AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆಗಾರರಿಗೆ ಬಾಕಿ ಹಣ ಕೊಡಿಸಲು ಬದ್ಧ: ಸಕ್ಕರೆ ಸಚಿವ ಶಂಕರ ಮುನೇನಕೊಪ್ಪ

ಕಬ್ಬು ಪೂರೈಸಿರುವ ಶೇ 99ರಷ್ಟು ಬೆಳಗಾರರಿಗೆ ಈಗಾಗಲೇ ಸಕ್ಕರೆ ಕಾರ್ಖಾನೆಗಳಿಂದ ಹಣ ಪಾವತಿ ಮಾಡಲಾಗಿದೆ ಎಂದು ಸಕ್ಕರೆ ಸಚಿವ ಶಂಕರ್ ಮುನೇನಕೊಪ್ಪ ಹೇಳಿದರು.

ಕಬ್ಬು ಬೆಳೆಗಾರರಿಗೆ ಬಾಕಿ ಹಣ ಕೊಡಿಸಲು ಬದ್ಧ: ಸಕ್ಕರೆ ಸಚಿವ ಶಂಕರ ಮುನೇನಕೊಪ್ಪ
ಸಕ್ಕರೆ ಕಾರ್ಖಾನೆಗೆ ಕಬ್ಬು ತಂದಿರುವ ರೈತರು (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 09, 2022 | 6:04 PM

Share

ಬೆಂಗಳೂರು: ಕಬ್ಬು ಬೆಳೆಗಾರರಿಗೆ (Sugarcane Growers) ಬಾಕಿ ಇರುವ ₹ 381 ಕೋಟಿ ಹಣವನ್ನು ಶೀಘ್ರ ಕೊಡಿಸುತ್ತೇನೆ ಎಂದು ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಕಬ್ಬು ಪೂರೈಸಿರುವ ಶೇ 99ರಷ್ಟು ಬೆಳೆಗಾರರಿಗೆ ಈಗಾಗಲೇ ಸಕ್ಕರೆ ಕಾರ್ಖಾನೆ ಮಾಲೀಕರು ಹಣ ಪಾವತಿ ಮಾಡಿದ್ದಾರೆ. ಈವರೆಗೆ ಸುಮಾರು 7 ಸಾವಿರ ಕೋಟಿ ಹಣ ಪಾವತಿಯಾಗಿದೆ. ಸರ್ಕಾರವು ರೈತರಿಗೆ ದುಡ್ಡು ಕೊಡಿಸಿಲ್ಲ ಎನ್ನುವ ಕೂಗು ಬಂದಿಲ್ಲ. ಕಬ್ಬು ಬೆಳೆಗಾರರಿಗೆ ಬಾಕಿ ಹಣ ಪಾವತಿ ಆಗದೆ ಇದ್ದಾಗ ಮಾಧ್ಯಮಗಳ ಮೂಲಕ ಮಾನ ಹರಾಜು ಆಗಿದೆ. ಅದರಿಂದಾಗಿಯೇ ಸಕ್ಕರೆ ಫ್ಯಾಕ್ಟರಿ ಮಾಲೀಕರು ಬಾಕಿ ಹಣ ಪಾವತಿ ಮಾಡಿದ್ದಾರೆ. ಮೈಶುಗರ್, ಪಾಂಡವುರ ಸಕ್ಕರೆ ಕಾರ್ಖಾನೆಗೂ ಹಣ ನೀಡುತ್ತೇವೆ. ಬಾಗಲಕೋಟೆ ರನ್ನ ಸಕ್ಕರೆ ಕಾರ್ಖಾನೆಯನ್ನು ಮತ್ತೆ ಆರಂಭಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಪೆಟ್ರೋಲ್​ಗೆ ಇಥೆನಾಲ್ ಮಿಶ್ರಣ ಮಾಡಲು ಅವಕಾಶ ಕೊಡುತ್ತೇವೆ ಎಂದಿದ್ದಾರೆ. ಇದರಿಂದ ಸಕ್ಕರೆ ಕಾರ್ಖಾನೆಗಳಿಗೆ ಲಾಭವಾಗುವ ನಿರೀಕ್ಷೆಯಿದೆ ಎಂದರು.

ವಿಕಾಸಸೌಧದಲ್ಲಿ ಇತ್ತೀಚೆಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಡೆಸಿದ್ದ ಶಂಕರ ಮುನೇನಕೊಪ್ಪ, ಈ ವರ್ಷ ಇನ್ನೂ ಕಬ್ಬು ಕಟಾವು ನಡೆಯುತ್ತಿದೆ. ರಾಜ್ಯದಲ್ಲಿ ಈವರೆಗೆ 621.93 ಮೆಟ್ರಿಕ್ ಟನ್ ಕಬ್ಬು ನುರಿಸಲಾಗಿದೆ. ರೈತರಿಗೆ ₹ 19,626 ಕೋಟಿ ಪಾವತಿಸಬೇಕಿದೆ. ಈ ಪೈಕಿ ₹ 18,224 ಪಾವತಿಯಾಗಿದ್ದು, ಬಾಕಿ ಶೇ 7ರಷ್ಟು, ಅಂದರೆ ₹ 1435 ಕೋಟಿ ಬಾಕಿ ಶೀಘ್ರ ಕೊಡಿಸಲಾಗುವುದು ಎಂದಿದ್ದರು. ಇಂದು ಅವರು ಈ ಮೊತ್ತವನ್ನೂ ಪಾವತಿಸಲಾಗಿದೆ ಎಂದು ಹೇಳಿದರು.

ರಾಜ್ಯದ 68 ಘಟಕಗಳಿಗೆ ಕೇಂದ್ರದಿಂದ ಎಥೆನಾಲ್ ಉತ್ಪಾದನೆಗೆ ಅನುಮತಿ ಸಿಕ್ಕಿದೆ. 32 ಸಕ್ಕರೆ ಕಾರ್ಖಾನೆಗಳು ಈಗಾಗಲೇ ಎಥೆನಾಲ್ ಉತ್ಪಾದನೆ ಆರಂಭಿಸಿವೆ. ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಸರ್ಕಾರವೇ ನಿರ್ವಹಿಸಲಿದೆ. ಇದಕ್ಕಾಗಿ ₹ 50 ಕೋಟಿ ಅನುದಾನ ನೀಡಲಾಗಿದೆ. ಬಾಗಲಕೋಟೆಯ ರನ್ನ ಸಕ್ಕರೆ ಕಾರ್ಖಾನೆ ನಿರ್ವಹಿಸಲು ಖಾಸಗಿಯವರು ಮುಂದೆ ಬಂದಿದ್ದಾರೆ. ಮೈಸೂರಿನ ಶ್ರೀರಾಮ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದರು.

ಎಥೆನಾಲ್ ಉತ್ಪಾದನೆಯಿಂದ ಸಿಗುವ ಹಣದಲ್ಲಿ ರೈತರಿಗೂ ಪಾಲು ನೀಡುವ ಬಗ್ಗೆ ಸಕ್ಕರೆ ಮಂಡಳಿ ಸಭೆಯಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದ್ದರು. ಜಿಎಸ್​ಟಿಯಿಂದಾಗಿ ಸಕ್ಕರೆ ಇಲಾಖೆಗೆ ಹೆಚ್ಚಿನ ಆದಾಯ ಬರುತ್ತಿಲ್ಲ ಎಂದು ಹೇಳಿದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Thu, 9 June 22

Follow Us
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್