AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ದಾಳಿ ವೇಳೆ ಕಂತೆ-ಕಂತೆ ಹಣ ಪತ್ತೆ: ಅ.16 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾದ ಬಿಜೆಪಿ

ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳಿಗೆ ರೇಟ್ ಫಿಕ್ಸ್​​ ಮಾಡಿದ್ದಾರೆ. ಕಲಾವಿದರಿಂದಲೂ ಕಮಿಷನ್ ಕೇಳುತ್ತಿದ್ದಾರೆ, ಇದು ಎಟಿಎಂ ಸರ್ಕಾರವಾಗಿದೆ. ಸರ್ಕಾರದ ಗುತ್ತಿಗೆದಾರರಿಗೆ 650 ಕೋಟಿ ರೂ. ಬಿಡುಗಡೆ ಮಾಡಿದೆ. ಬಿಲ್ ಪಾವತಿ ಬಳಿಕ ಐಟಿ ದಾಳಿಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್​​ ಪಕ್ಷಕ್ಕೂ ಸಂಬಂಧವಿದೆ ಎಂದು ನಳಿನ್​ ಕುಮಾರ್​ ಕಟೀಲ್​ ಹೇಳಿದರು.

ಐಟಿ ದಾಳಿ ವೇಳೆ ಕಂತೆ-ಕಂತೆ ಹಣ ಪತ್ತೆ:  ಅ.16 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾದ ಬಿಜೆಪಿ
ಬಿಜೆಪಿ ಪ್ರತಿಭಟನೆ
Anil Kalkere
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 15, 2023 | 3:10 PM

Share

ಬೆಂಗಳೂರು, ಅ.15: ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ‌(ಅ.16) ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ನಿರ್ಧಾರ‌ ಮಾಡಲಾಗಿದೆ. ಈ ಹಿನ್ನಲೆ ಇಂದು(ಅ.15) ಬಿಜೆಪಿ ಕಚೇರಿಯಲ್ಲಿ‌ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ ಕುಮಾರ್​ ಕಟೀಲ್(Nalin Kumar Kateel)  ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ವೇಳೆ ನಾಳಿನ ‌ಪ್ರತಿಭಟನೆಯ ರೂಪರೇಷೆ ಹಾಗೂ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಇನ್ನು ಸಭೆಯ ಬಳಿಕ ಮಾತನಾಡಿದ ನಳಿನ್​ ಕುಮಾರ್​ ಕಟೀಲ್​ ‘ಕರ್ನಾಟಕದಲ್ಲಿ ಲೂಟಿ ಸರ್ಕಾರ ಜಾರಿಯಲ್ಲಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯಿಂದ ಸರ್ಕಾರದ ವಿರುದ್ಧ ನಾಳೆ, ನಾಡಿದ್ದು ಪ್ರತಿಭಟನೆ

ಹೌದು, ಬೆಂಗಳೂರಿನಲ್ಲಿ ಸಭೆಯ ಬಳಿಕ ಮಾತನಾಡಿ ‘ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳಿಗೆ ರೇಟ್ ಫಿಕ್ಸ್​​ ಮಾಡಿದ್ದಾರೆ. ಕಲಾವಿದರಿಂದಲೂ ಕಮಿಷನ್ ಕೇಳುತ್ತಿದ್ದಾರೆ, ಇದು ಎಟಿಎಂ ಸರ್ಕಾರವಾಗಿದೆ. ಸರ್ಕಾರದ ಗುತ್ತಿಗೆದಾರರಿಗೆ 650 ಕೋಟಿ ರೂ. ಬಿಡುಗಡೆ ಮಾಡಿದೆ. ಬಿಲ್ ಪಾವತಿ ಬಳಿಕ ಐಟಿ ದಾಳಿಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್​​ ಪಕ್ಷಕ್ಕೂ ಸಂಬಂಧವಿದೆ. ಈ ಹಿನ್ನಲೆ ಸರ್ಕಾರದ ವಿರುದ್ಧ ನಾಳೆ ಮತ್ತು ನಾಡಿದ್ದು ಪ್ರತಿಭಟನೆ ಮಾಡುತ್ತೇವೆ. ನೈತಿಕ ಹೊಣೆಹೊತ್ತು ಸಿಎಂ ಮತ್ತು ಡಿಸಿಎಂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ಸತತ 42 ಗಂಟೆಗಳ ಬಳಿಕ ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯ: ವಿಚಾರಣೆಗೆ ಹಾಜರಾಗುವಂತೆ ನೋಟಿಸ್​​

ಇನ್ನು ಈ ಹಣ ಲೂಟಿ ಹೊಡೆದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ಜಿಲ್ಲೆಗಳಲ್ಲಿ ಮತ್ತು ನಾಡಿದ್ದು ಮಂಡಲಗಳಲ್ಲಿ ಬೃಹತ್ ಹೋರಾಟ ಮಾಡಲಿದ್ದೇವೆ ಎಂದಿದ್ದಾರೆ. ಇನ್ನು ಈ ಸಭೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರಾದ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಇನ್ನು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Sun, 15 October 23

Follow Us
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ