AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಲಾಲ್​​ಬಾಗ್​ನಲ್ಲಿ ಮಾವು, ಹಲಸಿನ ಮೇಳ ಉದ್ಘಾಟಿಸಿದ ಶಾಸಕ ರಾಮಲಿಂಗಾರೆಡ್ಡಿ

ಬೆಂಗಳೂರು ನಗರದ ಲಾಲ್​​ಬಾಗ್​ನಲ್ಲಿ ಮಾವು(Mango), ಹಲಸಿನ(Jack Fruit) ಮೇಳವನ್ನ ಆಯೋಜಿಸಲಾಗಿದ್ದು, ಸಚಿವ ರಾಮಲಿಂಗಾರೆಡ್ಡಿ, ಹಾಗೂ ಶಾಸಕ ಉದಯ್ ಗರುಡಾಚಾರ್​ ಉದ್ಘಾಟಿಸಿದರು.

Bengaluru News: ಲಾಲ್​​ಬಾಗ್​ನಲ್ಲಿ ಮಾವು, ಹಲಸಿನ ಮೇಳ ಉದ್ಘಾಟಿಸಿದ ಶಾಸಕ ರಾಮಲಿಂಗಾರೆಡ್ಡಿ
ಲಾಲ್​ಬಾಗ್​
ಕಿರಣ್ ಹನುಮಂತ್​ ಮಾದಾರ್
|

Updated on: May 26, 2023 | 11:45 AM

Share

ಬೆಂಗಳೂರು: ನಗರದ ಲಾಲ್​​ಬಾಗ್ನಲ್ಲಿ ಮಾವು(Mango), ಹಲಸಿನ(Jackfruit) ಮೇಳವನ್ನ ಆಯೋಜಿಸಲಾಗಿದ್ದು, ಸಚಿವ ರಾಮಲಿಂಗಾರೆಡ್ಡಿ, ಹಾಗೂ ಶಾಸಕ ಉದಯ್ ಗರುಡಾಚಾರ್​ ಉದ್ಘಾಟಿಸಿದರು. ಇಂದಿನಿಂದ ಜೂ.5ರವರೆಗೆ ಲಾಲ್​​ಬಾಗ್​ನಲ್ಲಿ ಮಾವು, ಹಲಸಿನ ಮೇಳ ನಡೆಯಲಿದ್ದು, ವಿವಿಧ ಜಿಲ್ಲೆಗಳಿಂದ ರೈತರು(Farmer) ಆಗಮಿಸಿದ್ದಾರೆ. ಇನ್ನು ಈ ಮೇಳದಲ್ಲಿ ತೋಟಗಾರಿಕೆ ಇಲಾಖೆ 10% ರಿಯಾಯಿತಿ ದರ ನಿಗದಿ ಮಾಡಿದೆ. ಒಂದು ಕಡೆ ಬಗೆ ಬಗೆಯ ಮಾವು. ಮತ್ತೊಂದು ಕಡೆ ಹಲಸಿನ ಹಣ್ಣು. ರೈತರಿಂದ ನೇರವಾಗಿ ಗ್ರಾಹಕರ ಕೈಗೆ ತಲುಪಿಸಲು ಮಾವು ಹಲಸಿನ ಮೇಳಕ್ಕೆ ತೋಟಾಗಾರಿಕೆ ಇಲಾಖೆ (Horticulture Department) ಇಂದು ಚಾಲನೆ ನೀಡಿದೆ. ವಿವಿಧ ರೀತಿಯ ಮಾವಿನ ಹಣ್ಣು ಹಾಗೂ ಹಲಸಿನ ಹಣ್ಣು ಕೊಳ್ಳಲು ಜನರು ಮುಗಿ ಬೀಳುತ್ತಿದ್ದಾರೆ. ಇಂದಿನಿಂದ 19 ದಿನಗಳ ಕಾಲ ಈ ಮೇಳ ನಡೆಯಲಿದೆ.

ಅನೇಕ ಬಗೆಯ ಮಾವಿನ ಹಣ್ಣುಗಳು

ಇನ್ನು ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಮಾವು ಹಲಸಿನ ಮೇಳಕ್ಕೆ ಚಾಲನೆ ಸಿಕ್ಕಿದ್ದು, ‌ಇಂದಿನಿಂದ ಮೇಳ ಶುರುವಾಗಿದೆ. ಈ ಮೇಳ ಜೂನ್ 13ರ ವರೆಗೆ ನಡೆಯಲಿದೆ. ಮೇಳದಲ್ಲಿ ಬಾದಾಮಿ, ರಸ್ಪೂರಿ, ಮಲ್ಲಿಕಾ, ಮಲ್ಗೋವಾ, ಕಾಡುಮಾವು, ಕಾಲಪಾಡು, ದಶೇರಿ, ಕೇಸರ್, ನೀಲಂ ಸೇರಿದಂತೆ ಹಲವು ಮಾವು ತಳಿಗಳನ್ನು ಈಡಲಾಗಿದ್ದು, ಸಿಲಿಕಾನ್​ ಸಿಟಿ ಜನರನ್ನ ಸೆಳೆಯುತ್ತಿದೆ.

ಇದನ್ನೂ ಓದಿ:Koppal News:ಕೆಜಿಗೆ 2.50 ಲಕ್ಷ ರೂ, 1 ಹಣ್ಣಿಗೆ 40 ಸಾವಿರ: ಕೊಪ್ಪಳದಲ್ಲಿ ಈ ಮಾವಿನ ಹಣ್ಣು ನೋಡಲು ಮುಗಿಬಿದ್ದ ಜನ

ಇನ್ನು ಕಳೆದ ವರ್ಷ ಕೊರೋನಾ ಬಂದು ಹೋದ ಬಳಿಕ ಅಂದರೆ 3 ವರ್ಷಗಳ ನಂತರ ಆಯೋಜನೆ ಮಾಡಲಾಗಿತ್ತು. ಅಂದು ನಡೆದ ಮಾವು, ಹಲಸಿನ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಆ ಮೇಳದಲ್ಲಿ 20ಕ್ಕೂ ಹೆಚ್ಚು ಬಗೆಯ ಮಾವಿನ ಹಣ್ಣುನ್ನು ಈಡಲಾಗಿತ್ತು. ಬಾದಾಮಿ, ಮಲ್ಲಿಕಾ, ರಸಪೂರಿ, ಬೈಗಂಪಲ್ಲಿ, ಸೇಂದೂರ, ತೋತಾಪುರಿ, ದಶಹರಿ, ಮಲಗೋವಾ, ಇಮಾಮ್ ಪಸಂದ್, ಕಾಲಾಪಾಡ್, ಕೇಸರ್, ಸಕ್ಕರೆಗುತ್ತಿ ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ಮಾವಿನ ಹಣ್ಣು ಮೇಳದಲ್ಲಿ ಸಿಕ್ಕಿತ್ತು. ರೈತರು ತಾವು ಬೆಳದ ಮಾವು ಮತ್ತು ಹಲಸಿನ ಹಣ್ಣಿಗೆ ತೋಟಾಗಾರಿಕೆ ಇಲಾಖೆ‌ ವೇದಿಕೆ ಸೃಷ್ಟಿ ಮಾಡಿತ್ತು. ಇದೀಗ ಮತ್ತೆ ಲಾಲ್‌ಬಾಗ್ ನಲ್ಲಿ ಮುಂದಿನ 19 ದಿನ ಮಾವು ಹಲಸಿನ ಪರಿಮಳವೇ ಪ್ರವಾಸಿಗರನ್ನು ಹಾಗೂ ಸಿಲಿಕಾನ್‌ ಸಿಟಿ ಜನರನ್ನ ಸೆಳೆಯಲಿದೆ.

ಇನ್ನು ಕಳೆದ ಬಾರಿ ಮಾಮ್ ಪಸಂದ್  200, ಮಲ್ಲಿಕಾ  100, ಬಾದಾಮಿ  100, ಸಕ್ಕರೆ ಗುತ್ತಿ  150, ಸಿಂಧೂರ  50, ರಸ್ಪುರಿ  80, ದೆಸೇರಿ  100, ಕಲಾಪಡ 120, ಮಲ್ಗೋವಾ  120, ತೋತಾಪುರಿ  30, ಅಮರಪಾಲಿ  100 ರೂಪಾಯಿ ಬೆಲೆ ನಿಗದಿ ಮಾಡಲಾಗಿತ್ತು. ಈ ಬಾರಿ % ರಿಯಾಯಿತಿ  ನಿಗದಿ ಮಾಡಲಾಗಿದೆ. ಮಾವಿನ ಹಣ್ಣು ಕೆಜಿಗೆ 32 ರಿಂದ ಶುರುವಾಗಿ 215 ರೂಪಾಯಿ ವರೆಗೆ ಇದೆ. ಹಲಸಿನ‌ ಹಣ್ಣು ಕೆಜಿಗೆ 25 ರೂ ನಿಗದಿಯಾಗಿದೆ. ಎಲ್ಲೋ‌ ಕೆಮಿಕಲ್‌ ಮಿಕ್ಸ್ ಮಾಡಿ ಹಣ್ಣು ಮಾಡೋ ಹಣ್ಣುಗಳನ್ನ ತಿನ್ನೋ ಬದಲು ನೈಸರ್ಗಿಕವಾಗಿ ಹಣ್ಣಾಗಿರೋ ಮಾವು ಹಲಸನ್ನ ನೇರವಾಗಿ ರೈತರಿಂದಲೇ ಖರೀದಿಸಿ ತಿನ್ನಲು ಜನರು ಮುಗಿ ಬೀಳುತ್ತಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!