AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಮನೆಗೆ ಬರುವ ಸೊಸೆಗೆ ನೀನು ಹೊಸದಾಗಿ ಬಂದವಳು ಅನ್ನೋಕಾಗುತ್ತಾ?: ಎಂಎಲ್​ಸಿ ಸಿ.ಎಂ.ಇಬ್ರಾಹಿಂ ಪ್ರಶ್ನೆ

ಸಿದ್ದರಾಮಯ್ಯ ಸಿಎಂ ಆದಾಗ ಒಳ್ಳೆಯ ಟೀಂ ಸಿಕ್ಕಿತ್ತು, ಆದರೆ ಬಿಎಸ್‌ವೈಗೆ ಸಿಗಲಿಲ್ಲ. ಸಿಎಂ ಯಡಿಯೂರಪ್ಪ, ಪುತ್ರ ವಿಜಯೇಂದ್ರ ಇಬ್ಬರೇ ಟೀಂ ಆಗಿದ್ದಾರೆ. ಸಿಎಂ ಯಡಿಯೂರಪ್ಪಗೆ ಜಾತಿ ಬೆಂಬಲ ಇದೆ. ಬಿಎಸ್‌ವೈ ಬಿಜೆಪಿ ಬಿಟ್ಟರೆ ಬಿಜೆಪಿಗೆ ಬರೋದು 40 ಸೀಟು ಎಂದು ಅವರು ವ್ಯಾಖ್ಯಾನಿಸಿದರು.

Karnataka Politics: ಮನೆಗೆ ಬರುವ ಸೊಸೆಗೆ ನೀನು ಹೊಸದಾಗಿ ಬಂದವಳು ಅನ್ನೋಕಾಗುತ್ತಾ?: ಎಂಎಲ್​ಸಿ ಸಿ.ಎಂ.ಇಬ್ರಾಹಿಂ ಪ್ರಶ್ನೆ
ಸಿ.ಎಂ.ಇಬ್ರಾಹಿಂ
TV9 Web
| Edited By: |

Updated on: Jun 26, 2021 | 5:24 PM

Share

ಬೆಂಗಳೂರು: ಮದುವೆಯಾಗಿ ಮನೆಗೆ ಬರುವ ಸೊಸೆ ಹೊಸದಾಗಿಯೇ ಬರೋದು, ಸೊಸೆಗೆ ನೀನು ವಲಸೆ ಬಂದವಳು ಅಂತ ಹೇಳೋಕಾಗುತ್ತಾ? ಎಂದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ ಕಾಂಗ್ರೆಸ್​ನ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ. ಕಾಂಗ್ರೆಸ್​ನಲ್ಲಿ ನಡೆಯುತ್ತಿರುವ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಪೈಪೋಟಿಯ ಬಗ್ಗೆಯೇ ಅವರು ಈ ಪ್ರತಿಕ್ರಿಯೆ ನೀಡಿರುವುದು. ‘ಸೊಸೆ ಬಂದು ಕೆಲವು ದಿನಕ್ಕೆ ಕೀಲಿಕೈ ಅವಳ ಕೈಗೆ ಸೇರುತ್ತದೆ. ಈಗ ಸಿದ್ದರಾಮಯ್ಯ ಕೈಗೆ ಕೀಲಿಕೈ ಸಿಕ್ಕಿದೆ. ವಲಸಿಗ ಹೊಸಬ ಎಂಬ ಜಟಾಪಟಿ ಮುಂದೆ ನಡೆಯಲ್ಲ. ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಮಾಡಿದ್ದು ಯಾರು? ಬಳ್ಳಾರಿ ಪಾದಯಾತ್ರೆಯಲ್ಲಿ ಅವರನ್ನ ಮುಂದೆ ತಂದಿದ್ಯಾರು?. ಇಂಥವನೊಬ್ಬ ಇದ್ದಾನೆ ಎಂದು ಹೇಳಿದ್ದೇ ನಾವು’ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಅಂತ ಹೇಳಿದ್ಯಾರು? ಅವರು ಹೀರೋ ಇದ್ದರೂ ಹಿನ್ನೆಲೆ ಗಾಯಕರು ಯಾರು? ಸ್ವಲ್ಪ ಕ್ಯಾಸೆಟ್ ತೆಗೆದು ನೋಡಿ, ಹಿನ್ನೆಲೆ ಗಾಯಕ ಕಾಣಿಸಲ್ಲ. 1ರೂ.ಗೆ ಅಕ್ಕಿ, ಮಧ್ಯಾಹ್ನದ ಊಟ ತಂದವರು ಯಾರು? ಆ ಯೋಜನೆಯನ್ನು ತಮಿಳುನಾಡಿನಲ್ಲಿ ಕುಳಿತು ಅಧ್ಯಯನ ಮಾಡಿ ನಾನು ಪರಿಚಯಿಸಿದ್ದೆ. ಯೋಜನಾ ಆಯೋಗದ ಉಪಾಧ್ಯಕ್ಷನಾಗಿ ಯೋಜನೆ ಕೊಟ್ಟಿದ್ದೆ. ಆ ಯೋಜನೆ ಸಕ್ಸಸ್ ಆಯಿತು ಎಂದು ಅವರು ಸುದ್ದಿಗಾರರಿಗೆ ವಿವರಿಸಿದರು.

ಸಿದ್ದರಾಮಯ್ಯ ಸಿಎಂ ಆದಾಗ ಒಳ್ಳೆಯ ಟೀಂ ಸಿಕ್ಕಿತ್ತು, ಆದರೆ ಬಿಎಸ್‌ವೈಗೆ ಸಿಗಲಿಲ್ಲ. ಸಿಎಂ ಯಡಿಯೂರಪ್ಪ, ಪುತ್ರ ವಿಜಯೇಂದ್ರ ಇಬ್ಬರೇ ಟೀಂ ಆಗಿದ್ದಾರೆ. ಸಿಎಂ ಯಡಿಯೂರಪ್ಪಗೆ ಜಾತಿ ಬೆಂಬಲ ಇದೆ. ಬಿಎಸ್‌ವೈ ಬಿಜೆಪಿ ಬಿಟ್ಟರೆ ಬಿಜೆಪಿಗೆ ಬರೋದು 40 ಸೀಟು ಎಂದು ಅವರು ವ್ಯಾಖ್ಯಾನಿಸಿದರು.

ಮೊದಲು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿ ಬಳಿಕ ಶಾಸಕರ ಅಭಿಪ್ರಾಯ ಪಡೆದು ಮುಂದಿನ ಸಿಎಂ ಯಾರು ಎಂಬುದು ತೀರ್ಮಾನವಾಗಬೇಕು. ರಾಷ್ಟ್ರೀಯ ಪಕ್ಷದಲ್ಲಿ ಒಂದು ಪದ್ಧತಿ ಇರುತ್ತದೆ. ಶೇಕಡಾ 90ರಷ್ಟು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಹೀಗಾಗಿ ಈಗಲೇ ಏನೂ ಹೇಳೋಕೆ ಆಗುವುದಿಲ್ಲ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಚೇತನ್​ Vs ಶಿವರಾಮ್​ ಹೆಬ್ಬಾರ್​ ಜಟಾಪಟಿ; ಸಚಿವರ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ​

ಸುದ್ದಿ ವಿಶ್ಲೇಷಣೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ, ಕಾಂಗ್ರೆಸ್​ನಲ್ಲಿ ಈಗಲೇ ಹಲವಾರು ಮುಖ್ಯಮಂತ್ರಿಗಳು!

(MLC CM Ibrahim analysis Karnataka Politics Congress leadership fight in Bengaluru)

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು