AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹೆಚ್ಚಾದ ರಸ್ತೆ ಅಪಘಾತ: ಕೇವಲ ಮೂರು ತಿಂಗಳಲ್ಲಿ205 ಸಾವು

023ರ ಆರಂಭದಿಂದ ಮಾರ್ಚ್‌ ಅಂತ್ಯದವರೆಗೂ ಬೆಂಗಳೂರಿನಲ್ಲಿ ಒಟ್ಟು 1,197 ರಸ್ತೆ ಅಪಘಾತಗಳು ಸಂಭವಿಸಿವೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರ ಬಳಿ ಇರುವ ಅಂಕಿ ಅಂಶಗಳು ಹೇಳುತ್ತಿವೆ.

ಬೆಂಗಳೂರಿನಲ್ಲಿ ಹೆಚ್ಚಾದ ರಸ್ತೆ ಅಪಘಾತ: ಕೇವಲ ಮೂರು ತಿಂಗಳಲ್ಲಿ205 ಸಾವು
ಪ್ರಾತಿನಿಧಿಕ ಚಿತ್ರImage Credit source: indiatoday.in
TV9 Web
| Edited By: ಆಯೇಷಾ ಬಾನು|

Updated on: Apr 15, 2023 | 10:00 AM

Share

ಮುಖ್ಯಾಂಶಗಳು

  • ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಳ
  • ಬೆಂಗಳೂರು ನಗರ ಸಂಚಾರಿ ಪೊಲೀಸರ ಬಳಿ ಇರುವ ಅಂಕಿ ಅಂಶ
  • 205 ಮಂದಿ ಬೆಂಗಳೂರು ನಗರವೊಂದರಲ್ಲೇ ರಸ್ತೆ ಅಪಘಾತದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರು ನಗರ ಸಂಚಾರಿ ಪೊಲೀಸರ ಬಳಿ ಇರುವ ಅಂಕಿ ಅಂಶ ಬೆಚ್ಚಿ ಬೀಳಿಸುವಂತಿದೆ. ಕಳೆದ ಮೂರು ತಿಂಗಳಲ್ಲಿ ಬರೋಬ್ಬರಿ 205 ಮಂದಿ ಬೆಂಗಳೂರು ನಗರವೊಂದರಲ್ಲೇ ರಸ್ತೆ ಅಪಘಾತದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. 2023ರ ಆರಂಭದಿಂದ ಮಾರ್ಚ್‌ ಅಂತ್ಯದವರೆಗೂ ಬೆಂಗಳೂರಿನಲ್ಲಿ ಒಟ್ಟು 1,197 ರಸ್ತೆ ಅಪಘಾತಗಳು ಸಂಭವಿಸಿವೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರ ಬಳಿ ಇರುವ ಅಂಕಿ ಅಂಶಗಳು ಹೇಳುತ್ತಿವೆ.

ಬೆಂಗಳೂರಿನಲ್ಲಿ ಕಳೆದ ಮೂರು ತಿಂಗಳಲ್ಲಿ 1,051 ಮಂದಿ ರಸ್ತೆ ಅಪಘಾತದಿಂದಾಗಿ ಗಾಯಗೊಂಡಿದ್ದಾರೆ. ಕಳೆದ 3 ತಿಂಗಳಲ್ಲಿ 300 ಮಾರಣಾಂತಿಕ ಹಾಗೂ 997 ಮಾರಣಾಂತಿಕವಲ್ಲದ ರಸ್ತೆ ಅಪಘಾತಗಳು ಬೆಂಗಳೂರಿನಲ್ಲಿ ಸಂಭವಿಸಿವೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರ ಬಳಿ ಇರುವ ಅಂಕಿ ಅಂಶಗಳ ಮೂಲಕ ತಿಳಿದು ಬಂದಿದೆ. ಅಲ್ಲದೆ ಬೆಂಗಳೂರಿನಲ್ಲಿ ಇರುವ ಕೆಟ್ಟ ರಸ್ತೆಗಳು, ಅತಿ ವೇಗದ ಚಾಲನೆ, ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದೇ ಈ ಅಪಘಾತಗಳಿಗೆ ಕಾರಣ ಎಂದು ವಾಹನ ಸವಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾರು-ಬೈಕ್ ನಡುವಿನ ಭೀಕರ ಅಪಘಾತ: ಬಾನೆಟ್ ಮೇಲೆ ಹಾರಿ ಬಿದ್ದ ಬೈಕ್ ಸವಾರ, ಭಯಾನಕ ದೃಶ್ಯ ವೈರಲ್

ಮತ್ತೊಂದೆಡೆ ಬೆಂಗಳೂರು ಮಹಾ ನಗರ ಸಂಚಾರಿ ಪೊಲೀಸರ ಬಳಿ ಇರುವ ದಾಖಲೆಗಳ ಪ್ರಕಾರ, ಬೆಂಗಳೂರಿನಲ್ಲಿ ನಿರ್ಲಕ್ಷ್ಯದ ವಾಹನ ಚಾಲನೆ ಸಂಬಂಧ ಕಳೆದ ಮೂರು ತಿಂಗಳಲ್ಲಿ 660 ಪ್ರಕರಣಗಳು ದಾಖಲಾಗಿವೆ. ಅತಿ ವೇಗದ ವಾಹನ ಚಾಲನೆ ಸಂಬಂಧ 917 ಪ್ರಕರಣಗಳು ದಾಖಲಾಗಿವೆ. ಇನ್ನು ಸಿಗ್ನಲ್ ಜಂಪ್, ಲೇನ್ ಶಿಸ್ತು ಉಲ್ಲಂಘನೆ ಸಂಬಂಧ 2,32,626 ಪ್ರಕರಣಗಳು ದಾಖಲಾಗಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?