AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rain Effect: ಮಳೆ ನೀರು ಮಿಶ್ರಿತ ಡೀಸೆಲ್​ನಿಂದ​​​ ಕೆಟ್ಟು ನಿಂತ 15ಕ್ಕೂ ಹೆಚ್ಚು ವಾಹನಗಳು, ಸವಾರರು ಕಂಗಾಲು

ನಿನ್ನೆ ಸಂಜೆ ಸುರಿದ ಮಳೆಗೆ ಭಾರೀ ಅವಾಂತರಗಳು ಸಂಭವಿಸಿವೆ. ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಭಾರತ್ ಪೆಟ್ರೋಲ್ ಬಂಕ್ ನಲ್ಲಿ ಲೀಕೆಜ್​ನಿಂದ ಮಳೆ‌ ನೀರು ಡೀಸೆಲ್ ಸಂಪ್​ನ ಒಳಗೆ ಸೇರಿದೆ. ಅದನ್ನ ಗಮನಿಸದೇ ಸಿಬ್ಬಂದಿ ಕಾರುಗಳಿಗೆ ಡೀಸೆಲ್ ಹಾಕಿದ್ದಾರೆ.

ಆಯೇಷಾ ಬಾನು
|

Updated on:Jun 13, 2023 | 7:47 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ(ಜೂನ್ 12) ಸಂಜೆ ಭಾರೀ ಮಳೆ ಸುರಿದಿದ್ದು ಮಳೆಯಿಂದಾಗಿ ಹಲವು ಕಡೆ ರಸ್ತೆಗಳು ಕೆರೆಯಂತಾಗಿದ್ದವು(Bengaluru Rain). ಇದರಿಂದ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಇದರ ನಡುವೆ ಮಳೆ ನೀರು ಮಿಶ್ರಿತ ಇಂಧನ ಹಾಕಿಸಿಕೊಂಡ ಸವಾರರ ಪರಿಸ್ಥಿತಿ ಹೇಳತೀರದ್ದು. ಮಳೆಯ ನಡುವೆ ವಾಹನ ಕೈ ಕೊಟ್ಟಿದ್ದು ಮನೆಗೆ ತಲುಪಲಾಗದೆ, ವಾಹನವನ್ನು ಎಲ್ಲೂ ನಿಲ್ಲಿಸಲಾಗದೆ ಕಂಗಾಲಾಗಿದ್ದರು. ಸಾಲು ಸಾಲಾಗಿ 15 ಕ್ಕೂ ಹೆಚ್ಚು ವಾಹನಗಳು ಕೆಟ್ಟು ನಿಂತಿದ್ದು ಸವಾರರು ಅತಂತ್ರರಾಗಿದ್ರು.

ನಿನ್ನೆ ಸಂಜೆ ಸುರಿದ ಮಳೆಗೆ ಭಾರೀ ಅವಾಂತರಗಳು ಸಂಭವಿಸಿವೆ. ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಭಾರತ್ ಪೆಟ್ರೋಲ್ ಬಂಕ್ ನಲ್ಲಿ ಲೀಕೆಜ್​ನಿಂದ ಮಳೆ‌ ನೀರು ಡೀಸೆಲ್ ಸಂಪ್​ನ ಒಳಗೆ ಸೇರಿದೆ. ಅದನ್ನ ಗಮನಿಸದೇ ಸಿಬ್ಬಂದಿ ಕಾರುಗಳಿಗೆ ಡೀಸೆಲ್ ಹಾಕಿದ್ದಾರೆ. ಇದರಿಂದ ಕಾರುಗಳು ಸ್ಟಾರ್ಟ್ ಆಗದೇ ಕಟ್ಟು ನಿಂತಿದೆ. ಬಂಕ್ ಬಳಿಯೇ ಕೆಟ್ಟು ನಿಂತ ಕಾರು ನಿಲ್ಲಿಸಿ ಚಾಲಕರು ತಲೆ ಮೇಲೆ ಕೈ ಹೊತ್ತು ಕೊಳಿತುಕೊಳ್ಳುವಂತಾಯ್ತು. ಸದ್ಯ ಬಂಕ್ ಮಾಲೀಕರೆ ಕಾರು ರಿಪೇರಿ ಮಾಡಿಸಿಕೊಡುವಂತೆ ಚಾಲಕರು ಪಟ್ಟು ಹಿಡಿದಿದ್ದಾರೆ. ಅಲ್ಲದೆ ರೆಡಿ‌ ಆಗುವವರೆಗೆ ನಮ್ಮ ಕೂಲಿ ನೀಡಬೇಕೆಂದು ಆಗ್ರಹಿಸಿದ್ದಾರೆ. ಕಾರು ರೆಡಿ ಆಗಬೇಕಂದ್ರೆ ಒಂದು ವಾರಕ್ಕೂ ಹೆಚ್ಚು ಸಮಯ ಬೇಕಾಗುತ್ತೆ. ಅಲ್ಲಿಯವರೆಗೆ ನಾವು ಏನು ಮಾಡೋದು ಎಂದು ಕ್ಯಾಬ್ ಚಾಲಕರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Karnataka Rains: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ, ಇನ್ನೆಲ್ಲೆಲ್ಲಿ ಮಳೆ ಸಂಭವ, ಇಲ್ಲಿದೆ ಮಾಹಿತಿ

ಬೆಂಗಳೂರಿನಲ್ಲಿ ನಿನ್ನೆ ಮಳೆಯ ಅಬ್ಬರ ಜೋರಾಗಿತ್ತು. ನಗರದ ವಿಲ್ಸನ್ ಗಾರ್ಡಾನ್, ಶಾಂತಿ ನಗರ, ಕೋರಮಂಗಲ, ಲಾಲ್ ಬಾಗ್, ಮಾರತಹಳ್ಳಿ ಸುತ್ತಮುತ್ತ, ಆಡುಗೋಡಿ ಸುತ್ತ- ಮುತ್ತ ಗುಡುಗು ಸಹಿತ ವರುಣ ಆರ್ಭಟಿಸಿದ್ದ. ಆಡುಗೋಡಿಯಲ್ಲಿ‌ ರಸ್ತೆ ಮೇಲೆ ಹೊಳೆಯಂತೆ ನೀರು ಹರಿಯುತ್ತಿತ್ತು. ರಸ್ತೆ ಜಲಾವೃತವಾಗಿ ವಾಹನ‌ ಸವಾರರು ಪರದಾಡುತ್ತಿದ್ದರು. ಇನ್ನು ವರ್ತೂರು ವ್ಯಾಪ್ತಿಯಲ್ಲಿ ಭಾರಿ ಮಳೆಗೆ ರಾಜಕಾಲುವೆ ನೀರು ಮನೆಗಳಿಗೆ ನುಗ್ಗಿತ್ತು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:34 am, Tue, 13 June 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್