AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ದಾಳಿ ವೇಳೆ ಕಂತೆ-ಕಂತೆ ಹಣ ಪತ್ತೆ: ಅ.16 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾದ ಬಿಜೆಪಿ

ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳಿಗೆ ರೇಟ್ ಫಿಕ್ಸ್​​ ಮಾಡಿದ್ದಾರೆ. ಕಲಾವಿದರಿಂದಲೂ ಕಮಿಷನ್ ಕೇಳುತ್ತಿದ್ದಾರೆ, ಇದು ಎಟಿಎಂ ಸರ್ಕಾರವಾಗಿದೆ. ಸರ್ಕಾರದ ಗುತ್ತಿಗೆದಾರರಿಗೆ 650 ಕೋಟಿ ರೂ. ಬಿಡುಗಡೆ ಮಾಡಿದೆ. ಬಿಲ್ ಪಾವತಿ ಬಳಿಕ ಐಟಿ ದಾಳಿಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್​​ ಪಕ್ಷಕ್ಕೂ ಸಂಬಂಧವಿದೆ ಎಂದು ನಳಿನ್​ ಕುಮಾರ್​ ಕಟೀಲ್​ ಹೇಳಿದರು.

ಐಟಿ ದಾಳಿ ವೇಳೆ ಕಂತೆ-ಕಂತೆ ಹಣ ಪತ್ತೆ:  ಅ.16 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾದ ಬಿಜೆಪಿ
ಬಿಜೆಪಿ ಪ್ರತಿಭಟನೆ
Anil Kalkere
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 15, 2023 | 3:10 PM

Share

ಬೆಂಗಳೂರು, ಅ.15: ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ‌(ಅ.16) ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ನಿರ್ಧಾರ‌ ಮಾಡಲಾಗಿದೆ. ಈ ಹಿನ್ನಲೆ ಇಂದು(ಅ.15) ಬಿಜೆಪಿ ಕಚೇರಿಯಲ್ಲಿ‌ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ ಕುಮಾರ್​ ಕಟೀಲ್(Nalin Kumar Kateel)  ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ವೇಳೆ ನಾಳಿನ ‌ಪ್ರತಿಭಟನೆಯ ರೂಪರೇಷೆ ಹಾಗೂ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಇನ್ನು ಸಭೆಯ ಬಳಿಕ ಮಾತನಾಡಿದ ನಳಿನ್​ ಕುಮಾರ್​ ಕಟೀಲ್​ ‘ಕರ್ನಾಟಕದಲ್ಲಿ ಲೂಟಿ ಸರ್ಕಾರ ಜಾರಿಯಲ್ಲಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯಿಂದ ಸರ್ಕಾರದ ವಿರುದ್ಧ ನಾಳೆ, ನಾಡಿದ್ದು ಪ್ರತಿಭಟನೆ

ಹೌದು, ಬೆಂಗಳೂರಿನಲ್ಲಿ ಸಭೆಯ ಬಳಿಕ ಮಾತನಾಡಿ ‘ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳಿಗೆ ರೇಟ್ ಫಿಕ್ಸ್​​ ಮಾಡಿದ್ದಾರೆ. ಕಲಾವಿದರಿಂದಲೂ ಕಮಿಷನ್ ಕೇಳುತ್ತಿದ್ದಾರೆ, ಇದು ಎಟಿಎಂ ಸರ್ಕಾರವಾಗಿದೆ. ಸರ್ಕಾರದ ಗುತ್ತಿಗೆದಾರರಿಗೆ 650 ಕೋಟಿ ರೂ. ಬಿಡುಗಡೆ ಮಾಡಿದೆ. ಬಿಲ್ ಪಾವತಿ ಬಳಿಕ ಐಟಿ ದಾಳಿಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್​​ ಪಕ್ಷಕ್ಕೂ ಸಂಬಂಧವಿದೆ. ಈ ಹಿನ್ನಲೆ ಸರ್ಕಾರದ ವಿರುದ್ಧ ನಾಳೆ ಮತ್ತು ನಾಡಿದ್ದು ಪ್ರತಿಭಟನೆ ಮಾಡುತ್ತೇವೆ. ನೈತಿಕ ಹೊಣೆಹೊತ್ತು ಸಿಎಂ ಮತ್ತು ಡಿಸಿಎಂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ಸತತ 42 ಗಂಟೆಗಳ ಬಳಿಕ ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯ: ವಿಚಾರಣೆಗೆ ಹಾಜರಾಗುವಂತೆ ನೋಟಿಸ್​​

ಇನ್ನು ಈ ಹಣ ಲೂಟಿ ಹೊಡೆದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ಜಿಲ್ಲೆಗಳಲ್ಲಿ ಮತ್ತು ನಾಡಿದ್ದು ಮಂಡಲಗಳಲ್ಲಿ ಬೃಹತ್ ಹೋರಾಟ ಮಾಡಲಿದ್ದೇವೆ ಎಂದಿದ್ದಾರೆ. ಇನ್ನು ಈ ಸಭೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರಾದ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಇನ್ನು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Sun, 15 October 23

Follow Us
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ