AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rain Effect: ಮಳೆ ನೀರು ಮಿಶ್ರಿತ ಡೀಸೆಲ್​ನಿಂದ​​​ ಕೆಟ್ಟು ನಿಂತ 15ಕ್ಕೂ ಹೆಚ್ಚು ವಾಹನಗಳು, ಸವಾರರು ಕಂಗಾಲು

ನಿನ್ನೆ ಸಂಜೆ ಸುರಿದ ಮಳೆಗೆ ಭಾರೀ ಅವಾಂತರಗಳು ಸಂಭವಿಸಿವೆ. ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಭಾರತ್ ಪೆಟ್ರೋಲ್ ಬಂಕ್ ನಲ್ಲಿ ಲೀಕೆಜ್​ನಿಂದ ಮಳೆ‌ ನೀರು ಡೀಸೆಲ್ ಸಂಪ್​ನ ಒಳಗೆ ಸೇರಿದೆ. ಅದನ್ನ ಗಮನಿಸದೇ ಸಿಬ್ಬಂದಿ ಕಾರುಗಳಿಗೆ ಡೀಸೆಲ್ ಹಾಕಿದ್ದಾರೆ.

ಆಯೇಷಾ ಬಾನು
|

Updated on:Jun 13, 2023 | 7:47 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ(ಜೂನ್ 12) ಸಂಜೆ ಭಾರೀ ಮಳೆ ಸುರಿದಿದ್ದು ಮಳೆಯಿಂದಾಗಿ ಹಲವು ಕಡೆ ರಸ್ತೆಗಳು ಕೆರೆಯಂತಾಗಿದ್ದವು(Bengaluru Rain). ಇದರಿಂದ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಇದರ ನಡುವೆ ಮಳೆ ನೀರು ಮಿಶ್ರಿತ ಇಂಧನ ಹಾಕಿಸಿಕೊಂಡ ಸವಾರರ ಪರಿಸ್ಥಿತಿ ಹೇಳತೀರದ್ದು. ಮಳೆಯ ನಡುವೆ ವಾಹನ ಕೈ ಕೊಟ್ಟಿದ್ದು ಮನೆಗೆ ತಲುಪಲಾಗದೆ, ವಾಹನವನ್ನು ಎಲ್ಲೂ ನಿಲ್ಲಿಸಲಾಗದೆ ಕಂಗಾಲಾಗಿದ್ದರು. ಸಾಲು ಸಾಲಾಗಿ 15 ಕ್ಕೂ ಹೆಚ್ಚು ವಾಹನಗಳು ಕೆಟ್ಟು ನಿಂತಿದ್ದು ಸವಾರರು ಅತಂತ್ರರಾಗಿದ್ರು.

ನಿನ್ನೆ ಸಂಜೆ ಸುರಿದ ಮಳೆಗೆ ಭಾರೀ ಅವಾಂತರಗಳು ಸಂಭವಿಸಿವೆ. ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಭಾರತ್ ಪೆಟ್ರೋಲ್ ಬಂಕ್ ನಲ್ಲಿ ಲೀಕೆಜ್​ನಿಂದ ಮಳೆ‌ ನೀರು ಡೀಸೆಲ್ ಸಂಪ್​ನ ಒಳಗೆ ಸೇರಿದೆ. ಅದನ್ನ ಗಮನಿಸದೇ ಸಿಬ್ಬಂದಿ ಕಾರುಗಳಿಗೆ ಡೀಸೆಲ್ ಹಾಕಿದ್ದಾರೆ. ಇದರಿಂದ ಕಾರುಗಳು ಸ್ಟಾರ್ಟ್ ಆಗದೇ ಕಟ್ಟು ನಿಂತಿದೆ. ಬಂಕ್ ಬಳಿಯೇ ಕೆಟ್ಟು ನಿಂತ ಕಾರು ನಿಲ್ಲಿಸಿ ಚಾಲಕರು ತಲೆ ಮೇಲೆ ಕೈ ಹೊತ್ತು ಕೊಳಿತುಕೊಳ್ಳುವಂತಾಯ್ತು. ಸದ್ಯ ಬಂಕ್ ಮಾಲೀಕರೆ ಕಾರು ರಿಪೇರಿ ಮಾಡಿಸಿಕೊಡುವಂತೆ ಚಾಲಕರು ಪಟ್ಟು ಹಿಡಿದಿದ್ದಾರೆ. ಅಲ್ಲದೆ ರೆಡಿ‌ ಆಗುವವರೆಗೆ ನಮ್ಮ ಕೂಲಿ ನೀಡಬೇಕೆಂದು ಆಗ್ರಹಿಸಿದ್ದಾರೆ. ಕಾರು ರೆಡಿ ಆಗಬೇಕಂದ್ರೆ ಒಂದು ವಾರಕ್ಕೂ ಹೆಚ್ಚು ಸಮಯ ಬೇಕಾಗುತ್ತೆ. ಅಲ್ಲಿಯವರೆಗೆ ನಾವು ಏನು ಮಾಡೋದು ಎಂದು ಕ್ಯಾಬ್ ಚಾಲಕರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Karnataka Rains: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ, ಇನ್ನೆಲ್ಲೆಲ್ಲಿ ಮಳೆ ಸಂಭವ, ಇಲ್ಲಿದೆ ಮಾಹಿತಿ

ಬೆಂಗಳೂರಿನಲ್ಲಿ ನಿನ್ನೆ ಮಳೆಯ ಅಬ್ಬರ ಜೋರಾಗಿತ್ತು. ನಗರದ ವಿಲ್ಸನ್ ಗಾರ್ಡಾನ್, ಶಾಂತಿ ನಗರ, ಕೋರಮಂಗಲ, ಲಾಲ್ ಬಾಗ್, ಮಾರತಹಳ್ಳಿ ಸುತ್ತಮುತ್ತ, ಆಡುಗೋಡಿ ಸುತ್ತ- ಮುತ್ತ ಗುಡುಗು ಸಹಿತ ವರುಣ ಆರ್ಭಟಿಸಿದ್ದ. ಆಡುಗೋಡಿಯಲ್ಲಿ‌ ರಸ್ತೆ ಮೇಲೆ ಹೊಳೆಯಂತೆ ನೀರು ಹರಿಯುತ್ತಿತ್ತು. ರಸ್ತೆ ಜಲಾವೃತವಾಗಿ ವಾಹನ‌ ಸವಾರರು ಪರದಾಡುತ್ತಿದ್ದರು. ಇನ್ನು ವರ್ತೂರು ವ್ಯಾಪ್ತಿಯಲ್ಲಿ ಭಾರಿ ಮಳೆಗೆ ರಾಜಕಾಲುವೆ ನೀರು ಮನೆಗಳಿಗೆ ನುಗ್ಗಿತ್ತು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:34 am, Tue, 13 June 23

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್