AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾಫಿ ಕೆಫೆಯ ಮಹಿಳೆಯರ ಶೌಚಾಲಯದಲ್ಲಿ ​ಮೊಬೈಲ್ ಇಟ್ಟಿದ್ದ ಆರೋಪಿ ಅರೆಸ್ಟ್​​

ಬೆಂಗಳೂರಿನ ಬಿಇಎಲ್​ ರಸ್ತೆಯಲ್ಲಿರುವ ಥರ್ಡ್ ವೇವ್ ಕೆಫೆಯ ಮಹಿಳೆಯರ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್​ ಇರಿಸಲಾಗಿತ್ತು. ಇದನ್ನು ಕಂಡ ಮಹಿಳೆಯೊಬ್ಬರು ಪರಿಶೀಲನೆ ನಡೆಸಿದಾಗ, ಮೊಬೈಲ್​ನಲ್ಲಿ ವಿಡಿಯೋ ರೆಕಾರ್ಡರ್​​ ಆನ್​ ಆಗಿತ್ತು. ಇದರಿಂದ ಗಾಬರಿಗೊಂಡ ಮಹಿಳೆ ಮುಂದೆ ಮಾಡಿದ್ದೇನು? ಈ ಸುದ್ದಿ ಓದಿ.

ಬೆಂಗಳೂರು: ಕಾಫಿ ಕೆಫೆಯ ಮಹಿಳೆಯರ ಶೌಚಾಲಯದಲ್ಲಿ ​ಮೊಬೈಲ್ ಇಟ್ಟಿದ್ದ ಆರೋಪಿ ಅರೆಸ್ಟ್​​
ಆರೋಪಿ ಮನೋಜ್
ವಿವೇಕ ಬಿರಾದಾರ
|

Updated on:Aug 11, 2024 | 1:04 PM

Share

ಬೆಂಗಳೂರು, ಆಗಸ್ಟ್​ 11: ನಗರದ ಬಿಇಎಲ್​ ರಸ್ತೆಯಲ್ಲಿರುವ ಥರ್ಡ್ ವೇವ್ ಕೆಫೆಯ (Third Wave Coffee) ಮಹಿಳೆಯರ ಶೌಚಾಲಯದಲ್ಲಿ (Woman Toilet) ವಿಡಿಯೋ ಚಿತ್ರಕರಣಕ್ಕೆ​​ ಮೊಬೈಲ್ (Mobile) ಇಟ್ಟಿದ್ದ ಆರೋಪಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ 23 ವರ್ಷದ ಮನೋಜ್ ಬಂಧಿತ ಆರೋಪಿ. ಆರೋಪಿ ಮನೋಜ್ ಇದೇ ಕಾಫಿ ಶಾಪ್​ನಲ್ಲಿ ಕಾಫಿ ಮೇಕರ್ ಆಗಿ ಕೆಲಸ ಮಾಡುತ್ತಿದ್ದನು. ಆರೋಪಿ ಮನೋಜ್​ ಶನಿವಾರ (ಆ.10) ಬೆಳಗ್ಗೆ ಮಹಿಳೆಯರ ಶೌಚಾಲಯಕ್ಕೆ ಹೋಗಿದ್ದಾನೆ.

ಅಲ್ಲಿ ಕಸದ ಬುಟ್ಟಿಗೆ ಹೋಲ್​ ಮಾಡಿದ್ದಾನೆ. ನಂತರ ಮೊಬೈಲ್​​ ಅನ್ನು ಫ್ಲೈಟ್​ ಮೂಡ್​​ಗೆ ಹಾಕಿ ವಿಡಿಯೋ ಚಿತ್ರಕರಣಕ್ಕೆ ಇರಿಸಿ, ಹೊರ ಬಂದು ಯಥಾಪ್ರಕಾರ ತನ್ನ ಕೆಲಸದಲ್ಲಿ ತೊಡಗಿಕೊಂಡಿದ್ದಾನೆ. ನಂತರ ಶೌಚಾಲಯಕ್ಕೆ ಹೋದ ಮಹಿಳೆಯೊಬ್ಬರು ಮೊಬೈಲ್​ ಇರುವುದನ್ನು ಗಮನಿಸಿದ್ದಾರೆ. ತಕ್ಷಣವೇ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಕೂಡಲೆ ಸ್ಥಳಕ್ಕೆ ಬಂದ ಸದಾಶಿವನಗರ ಪೊಲೀಸರು ಪರಿಶೀಲನೆ ನಡೆಸಿ, ಆರೋಪಿ ಮನೋಜ್​ನನ್ನು ಬಂಧಿಸಿದ್ದಾರೆ.

ಈ ಬಗ್ಗೆ ಸಿದ್ದಾರ್ಥ ಎಂಬುವರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ, “ಬೆಂಗಳೂರಿನ ಥರ್ಡ್ ವೇವ್ ಕಾಫಿ ಔಟ್‌ಲೆಟ್‌ನ ವಾಶ್‌ರೂಮ್‌ನಲ್ಲಿ ಹಿಡನ್ ಕ್ಯಾಮೆರಾ ಪತ್ತೆಯಾಗಿದೆ ಎಂದು ನಂಬಲಾಗುತ್ತಿಲ್ಲ. ಅಂತಹ ಜನಪ್ರಿಯ ಸ್ಥಳದಲ್ಲಿ ಇದು ಸಂಭವಿಸಬಹುದು ಎಂಬುದು ಹುಚ್ಚುತನದ ಸಂಗತಿ ಎಂದುಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಯುವತಿಯ ಎದೆ ಭಾಗ ಮುಟ್ಟಿ ಪರಾರಿಯಾಗಿದ್ದ ಆರೋಪಿ ಬಂಧನ

ಇದಕ್ಕೆ ಥರ್ಡ್ ವೇವ್ ಕೆಫೆ ಇಂಡಿಯಾ ಪ್ರತಿಕ್ರಿಯಿಸಿದ್ದು, ನಮ್ಮ ಬೆಂಗಳೂರಿನ ಬಿಇಎಲ್ ರಸ್ತೆಯ ಶಾಖೆಯಲ್ಲಿ ನಡೆದ ಅಹಿತಕರ ಘಟನೆಗೆ ನಾವು ವಿಷಾದಿಸುತ್ತೇವೆ. ಮತ್ತು ಥರ್ಡ್ ವೇವ್ ಕಾಫಿಯಲ್ಲಿ ಅಂತಹ ಕ್ರಮಗಳು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಸಿಬ್ಬಂದಿಯನ್ನು ತಕ್ಷಣವೇ ವಜಾಗೊಳಿಸಿದ್ದೇವೆ. ನಮ್ಮ ಗ್ರಾಹಕರ ಸುರಕ್ಷತೆ ನಮಗೆ ಬಹಳ ಮುಖ್ಯ. ಈ ಪರಿಸ್ಥಿತಿಯನ್ನು ನಾವು ತ್ವರಿತವಾಗಿ ಪರಿಹರಿಸಿದ್ದೇವೆ ಎಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:56 pm, Sun, 11 August 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?