AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಹೇಮಲತಾರನ್ನು ಏರ್ಲಿಫ್ಟ್ ಮಾಡಿದ ಬಿಜೆಪಿ

ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಹೇಮಲತಾ ನಾಯಕರಿಗೆ ಟಿಕೆಟ್ ಸಿಕ್ಕಿದ್ದು ಅಭ್ಯರ್ಥಿಗೆ ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ಆಗಮಿಸಲು ಬಿಜೆಪಿ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದೆ. ಹೇಮಲತಾ ಕೊಪ್ಪಳದಿಂದ ತುಮಕೂರಿಗೆ ಕಾರಿನಲ್ಲಿ ಬಂದಿದ್ದು ತುಮಕೂರಿನಿಂದ ಬೆಂಗಳೂರಿಗೆ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಹೇಮಲತಾರನ್ನು ಏರ್ಲಿಫ್ಟ್ ಮಾಡಿದ ಬಿಜೆಪಿ
ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಹೇಮಲತಾರನ್ನು ಏರ್ಲಿಫ್ಟ್ ಮಾಡಿದ ಬಿಜೆಪಿ
TV9 Web
| Updated By: ಆಯೇಷಾ ಬಾನು|

Updated on:May 24, 2022 | 3:09 PM

Share

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ( Vidhan Parishad Election 2022) ಇಂದು (ಮೇ 24) ಬಿಜಿಪಿ ಅಭ್ಯರ್ಥಿಗಳ ಹೆಸರು (BJP Candidates Names) ಪ್ರಕಟವಾಗಿದೆ. ಎಸ್ಸಿ ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಹೇಮಲತಾ ನಾಯಕ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಎಸ್.ಕೇಶವಪ್ರಸಾದ್ಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಬಸವರಾಜ ಹೊರಟ್ಟಿಗೆ ಬಿಜೆಪಿ ಟಿಕೆಟ್ ಫೈನಲ್ ಮಾಡಿದೆ. ಇನ್ನು ಇಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು ನಾಮಪತ್ರ ಸಲ್ಲಿಸಲು ಹೇಮಲತಾ ನಾಯಕ ಏರ್ಲಿಫ್ಟ್ ಮಾಡಲಾಗಿದೆ.

ಬಿಜೆಪಿ ಅಭ್ಯರ್ಥಿ ಹೇಮಲತಾರನ್ನು ಏರ್ಲಿಫ್ಟ್ ಮಾಡಿದ ಬಿಜೆಪಿ ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಹೇಮಲತಾ ನಾಯಕರಿಗೆ ಟಿಕೆಟ್ ಸಿಕ್ಕಿದ್ದು ಅಭ್ಯರ್ಥಿಗೆ ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ಆಗಮಿಸಲು ಬಿಜೆಪಿ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದೆ. ಹೇಮಲತಾ ಕೊಪ್ಪಳದಿಂದ ತುಮಕೂರಿಗೆ ಕಾರಿನಲ್ಲಿ ಬಂದಿದ್ದು ತುಮಕೂರಿನಿಂದ ಬೆಂಗಳೂರಿಗೆ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸಲಿದ್ದಾರೆ. ಕಾರಿನಲ್ಲಿ ಬಂದರೆ ಬೆಂಗಳೂರು ತಲುಪುವುದು ತಡವಾಗುವ ಹಿನ್ನೆಲೆಯಲ್ಲಿ ಏರ್ಲಿಫ್ಟ್ ಮಾಡಲಾಗುತ್ತಿದೆ. ತುಮಕೂರಿನಿಂದ ಜಕ್ಕೂರು ಏರೋಡ್ರಮ್ವರೆಗೆ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದ್ದು ಜಕ್ಕೂರು ಏರೋಡ್ರಮ್ಗೆ ಬಿಜೆಪಿ ಕಚೇರಿಯ ಕಾರು ಕಳಿಸಲಾಗಿದೆ. ಆ ಕಾರಿನ ಮೂಲಕ ಜಕ್ಕೂರಿನಿಂದ ಬಿಜೆಪಿ ಕಚೇರಿಗೆ ಹೇಮಲತಾ ಬರಲಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಬಿಫಾರಂ ಪಡೆದು ವಿಧಾನಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಟಾಸ್ಕ್​ಫೋರ್ಸ್ ರಚಿಸಿದ ಸೋನಿಯಾ ಗಾಂಧಿ;​ ಪ್ರಶಾಂತ್ ಕಿಶೋರ್​ ಮಾಜಿ ಸಹವರ್ತಿಗೂ ಸ್ಥಾನ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಈ ಹಿಂದೆ ಶಶಿಕಲಾ ಜೊಲ್ಲೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ತಡವಾಗುತ್ತಿದ್ದ ಕಾರಣಕ್ಕೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಸಲಾಗಿತ್ತು. ಇಂದು ಹೇಮಲತಾ ನಾಯಕ್ ಬಿ ಫಾರ್ಮ್ ಪಡೆಯಲು ತಡವಾಗುತ್ತಿರುವ ಕಾರಣಕ್ಕೆ ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ.

ಬಿಜೆಪಿಯ ಮೂವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಸೇರಿ ಮೂವರಿಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಬಿ ಫಾರಂ ವಿತರಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿ ಫಾರಂ ವಿತರಿಸಿದ್ದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿಗೆ ಮೂವರೂ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಸಚಿವರಾದ ಸಿ.ಸಿ.ಪಾಟೀಲ್, ಕೆ.ಗೋಪಾಲಯ್ಯ ಉಪಸ್ಥಿತರಿದ್ದರು. ಇದನ್ನೂ ಓದಿ: ಜನರು ದೂರು ಸಲ್ಲಿಸಲು ವಾಟ್ಸಪ್ ನಂಬರ್ ಬಿಡುಗಡೆಗೊಳಿಸಿದ ಬೆವಿಕಂ

BSY ಪುತ್ರ ವಿಜಯೇಂದ್ರಗೆ ಬೇರೆ ಬೇರೆ ಅವಕಾಶ ಇದೆ ಪರಿಷತ್​​ನ 4 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ಟಿಕೆಟ್ ಸಿಕ್ಕ ನಾಲ್ವರು ಅಭ್ಯರ್ಥಿಗಳು ನನ್ನ ಟೀಮ್​ನ ಸಹ ಸದಸ್ಯರು. ನಾಲ್ವರೂ ಅಭ್ಯರ್ಥಿಗಳಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸುತ್ತೇನೆ. ರಾಷ್ಟ್ರೀಯ ನಾಯಕರು ಹೊರಟ್ಟಿ ಅವರನ್ನು ಆಯ್ಕೆ ಮಾಡಿದ್ದಾರೆ. ಮೋದಿ ಸರ್ಕಾರ ಅದ್ಭುತವಾದ ತೀರ್ಮಾನವನ್ನು ತೆಗೆದುಕೊಂಡಿದೆ. ಪ್ರಧಾನಿ ಮೋದಿಯವರ ಒಪ್ಪಿಗೆ ಕೂಡ ತೆಗೆದುಕೊಳ್ಳಬೇಕಾಗುತ್ತದೆ. BSY ಪುತ್ರ ವಿಜಯೇಂದ್ರಗೆ ಬೇರೆ ಬೇರೆ ಅವಕಾಶ ಇದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ರು.

Published On - 2:58 pm, Tue, 24 May 22

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು