AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆಗಾರರಿಗೆ ಬಾಕಿ ಹಣ ಕೊಡಿಸಲು ಬದ್ಧ: ಸಕ್ಕರೆ ಸಚಿವ ಶಂಕರ ಮುನೇನಕೊಪ್ಪ

ಕಬ್ಬು ಪೂರೈಸಿರುವ ಶೇ 99ರಷ್ಟು ಬೆಳಗಾರರಿಗೆ ಈಗಾಗಲೇ ಸಕ್ಕರೆ ಕಾರ್ಖಾನೆಗಳಿಂದ ಹಣ ಪಾವತಿ ಮಾಡಲಾಗಿದೆ ಎಂದು ಸಕ್ಕರೆ ಸಚಿವ ಶಂಕರ್ ಮುನೇನಕೊಪ್ಪ ಹೇಳಿದರು.

ಕಬ್ಬು ಬೆಳೆಗಾರರಿಗೆ ಬಾಕಿ ಹಣ ಕೊಡಿಸಲು ಬದ್ಧ: ಸಕ್ಕರೆ ಸಚಿವ ಶಂಕರ ಮುನೇನಕೊಪ್ಪ
ಸಕ್ಕರೆ ಕಾರ್ಖಾನೆಗೆ ಕಬ್ಬು ತಂದಿರುವ ರೈತರು (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 09, 2022 | 6:04 PM

Share

ಬೆಂಗಳೂರು: ಕಬ್ಬು ಬೆಳೆಗಾರರಿಗೆ (Sugarcane Growers) ಬಾಕಿ ಇರುವ ₹ 381 ಕೋಟಿ ಹಣವನ್ನು ಶೀಘ್ರ ಕೊಡಿಸುತ್ತೇನೆ ಎಂದು ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಕಬ್ಬು ಪೂರೈಸಿರುವ ಶೇ 99ರಷ್ಟು ಬೆಳೆಗಾರರಿಗೆ ಈಗಾಗಲೇ ಸಕ್ಕರೆ ಕಾರ್ಖಾನೆ ಮಾಲೀಕರು ಹಣ ಪಾವತಿ ಮಾಡಿದ್ದಾರೆ. ಈವರೆಗೆ ಸುಮಾರು 7 ಸಾವಿರ ಕೋಟಿ ಹಣ ಪಾವತಿಯಾಗಿದೆ. ಸರ್ಕಾರವು ರೈತರಿಗೆ ದುಡ್ಡು ಕೊಡಿಸಿಲ್ಲ ಎನ್ನುವ ಕೂಗು ಬಂದಿಲ್ಲ. ಕಬ್ಬು ಬೆಳೆಗಾರರಿಗೆ ಬಾಕಿ ಹಣ ಪಾವತಿ ಆಗದೆ ಇದ್ದಾಗ ಮಾಧ್ಯಮಗಳ ಮೂಲಕ ಮಾನ ಹರಾಜು ಆಗಿದೆ. ಅದರಿಂದಾಗಿಯೇ ಸಕ್ಕರೆ ಫ್ಯಾಕ್ಟರಿ ಮಾಲೀಕರು ಬಾಕಿ ಹಣ ಪಾವತಿ ಮಾಡಿದ್ದಾರೆ. ಮೈಶುಗರ್, ಪಾಂಡವುರ ಸಕ್ಕರೆ ಕಾರ್ಖಾನೆಗೂ ಹಣ ನೀಡುತ್ತೇವೆ. ಬಾಗಲಕೋಟೆ ರನ್ನ ಸಕ್ಕರೆ ಕಾರ್ಖಾನೆಯನ್ನು ಮತ್ತೆ ಆರಂಭಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಪೆಟ್ರೋಲ್​ಗೆ ಇಥೆನಾಲ್ ಮಿಶ್ರಣ ಮಾಡಲು ಅವಕಾಶ ಕೊಡುತ್ತೇವೆ ಎಂದಿದ್ದಾರೆ. ಇದರಿಂದ ಸಕ್ಕರೆ ಕಾರ್ಖಾನೆಗಳಿಗೆ ಲಾಭವಾಗುವ ನಿರೀಕ್ಷೆಯಿದೆ ಎಂದರು.

ವಿಕಾಸಸೌಧದಲ್ಲಿ ಇತ್ತೀಚೆಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಡೆಸಿದ್ದ ಶಂಕರ ಮುನೇನಕೊಪ್ಪ, ಈ ವರ್ಷ ಇನ್ನೂ ಕಬ್ಬು ಕಟಾವು ನಡೆಯುತ್ತಿದೆ. ರಾಜ್ಯದಲ್ಲಿ ಈವರೆಗೆ 621.93 ಮೆಟ್ರಿಕ್ ಟನ್ ಕಬ್ಬು ನುರಿಸಲಾಗಿದೆ. ರೈತರಿಗೆ ₹ 19,626 ಕೋಟಿ ಪಾವತಿಸಬೇಕಿದೆ. ಈ ಪೈಕಿ ₹ 18,224 ಪಾವತಿಯಾಗಿದ್ದು, ಬಾಕಿ ಶೇ 7ರಷ್ಟು, ಅಂದರೆ ₹ 1435 ಕೋಟಿ ಬಾಕಿ ಶೀಘ್ರ ಕೊಡಿಸಲಾಗುವುದು ಎಂದಿದ್ದರು. ಇಂದು ಅವರು ಈ ಮೊತ್ತವನ್ನೂ ಪಾವತಿಸಲಾಗಿದೆ ಎಂದು ಹೇಳಿದರು.

ರಾಜ್ಯದ 68 ಘಟಕಗಳಿಗೆ ಕೇಂದ್ರದಿಂದ ಎಥೆನಾಲ್ ಉತ್ಪಾದನೆಗೆ ಅನುಮತಿ ಸಿಕ್ಕಿದೆ. 32 ಸಕ್ಕರೆ ಕಾರ್ಖಾನೆಗಳು ಈಗಾಗಲೇ ಎಥೆನಾಲ್ ಉತ್ಪಾದನೆ ಆರಂಭಿಸಿವೆ. ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಸರ್ಕಾರವೇ ನಿರ್ವಹಿಸಲಿದೆ. ಇದಕ್ಕಾಗಿ ₹ 50 ಕೋಟಿ ಅನುದಾನ ನೀಡಲಾಗಿದೆ. ಬಾಗಲಕೋಟೆಯ ರನ್ನ ಸಕ್ಕರೆ ಕಾರ್ಖಾನೆ ನಿರ್ವಹಿಸಲು ಖಾಸಗಿಯವರು ಮುಂದೆ ಬಂದಿದ್ದಾರೆ. ಮೈಸೂರಿನ ಶ್ರೀರಾಮ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದರು.

ಎಥೆನಾಲ್ ಉತ್ಪಾದನೆಯಿಂದ ಸಿಗುವ ಹಣದಲ್ಲಿ ರೈತರಿಗೂ ಪಾಲು ನೀಡುವ ಬಗ್ಗೆ ಸಕ್ಕರೆ ಮಂಡಳಿ ಸಭೆಯಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದ್ದರು. ಜಿಎಸ್​ಟಿಯಿಂದಾಗಿ ಸಕ್ಕರೆ ಇಲಾಖೆಗೆ ಹೆಚ್ಚಿನ ಆದಾಯ ಬರುತ್ತಿಲ್ಲ ಎಂದು ಹೇಳಿದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Thu, 9 June 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ