AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದುಗುಂಟೆಪಾಳ್ಯ: ರಾತ್ರಿ ವೇಳೆ ಡೆಲಿವರಿ ಬಾಯ್​​ಗಳ ಮೊಬೈಲ್ ಎಗರಿಸುತ್ತಿದ್ದ ಅಸ್ಸಾಂ ಯುವಕರು ಅಂದರ್​​

ಕಳೆದ ಕೆಲ ದಿನಗಳ ಹಿಂದೆ ಸದ್ದುಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡೆಲಿವರಿ ಬಾಯ್ ಮೊಬೈಲ್ ಸುಲಿಗೆಯಾಗಿತ್ತು. ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡಿದ್ದ ಪೊಲೀಸರು, ವಿಶೇಷ ತಂಡ ರಚಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Jagadisha B
| Updated By: ಸಾಧು ಶ್ರೀನಾಥ್​|

Updated on:Aug 02, 2023 | 6:29 PM

Share

ಇದು ಬೆಂಗಳೂರಿನ ಡೆಲಿವರಿ ಬಾಯ್ (delivery boy) ಗಳು ನೋಡಲೇ ಬೇಕಾದ ಸ್ಟೋರಿ.. ಬೆಂಗಳೂರಿನಲ್ಲಿ ಖತರ್ನಾಕ್ ಮೊಬೈಲ್ ಸುಲಿಗೆಕೋರರ (Mobile snatching) ಬಂಧನವಾಗಿದೆ. ಹೊಟ್ಟೆಪಾಡಿಗಾಗಿ ರಾತ್ರಿ ವೇಳೆ ಎಲೆಕ್ಟ್ರಿಕ್ ಬೈಕ್ನಲ್ಲಿ ಡೆಲಿವರಿ ಮಾಡೋ ಹುಡುಗರೇ ಇವರ ಟಾರ್ಗೇಟ್. ರಾತ್ರಿ ವೇಳೆ ಡೆಲಿವರಿ ಬಾಯ್ ಗಳ ಮೊಬೈಲ್ ಗಳನ್ನ ಸುಲಿಗೆ ಮಾಡೋ ಆರೋಪಿಗಳು ಇವರು. ಯುಲು ಅಂತಹ ಸಣ್ಣ ಎಲೆಕ್ಟ್ರಿಕ್ ಬೈಕ್ ಗಳ ಮುಂದೆ ಕ್ಲಿಪ್ ಹಾಕಿ ಮೊಬೈಲ್ ಸಿಕ್ಕಿಸುತ್ತಾರೆ. ಒಂದು ಕಡೆ ರೂಟ್ ಮ್ಯಾಪ್ ನೋಡಲು ಹೀಗೆ ಕ್ಲಿಪ್ ಹಾಕಿ ಸಿಕ್ಕಿಸಿಕೊಳ್ಳೂವ ಡೆಲಿವರಿ ಬಾಯ್ ಗಳು ಮತ್ತೊಂದು ಕಡೆ ಅದನ್ನೇ ಬಂಡವಾಳ ಮಾಡಿಕೊಳ್ಳೊ ಆರೋಪಿಗಳು ಇವರು. ಕ್ಷಣಾರ್ಧದಲ್ಲಿ ಹಿಂಬದಿಯಿಂದ ಬೈಕ್ನಲ್ಲಿ ಬಂದು ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದ ಆರೋಪಿಗಳು -ಅಸ್ಸಾಂ ಮೂಲದ ರಾಕೇಶ್ ಹಾಗೂ ಮಲ್ಲಿಕ್ ಬಂಧಿತ ಆರೋಪಿಗಳು.

ಕಳೆದ ಕೆಲ ದಿನಗಳ ಹಿಂದೆ ಸದ್ದುಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡೆಲಿವರಿ ಬಾಯ್ ಮೊಬೈಲ್ ಸುಲಿಗೆಯಾಗಿತ್ತು. ಸುಲಿಗೆ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದು ಡನ್ಜೋ ಡೆಲಿವರಿ ಬಾಯ್ ತನ್ನ ಕೈ ಮುರಿದುಕೊಂಡಿದ್ದ. ನಂತರ ಸದ್ದುಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ (saddugunte palya police station) ಪ್ರಕರಣ ದಾಖಲಿಸಿದ್ದ. ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡಿದ್ದ ಪೊಲೀಸರು, ವಿಶೇಷ ತಂಡ ರಚಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ಬರೊಬ್ಬರಿ 32 ಮೊಬೈಲ್ ಸುಲಿಗೆ ಪ್ರಕರಣಗಳು ಬೆಳಕಿಗೆ ಬಂದಿವೆ. ಸುದ್ದಗುಂಟೆ ಪಾಳ್ಯ ಪೊಲೀಸರು, ಸದ್ಯ 25 ಮೊಬೈಲ್ ರಿಕವರಿ ಮಾಡಿದ್ದು, ಆರೋಪಿಗಳ ವಿಚಾರಣೆ ಮುಂದುವರೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published On - 6:28 pm, Wed, 2 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ