AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕನ ಬಾಮೈದನ ಮನೆಯಲ್ಲಿ ವಜ್ರ, ಚಿನ್ನ ಸೇರಿದಂತೆ 2 ಕೋಟಿ ರೂ. ಹೆಚ್ಚು ಮೌಲ್ಯದ ವಸ್ತು ಕಳ್ಳತನ

ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಅವರ ಬಾಮೈದರಾಗಿರುವ ರಾಮಮೂರ್ತಿ ಅವರ ಮನೆಯಲ್ಲಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ, ವಜ್ರ, ನಗದು ಕಳ್ಳತನ ಮಾಡಿ ಖದೀಮರು ಪರಾರಿಯಾಗಿದ್ದಾರೆ. ಬೆಲೆ ಬಾಳುವ ವಾಚ್​ಗಳು, ಮನೆ ಉಪಯೋಗಿ ವಸ್ತುಗಳು ಕೂಡ ಕಳ್ಳತನವಾಗಿದೆ. ಸುಮಾರು 2 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ.

ಬಿಜೆಪಿ ಶಾಸಕನ ಬಾಮೈದನ ಮನೆಯಲ್ಲಿ ವಜ್ರ, ಚಿನ್ನ ಸೇರಿದಂತೆ  2 ಕೋಟಿ ರೂ. ಹೆಚ್ಚು ಮೌಲ್ಯದ ವಸ್ತು ಕಳ್ಳತನ
ರಾಮಮೂರ್ತಿ
Shivaprasad B
| Updated By: ಆಯೇಷಾ ಬಾನು|

Updated on: Nov 07, 2023 | 7:46 AM

Share

ಬೆಂಗಳೂರು, ನ.07: ಬೆಂಗಳೂರಿನ ಪ್ರತಿಷ್ಠಿತ ಬಡಾವಣೆ ಎನಿಸಿಕೊಂಡಿರುವ ಯಲಹಂಕದ ನ್ಯಾಯಾಂಗ ಬಡಾವಣೆಯಲ್ಲಿ ದೊಡ್ಡ ಮಟ್ಟದ ಕಳ್ಳತನ ನಡೆದಿದೆ. ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ (SR Vishwanath) ಅವರ ಬಾಮೈದರಾಗಿರುವ ರಾಮಮೂರ್ತಿ ಅವರ ಮನೆಯಲ್ಲಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ, ವಜ್ರ, ನಗದು ಕಳ್ಳತನ (Theft) ಮಾಡಿ ಖದೀಮರು ಪರಾರಿಯಾಗಿದ್ದಾರೆ. ಬೆಲೆ ಬಾಳುವ ವಾಚ್​ಗಳು, ಮನೆ ಉಪಯೋಗಿ ವಸ್ತುಗಳು ಕೂಡ ಕಳ್ಳತನವಾಗಿದೆ. ಸುಮಾರು 2 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದನ್ನು ನೋಡಿ ಕೊಂಡು ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ.

ನ್ಯಾಯಾಂಗ ಬಡಾವಣೆಯ ನಿವಾಸಿಯಾಗಿರುವ ಬಿಬಿಎಂಪಿ ಕ್ಲಾಸ್ ಒನ್ ಕಂಟ್ರ್ಯಾಕ್ಟರ್, ಯಲಹಂಕ ಬಿಜೆಪಿ ಶಾಸಕರ ಬಾಮೈದರಾಗಿರುವ ರಾಮಮೂರ್ತಿ ಅವರು ಮೂರು ದಿನಗಳ ಹಿಂದೆ ಕೆಲಸದ ವಿಚಾರವಾಗಿ ಮನೆಗೆ ಬೀಗ ಜಡಿದು ಬೇರೆಡೆ ಹೋಗಿದ್ದರು. ಇದೇ ಸಮಯಕ್ಕಾಗಿ ಕಾದು ಕುಳಿತಿದ್ದ ಖದೀಮರು ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿ ಮನೆಗೆ ನುಗ್ಗಿ ಚಿನ್ನ, ಬೆಳ್ಳಿ, ವಜ್ರ, ಬೆಲೆ ಬಾಳುವ ವಾಚ್​ಗಳು, ಮನೆವಸ್ತುಗಳನ್ನೆಲ್ಲಾ ದೋಚಿದ್ದಾರೆ. ಮೂರು ದಿನದ ಬಳಿಕ ಇಂದು ಬೆಂಗಳೂರಿಗೆ ವಾಪಾಸ್ ಬಂದ ರಾಮಮೂರ್ತಿಯವರು ಮನೆಗೆ ಎಂಟ್ರಿಕೊಡುತ್ತಿದ್ದಂತೆ ಶಾಕ್ ಎದುರಾಗಿದೆ. ಸದ್ಯ ಘಟನೆ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಯಲಹಂಕ ಪೊಲೀಸರು, ಶ್ವಾನ ದಳ, ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರು: ಹುಲಿವೇಷ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ, ಆರೋಪಿಗಳು ಠಾಣೆಗೆ ಶರಣು

2 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳ ಕಳ್ಳತನ

ಸಾಲು ಸಾಲು ರಜೆ, ಹಬ್ಬ ಹಿನ್ನೆಲೆ ಬ್ಯಾಂಕ್ ನಿಂದ ಮನೆಗೆ ಚಿನ್ನಾಭರಣ, ನಗದು, ಇತರೆ ವಸ್ತುಗಳನ್ನು ತಂದು ಇಟ್ಟಿದ್ದೆ ಎಂದು ರಾಮಮೂರ್ತಿಯವರು ತಿಳಿಸಿದ್ದಾರೆ. ಇನ್ನು 1 ಕೆ.ಜಿಗೂ ಹೆಚ್ಚು ಚಿನ್ನಾಭರಣ, 15 ಕೆ.ಜಿ ಬೆಳ್ಳಿ, ವಜ್ರ, 15 ಲಕ್ಷ ನಗದು, ಬೆಲೆ ಬಾಳುವ ಹುಬ್ಲೋಟ್, ರಾಡೋ ಸೇರಿ 15 ವಾಚ್ ಗಳು, ಬೆಲೆಬಾಳುವ ವಸ್ತುಗಳನ್ನು ಖದೀಮರು ದೋಚಿದ್ದಾರೆ. ಅಂದಾಜಿನ ಪ್ರಕಾರ 2 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳ ಕಳ್ಳತನವಾಗಿದೆ ಎಂದು ಮನೆ ಮಾಲೀಕ ರಾಮಮೂರ್ತಿ ಅವರು ತಿಳಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​