AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ED raid: ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣ -ಕಳಂಕಿತ ಎಡಿಜಿಪಿ ಅಮೃತ್ ಪಾಲ್ ಮನೆ ಮೇಲೆ ಇ.ಡಿ. ದಾಳಿ

PSI recruitment scam: ಇ.ಡಿ ಅಧಿಕಾರಿಗಳ ತಂಡವು ಸಹಕಾರನಗರದ ಅಮೃತ್ ಪಾಲ್ ನಿವಾಸದ ಮೇಲೆ ದಾಳಿ‌ ನಡೆಸಿ ಪರಿಶೀಲನೆ ನಡೆಸುತ್ತಿದೆ.

ED raid: ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣ -ಕಳಂಕಿತ ಎಡಿಜಿಪಿ ಅಮೃತ್ ಪಾಲ್ ಮನೆ ಮೇಲೆ ಇ.ಡಿ. ದಾಳಿ
ಕಳಂಕಿತ ಎಡಿಜಿಪಿ ಅಮೃತ್ ಪಾಲ್ ಮನೆ ಮೇಲೆ ಇ.ಡಿ. ದಾಳಿ
TV9 Web
| Updated By: ಸಾಧು ಶ್ರೀನಾಥ್​|

Updated on:Nov 10, 2022 | 3:30 PM

Share

ಬೆಂಗಳೂರು: ರಾಜ್ಯದಲ್ಲಿ ನಡೆದ 545 ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮ (PSI recruitment scam) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ ED raid) ತನಿಖೆಗೆ ಇಳಿದಿದೆ. ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ಇ.ಡಿ ಅಧಿಕಾರಿಗಳು ಇಂದು ರೇಡ್ ಮಾಡಿದ್ದಾರೆ. ADGP ಅಮೃತ್​ ಪಾಲ್ ಹಾಗೂ DYSP ಶಾಂತ​ಕುಮಾರ್ ಮನೆ ಮೇಲೆ ದಾಳಿಗಳು ನಡೆದಿವೆ.

ಅಕ್ರಮ ಹಣ ವರ್ಗಾವಣೆ (ಮನಿ ಲ್ಯಾಂಡ್ರಿಂಗ್ –Money Laundering) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅದರಂತೆ ಇಡಿ ಅಧಿಕಾರಿಗಳು ಇಂದು 11 ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿದ್ದಾರೆ. ಇಡಿ ಅಧಿಕಾರಿಗಳ ತಂಡವು ಸಹಕಾರನಗರದ ಅಮೃತ್ ಪಾಲ್ ನಿವಾಸದ ಮೇಲೆ ದಾಳಿ‌ ನಡೆಸಿ ಪರಿಶೀಲನೆ ನಡೆಸುತ್ತಿದೆ. ಇನ್ನು ಶಾಂತಕುಮಾರ್ ಮನೆ ಪೊಲೀಸ್ ಕ್ವಾರ್ಟರ್ಸ್ ​ನಲ್ಲಿದೆ. ಮನೆ ಬಾಗಿಲ ಮೇಲೆ ಶಾಂತಕುಮಾರ್ ಎಂಬ ನಾಮಫಲಕವಿದೆ. ಮಾಧ್ಯಮದವ್ರು ಅದನ್ನು ಚಿತ್ರೀಕರಿಸ್ತಿದ್ದಂತೆ ಕುಟುಂಬಸ್ಥರು ಕರ್ಚೀಫ್ ಮತ್ತು ಟವಲ್ ನಿಂದ ನಾಮಫಲಕ ಮುಚ್ಚಿದರು. PSI ನೇಮಕಾತಿ ಹಗರಣದಲ್ಲಿ ಸದ್ಯ ಅಮೃತ್ ಪಾಲ್ ಮತ್ತು ಶಾಂತಕುಮಾರ್ ಜೈಲಿನಲ್ಲಿ ವಾಸವಾಗಿದ್ದಾರೆ.

ಅಕ್ರಮ ಹಣ ವರ್ಗಾವಣೆ ಹಿನ್ನೆಲೆ ಕಳೆದ ಆಗಸ್ಟ್ ನಲ್ಲಿ ಪ್ರಕರಣ ದಾಖಲಾಗಿತ್ತು. ಮತ್ತೊಬ್ಬ ಆರೋಪಿ ಶ್ರೀಧರ್ ಮನೆಯಲ್ಲಿ 1.5 ಕೋಟಿ ಹಣ ಪತ್ತೆಯಾಗಿತ್ತು. ಇದುವರೆಗೆ‌ ಪ್ರಕರಣ ಸಂಬಂಧ 4 ಕೋಟಿಗೂ ಹೆಚ್ಚು ಹಣ ವಶಕ್ಕೆ ಪಡೆಯಲಾಗಿತ್ತು. ಇ.ಡಿ ಅಧಿಕಾರಿಗಳು ಮನಿ ಲ್ಯಾಂಡ್ರಿಂಗ್ ಕೇಸ್ ಸಂಬಂಧಿಸಿದಂತೆ ಐದು ಗಂಟೆಗಳಿಂದ ನಿರಂತರವಾಗಿ ಬ್ಯಾಂಕ್ ದಾಖಲೆಗಳ ಪರಿಶೀಲನೆ ನಡೆಸ್ತಿದ್ದಾರೆ. ಐವರು ಇ.ಡಿ. ಅಧಿಕಾರಿಗಳ ತಂಡದಿಂದ ದಾಳಿ, ಪರಿಶೀಲನೆ ನಡೆದಿದೆ.

 Also Read: 3 ವರ್ಷ ಕಳೆಯುತ್ತ ಬಂದರೂ ಪೂರ್ಣಗೊಳ್ಳದ ರಾಮನಗರ ಹೈಟಕ್ ಜಿಲ್ಲಾಸ್ಪತ್ರೆ ಕಾಮಗಾರಿ; ರೋಗಿಗಳ ಪರದಾಟ

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Thu, 10 November 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!