AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರಾಗುವ ಕನಸು ಭಗ್ನ.. ಪರಿಷತ್ ಕಲಾಪದಲ್ಲಿ ನಿದ್ದೆಗೆ ಜಾರಿದ ಹೆಚ್.ವಿಶ್ವನಾಥ್ !

ನಾಮನಿರ್ದೇಶನದ ಆಧಾರದಲ್ಲಿ ಸಚಿವ ಸ್ಥಾನ ಪಡೆಯುವುದು ಅಸಾಧ್ಯವೆಂದು ಹೈಕೋರ್ಟ್ ಆದೇಶ ಹೊರಡಿತ್ತು. ಈಗ ಅದೇ ಅದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ವಿಧಾನಪರಿಷತ್​ಗೆ ರಾಜ್ಯ ಸರ್ಕಾರ ಹೆಚ್.ವಿಶ್ವನಾಥ್ ಅವರ ನಾಮನಿರ್ದೇಶನ ಮಾಡಿತ್ತು.

ಸಚಿವರಾಗುವ ಕನಸು ಭಗ್ನ.. ಪರಿಷತ್ ಕಲಾಪದಲ್ಲಿ ನಿದ್ದೆಗೆ ಜಾರಿದ ಹೆಚ್.ವಿಶ್ವನಾಥ್ !
ಹೆಚ್.ವಿಶ್ವನಾಥ್
ಆಯೇಷಾ ಬಾನು
| Edited By: |

Updated on:Jan 28, 2021 | 2:08 PM

Share

ಬೆಂಗಳೂರು: ಸಚಿವರಾಗುವ MLC ಹೆಚ್.ವಿಶ್ವನಾಥ್ ಕನಸು ನುಚ್ಚು ನೂರಾಗಿದೆ. ನಾಮನಿರ್ದೇಶನದ ಆಧಾರದಲ್ಲಿ ಸಚಿವ ಸ್ಥಾನ ಸಾಧ್ಯವಿಲ್ಲ ಎಂಬ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇನ್ನು ಸುಪ್ರೀಂ ಕೋರ್ಟ್ ಆದೇಶ ಹೊರಬೀಳುತ್ತಿದ್ದಾಗ ರಾಜ್ಯ ಮೇಲ್ಮನೆಯ ಕಲಾಪದ ವೇಳೆ ಹೆಚ್​. ವಿಶ್ವನಾಥ್ ನಿದ್ರೆಗೆ ಜಾರಿದ್ದಾರೆ.

ನಾಮನಿರ್ದೇಶನದ ಆಧಾರದಲ್ಲಿ ಸಚಿವ ಸ್ಥಾನ ಪಡೆಯುವುದು ಅಸಾಧ್ಯವೆಂದು ಹೈಕೋರ್ಟ್ ಆದೇಶ ಹೊರಡಿತ್ತು. ಈಗ ಅದೇ ಅದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ವಿಧಾನ ಪರಿಷತ್​ಗೆ ರಾಜ್ಯ ಸರ್ಕಾರ ಹೆಚ್.ವಿಶ್ವನಾಥ್ ಅವರ ನಾಮನಿರ್ದೇಶನ ಮಾಡಿತ್ತು. ಆದ್ರೆ ಅನರ್ಹತೆ ಪ್ರಕರಣ ಹಿನ್ನೆಲೆಯಲ್ಲಿ ವಿಶ್ವನಾಥ್​ಗೆ ಮತ್ತೆ ಆಯ್ಕೆ ಆಗುವಂತೆ ‘ಸುಪ್ರೀಂ’ ಆದೇಶಿಸಿತ್ತು. ನಾಮನಿರ್ದೇಶನ ಬಳಿಕ ಸಚಿವರಾಗಲು ವಿಶ್ವನಾಥ್ ಪ್ರಯತ್ನ ಪಟ್ಟಿದ್ದರು. ಆದ್ರೆ ಸಚಿವ ಸ್ಥಾನ ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

ನಿದ್ರೆಗೆ ಜಾರಿದ ವಿಶ್ವನಾಥ್ ಇಂದಿನಿಂದ ವಿಧಾನ ಪರಿಷತ್ ಕಲಾಪ ಶುರುವಾಗಿದೆ. ಕಲಾಪದ ವೇಳೆ ಹೆಚ್​.ವಿಶ್ವನಾಥ್ ನಿದ್ರೆಗೆ ಜಾರಿರುವ ದೃಶ್ಯ ಸೆರೆಯಾಗಿದೆ.

ನನಗೆ ಸಚಿವರ ಸಹಾನುಭೂತಿ ಬೇಕಿಲ್ಲ ಇನ್ನು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರದಲ್ಲಿ ಮಾತನಾಡಿದ ಬಿಜೆಪಿ ಎಂಎಲ್‌ಸಿ H.ವಿಶ್ವನಾಥ್ ನನಗೆ ಸಚಿವರ ಸಹಾನುಭೂತಿ ಬೇಕಿಲ್ಲ. ನಮ್ಮ 17 ಜನರ ಟೀಂ ಸಿಎಂ ಜೊತೆ ಮಾತನಾಡಬೇಕಿತ್ತು. ಅದು ಬಿಟ್ಟು ಅವರ ಬಾಯಿಮಾತಿನ ಸಹಾನುಭೂತಿ ಬೇಕಿಲ್ಲ. ನನ್ನನ್ನು ಒಬ್ಬಂಟಿಯಲ್ಲ ಎಂದು ಹೇಳಿದ್ದಕ್ಕೆ ಅಭಿನಂದಿಸುವೆ. ನಾವೆಲ್ಲ ಜತೆಗೇ ಇದ್ದೇವೆ, ಆದ್ರೆ ಅವರು ಮಂತ್ರಿಯಾಗಿದ್ದಾರೆ. ಎಲ್ಲವೂ ಪವರ್ ಪಾಲಿಟಿಕ್ಸ್ ಬಿಡಿ. ಪಕ್ಷ ನನಗೆ ಸಭಾಪತಿ ಹುದ್ದೆ ಕಲ್ಪಿಸಿದರೆ ನೋಡೋಣ ಎಂದು ಹೇಳಿದ್ದಾರೆ.

Kannada News Live| ಸಚಿವರಾಗುವ ಎಂಎಲ್​ಸಿ ಹೆಚ್.ವಿಶ್ವನಾಥ್ ಕನಸು ಭಗ್ನ

Published On - 1:48 pm, Thu, 28 January 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ