ನ
ಗಂಗಾಧರ​ ಬ. ಸಾಬೋಜಿ
|

Updated on: Oct 09, 2025 | 9:47 PM

Share

ಬೆಂಗಳೂರು, ಅಕ್ಟೋಬರ್​ 09: ಅಕ್ರಮ ಬೆಟ್ಟಿಂಗ್‌ ಪ್ರಕರಣದಲ್ಲಿ (Betting racket Case) ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಯನ್ನ (Veerendra Pappi) ಈಗಾಗಲೇ ಬಂಧಿಸಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನವನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಆ ಮೂಲಕ ಈವರೆಗೆ 150 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನ ಜಪ್ತಿ 

ಅಕ್ರಮ ಆನ್​​ಲೈನ್ ಗೇಮ್ ಕೇಸ್ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಹಲವೆಡೆ ಶೋಧ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬ್ಯಾಂಕ್​ನ 2 ಲಾಕರ್​ನಲ್ಲಿದ್ದ 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನವನ್ನ ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್: ಅಕೌಂಟ್‌ಗಳಲ್ಲಿದ್ದ 55 ಕೋಟಿ ರೂ. ಜಪ್ತಿ

ಇತ್ತೀಚೆಗೆ ಆನ್​ಲೈನ್ ಬೆಟ್ಟಿಂಗ್ ಆ್ಯಪ್ ಮತ್ತು ಕ್ಯಾಸಿನೋಗಳಲ್ಲಿ ಅಕ್ರಮ ಹಣ ವರ್ಗಾವಣೆ ಸಂಶಯದಡಿ ವೀರೇಂದ್ರ ಪಪ್ಪಿ ಮೇಲೆ ಇಡಿ ದಾಳಿ ನಡೆದಿತ್ತು. ಸುಮಾರು 30 ಕಡೆ ನಡೆದ ದಾಳಿಯಲ್ಲಿ 12 ಕೋಟಿ ರೂ ನಗದು, 6 ಕೋಟಿ ರೂ ಮೌಲ್ಯದ ಚಿನ್ನ, ವಿದೇಶಿ ಕರೆನ್ಸಿ ಸೇರಿದಂತೆ ಕೋಟ್ಯಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಬಂಧನ: ಇಡಿ ಅಧಿಕಾರಿಗಳಿಗೆ ಕೋರ್ಟ್ ತರಾಟೆ, ಇಲ್ಲಿದೆ ವಾದ ಪ್ರತಿವಾದ

ಸಿಕ್ಕಿಂನ ಗ್ಯಾಂಗ್ಟಕ್​​ನಲ್ಲಿದ್ದ ಪಪ್ಪಿಯನ್ನ ಕೊಲ್ಕತ್ತಾ ಇಡಿ ಅಧಿಕಾರಿಗಳ ಮೂಲಕ ಬಂಧಿಸಿ, ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದರು. ಬಳಿಕ ಕೋರಮಂಗಲದ ಜಡ್ಜ್​ ನಿವಾಸದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ 35 ನೇ ಸಿಸಿಹೆಚ್ ಕೋರ್ಟ್ ನ್ಯಾಯಾಧೀಶರು 5 ದಿನಗಳ ಕಾಲ ವೀರೇಂದ್ರ ಪಪ್ಪಿಯನ್ನ ಇಡಿ ಕಸ್ಟಡಿಗೆ ನೀಡಿ ಆದೇಶಿಸಿತ್ತು. ಆಗಸ್ಟ್ 28 ರವರೆಗೆ ಇಡಿಯಿಂದ ವೀರೇಂದ್ರ ಪಪ್ಪಿ ವಿಚಾರಣೆ ನಡೆದಿತ್ತು. ಆಗಸ್ಟ್​ 28 ರಂದು ಪಪ್ಪಿ ಪರ ವಕೀಲರು ಬೇಲ್​ಗೆ ಅರ್ಜಿ ಸಲ್ಲಿಸಿದ್ದರು.

ವರದಿ: ಪ್ರದೀಪ್​​ ಚಿಕ್ಕಾಟಿ, ಕ್ರೈಂ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ
ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ
ಬೆಥೆಲ್ ಸ್ಪಿನ್​ಗೆ 'ತಿರುಗಿ' ಬಿದ್ದ ಶ್ರೀಲಂಕಾ
ಬೆಥೆಲ್ ಸ್ಪಿನ್​ಗೆ 'ತಿರುಗಿ' ಬಿದ್ದ ಶ್ರೀಲಂಕಾ