Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ದಾಳಿ ವೇಳೆ ಕಂತೆ-ಕಂತೆ ಹಣ ಪತ್ತೆ: ಅ.16 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾದ ಬಿಜೆಪಿ

ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳಿಗೆ ರೇಟ್ ಫಿಕ್ಸ್​​ ಮಾಡಿದ್ದಾರೆ. ಕಲಾವಿದರಿಂದಲೂ ಕಮಿಷನ್ ಕೇಳುತ್ತಿದ್ದಾರೆ, ಇದು ಎಟಿಎಂ ಸರ್ಕಾರವಾಗಿದೆ. ಸರ್ಕಾರದ ಗುತ್ತಿಗೆದಾರರಿಗೆ 650 ಕೋಟಿ ರೂ. ಬಿಡುಗಡೆ ಮಾಡಿದೆ. ಬಿಲ್ ಪಾವತಿ ಬಳಿಕ ಐಟಿ ದಾಳಿಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್​​ ಪಕ್ಷಕ್ಕೂ ಸಂಬಂಧವಿದೆ ಎಂದು ನಳಿನ್​ ಕುಮಾರ್​ ಕಟೀಲ್​ ಹೇಳಿದರು.

ಐಟಿ ದಾಳಿ ವೇಳೆ ಕಂತೆ-ಕಂತೆ ಹಣ ಪತ್ತೆ:  ಅ.16 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾದ ಬಿಜೆಪಿ
ಬಿಜೆಪಿ ಪ್ರತಿಭಟನೆ
Follow us
Anil Kalkere
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 15, 2023 | 3:10 PM

ಬೆಂಗಳೂರು, ಅ.15: ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ‌(ಅ.16) ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ನಿರ್ಧಾರ‌ ಮಾಡಲಾಗಿದೆ. ಈ ಹಿನ್ನಲೆ ಇಂದು(ಅ.15) ಬಿಜೆಪಿ ಕಚೇರಿಯಲ್ಲಿ‌ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ ಕುಮಾರ್​ ಕಟೀಲ್(Nalin Kumar Kateel)  ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ವೇಳೆ ನಾಳಿನ ‌ಪ್ರತಿಭಟನೆಯ ರೂಪರೇಷೆ ಹಾಗೂ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಇನ್ನು ಸಭೆಯ ಬಳಿಕ ಮಾತನಾಡಿದ ನಳಿನ್​ ಕುಮಾರ್​ ಕಟೀಲ್​ ‘ಕರ್ನಾಟಕದಲ್ಲಿ ಲೂಟಿ ಸರ್ಕಾರ ಜಾರಿಯಲ್ಲಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯಿಂದ ಸರ್ಕಾರದ ವಿರುದ್ಧ ನಾಳೆ, ನಾಡಿದ್ದು ಪ್ರತಿಭಟನೆ

ಹೌದು, ಬೆಂಗಳೂರಿನಲ್ಲಿ ಸಭೆಯ ಬಳಿಕ ಮಾತನಾಡಿ ‘ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳಿಗೆ ರೇಟ್ ಫಿಕ್ಸ್​​ ಮಾಡಿದ್ದಾರೆ. ಕಲಾವಿದರಿಂದಲೂ ಕಮಿಷನ್ ಕೇಳುತ್ತಿದ್ದಾರೆ, ಇದು ಎಟಿಎಂ ಸರ್ಕಾರವಾಗಿದೆ. ಸರ್ಕಾರದ ಗುತ್ತಿಗೆದಾರರಿಗೆ 650 ಕೋಟಿ ರೂ. ಬಿಡುಗಡೆ ಮಾಡಿದೆ. ಬಿಲ್ ಪಾವತಿ ಬಳಿಕ ಐಟಿ ದಾಳಿಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್​​ ಪಕ್ಷಕ್ಕೂ ಸಂಬಂಧವಿದೆ. ಈ ಹಿನ್ನಲೆ ಸರ್ಕಾರದ ವಿರುದ್ಧ ನಾಳೆ ಮತ್ತು ನಾಡಿದ್ದು ಪ್ರತಿಭಟನೆ ಮಾಡುತ್ತೇವೆ. ನೈತಿಕ ಹೊಣೆಹೊತ್ತು ಸಿಎಂ ಮತ್ತು ಡಿಸಿಎಂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ಸತತ 42 ಗಂಟೆಗಳ ಬಳಿಕ ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯ: ವಿಚಾರಣೆಗೆ ಹಾಜರಾಗುವಂತೆ ನೋಟಿಸ್​​

ಇನ್ನು ಈ ಹಣ ಲೂಟಿ ಹೊಡೆದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ಜಿಲ್ಲೆಗಳಲ್ಲಿ ಮತ್ತು ನಾಡಿದ್ದು ಮಂಡಲಗಳಲ್ಲಿ ಬೃಹತ್ ಹೋರಾಟ ಮಾಡಲಿದ್ದೇವೆ ಎಂದಿದ್ದಾರೆ. ಇನ್ನು ಈ ಸಭೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರಾದ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಇನ್ನು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Sun, 15 October 23

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು