AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಈ ಬಾರಿ ದೀಪಾವಳಿ ಪಟಾಕಿ ಸಂಭ್ರಮಕ್ಕೆ ಮನುಷ್ಯ ಮಾತ್ರವಲ್ಲ ಹದ್ದುಗಳು ವಿಲವಿಲ..!

ಬೆಳಕಿನ ಹಬ್ಬ ದೀಪಾವಳಿ ಮುಗಿದಿದೆ. ಹಲವರು ಈ ಬಾರಿ ದೀಪಾವಳಿಗೆ ಪಟಾಕಿ ಸಿಡಿಸಿ ಸಂಭ್ರಮಿಸಿದರೆ, ಇನ್ನೂ ಕೆಲವರು ಪಟಾಕಿ ಸಿಡಿಸಲು ಹೋಗಿ ಗಾಯಮಾಡಿಕೊಂಡು ನರಳಾಡುತ್ತಿದ್ದಾರೆ. ಅದರಲ್ಲೂ ಕೆಲವರು ಕಣ್ಣಿನ ದೃಷ್ಟಿಗಳನ್ನೇ ಕಳೆದುಕೊಂಡುಬಿಟ್ಟಿದ್ದಾರೆ. ಇನ್ನು ಪಟಾಕಿ ಏಟಿಗೆ ಬೆಂಗಳೂರಿನಲ್ಲಿ ಹದ್ದುಗಳು ಸಹ ವಿಲವಿಲ ಎಂದಿವೆ.

ಬೆಂಗಳೂರಿನಲ್ಲಿ ಈ ಬಾರಿ ದೀಪಾವಳಿ ಪಟಾಕಿ ಸಂಭ್ರಮಕ್ಕೆ ಮನುಷ್ಯ ಮಾತ್ರವಲ್ಲ ಹದ್ದುಗಳು ವಿಲವಿಲ..!
ಪಟಾಕಿ ಸಂಭ್ರಮಕ್ಕೆ ಹದ್ದುಗಳು ವಿಲವಿಲ
Vinay Kashappanavar
| Edited By: |

Updated on: Nov 04, 2024 | 7:55 PM

Share

ಬೆಂಗಳೂರು, (ನವೆಂಬರ್ 04): ದೀಪಗಳ ಹಬ್ಬ ದೀಪಾವಳಿಗೆ ಪಟಾಕಿ ಸಿಡಿಸಿ ಕುಣಿದಾಡಿದಾಯ್ತು. ಆದ್ರೆ ತಿಳಿದೋ, ತಿಳಿಯದೆಯೋ ಪಟಾಕಿ ಸಿಡಿತಕ್ಕೆ ರಾಜಧಾನಿಯಲ್ಲಿ ಅಳಿದುಳಿದಿರುವ ಪಕ್ಷಿ ಸಂಕುಲ ನಲುಗಿ ಹೋಗಿದೆ. ಪಟಾಕಿ ಶಬ್ಧಕ್ಕೆ ಪಕ್ಷಿಗಳು ಹೆದರಿ ಹೋಗಿವೆ. ರಾಕೆಟ್ ಪಟಾಕಿ ಸಿಡಿತಕ್ಕೆ ಒಂದಲ್ಲ, ಹತ್ತಲ್ಲ ಬರೋಬ್ಬರಿ 200 ಹದ್ದುಗಳು ಪ್ರಾಣ ಬಿಟ್ಟಿವೆ.

ಹದ್ದು ಬೆಂಗಳೂರಿನ ಅರ್ಬನ್ ಪಕ್ಷಿ ಎನ್ನಿಸಿಕೊಂಡಿದೆ. ನಗರದಲ್ಲಿ ಗಾರ್ಬೇಜ್ ಕ್ಲೀನರ್ ಎಂಬ ಪಟ್ಟ ಹೊಂದಿವೆ. ನಗರದ ಕಸ ತಿಂದು ಜೀರ್ಣಿಸಿಕೊಳ್ಳುವ ಹದ್ದಿಗೆ ಪಟಾಕಿ ನಾರಕವಾಗಿದೆ. ಶಬ್ಧದಿಂದ, ಹೊಗೆಯಿಂದ, ರಾಕೆಟ್ ಹೊಡೆತದಿಂದ ಪೆಟ್ಟು ತಿಂದು ಪ್ರಾಣ ಬಿಟ್ಟಿವೆ. ಕೆಲ ಪ್ರಾಣಿ ಪ್ರಿಯರ ಸಹಾಯದಿಂದ ಆಸ್ಪತ್ರೆ ಸೇರಿ ಜೀವನ್ ಮರಣದ ಹೋರಾಡುತ್ತಿವೆ. ಕೆಂಗೇರಿಯಲ್ಲಿರುವ ಪೀಪಲ್ ಫಾರ್ ಎನಿಮಲ್ಸ್ ಸಂಸ್ಥೆಗೆ ಈ ಸಲ ಕಳೆದ ಬಾರಿಗಿಂತ ಹೆಚ್ಚು ಪ್ರಕರಣಗಳು ಬಂದಿವೆ. ಮಂಗಗಳು ಸೇರಿ ಶಾರ್ಟ್ ನೋಸ್ಡ್ ಫ್ರೂಟ್ ಬ್ಯಾಟ್, ಇಂಡಿಯನ್ ಕುಕ್ಕೂ, ಇಂಡಿಯನ್ ನೈಟ್ ಜಾರ್, ಬಾರ್ನ್ ಔಲ್ ಸೇರಿ ಹಲವು ಪಕ್ಷಿಗಳು ಪಟಾಕಿ ಗಾಯದಿಂದ ನರಳಾಡುತ್ತಿದೆ.

ಇದನ್ನೂ ಓದಿ: ಪಟಾಕಿ ಸಿಡಿಸುವುದರಲ್ಲಿ ಹುಡುಗಾಟ: ದೀಪಾವಳಿ ದಿನವೇ ಹಾರಿ ಹೋಯ್ತು ಯುವಕನ ಪ್ರಾಣಪಕ್ಷಿ

ಇನ್ನು ಮನುಷ್ಯರ ಬಗ್ಗೆ ಗಮನಹರಿಸುವುದಾರೆ, ಈ ಸಲ ದೀಪಾವಳಿಗೆ ದಾಖಲೆ ಪ್ರಮಾಣದಲ್ಲಿ ಪಟಾಕಿ ಕಣ್ಣಿನ ಅವಘಡ ಕೇಸ್ ದಾಖಲಾಗಿದೆ. ಬೆಂಗಳೂರಿನಲ್ಲಿ 250 ಕ್ಕೂ ಹೆಚ್ಚು ಅವಘಡಗಳು ಜರುಗಿದೆ. ಮಿಂಟೋ ಆಸ್ಪತ್ರೆ ಸೇರಿ ನಾರಾಯಣ ನೇತ್ರಾಲಯ, ಕಿಮ್ಸ್, ಮೋದಿ ಕಣ್ಣಿನ ಆಸ್ಪತ್ರೆ, ಶಂಕರ್ ಐ ಹಾಸ್ಪಿಟಲ್ ನಲ್ಲಿ ಪ್ರಕರಣಗಳು ದಾಖಲಾಗಿದ್ದು, ಮಕ್ಕಳೇ ಹೆಚ್ಚು ಪಟಾಕಿ ಅವಘಡಕ್ಕೆ ಸಾಕ್ಷಿಯಾಗಿದ್ದಾರೆ.

ಈ ವರ್ಷ ಪಟಾಕಿ ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ಸರ್ಕಸ್ ಮಾಡಿತ್ತು. ಪ್ರತ್ಯೇಕ ಗೈಡ್ ಲೈನ್ಸ್ ಬಿಡುಗಡೆ ಮಾಡಿತ್ತು. ರಾತ್ರಿ 10 ಗಂಟೆ ನಂತರ ಪಟಾಕಿ ಹೊಡೆದರೆ ಕೇಸ್ ಎಂದು ಪೊಲೀಸ್ ಇಲಾಖೆ ವಾರ್ನ್ ಮಾಡಿತ್ತು. ಆದ್ರೆ ಅದ್ಯಾವುದು ವರ್ಕ್ ಔಟ್ ಆಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ