AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಪ್ರೇಮಿಗಳ ದಿನದಂದು ಬೆಂಗಳೂರಿನಿಂದ ರಫ್ತಾದ ಗುಲಾಬಿ ಹೂವುಗಳ ಪ್ರಮಾಣವೆಷ್ಟು? ಇಲ್ಲಿದೆ ಅಚ್ಚರಿಯಾಗುವ ಅಂಕಿಅಂಶ

Rose | Valentine's Day: ಬೆಂಗಳೂರಿನ ಗುಲಾಬಿಗೆ ಪ್ರೇಮಿಗಳ ದಿನದ ಸಂದರ್ಭದಲ್ಲಿ ಉನ್ನತ ಬೇಡಿಕೆ ಇದೆ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಹೂವು ರಫ್ತಾಗಿದೆ. ಈ ಕುರಿತ ಅಂಕಿ ಅಂಶಗಳು ಇಲ್ಲಿವೆ.

ಈ ಬಾರಿ ಪ್ರೇಮಿಗಳ ದಿನದಂದು ಬೆಂಗಳೂರಿನಿಂದ ರಫ್ತಾದ ಗುಲಾಬಿ ಹೂವುಗಳ ಪ್ರಮಾಣವೆಷ್ಟು? ಇಲ್ಲಿದೆ ಅಚ್ಚರಿಯಾಗುವ ಅಂಕಿಅಂಶ
ಪ್ರಾತಿನಿಧಿಕ ಚಿತ್ರ
TV9 Web
| Updated By: shivaprasad.hs|

Updated on: Feb 20, 2022 | 6:20 PM

Share

ಬೆಂಗಳೂರು: ಪ್ರೇಮಿಗಳ ದಿನದಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (Bengaluru International Airport) ಬರೋಬ್ಬರಿ 5.15 ಲಕ್ಷ ಕೆ.ಜಿ ಗುಲಾಬಿ ಹೂಗಳ (Red Rose) ಸಾಗಣೆಯಾಗಿದ್ದು, ಇದು ಕಳೆದ ವರ್ಷಕ್ಕಿಂತ ಹೆಚ್ಚು ಎನ್ನಲಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರತಿವರ್ಷ ಪ್ರೇಮಿಗಳ ದಿನದಂದು (Valentine’s Day) 25 ವಿಮಾನ ನಿಲ್ದಾಣಗಳಿಗೆ ಗುಲಾಬಿಯನ್ನು ರಫ್ತು ಮಾಡಲಾಗುತ್ತದೆ. ಕಳೆದ ವರ್ಷ 2.17 ಲಕ್ಷ ಕೆ.ಜಿಯಷ್ಟು ರಫ್ತು ಮಾಡಲಾಗಿತ್ತು. ಈ ಬಾರಿ 5.15 ಲಕ್ಷ ಕೆ.ಜಿ. ರಫ್ತು ಮಾಡಲಾಗಿದ್ದು, ದುಪ್ಪಟ್ಟು ಹೆಚ್ಚಳ ಕಂಡಿದೆ. ಅದರಲ್ಲೂ ದೇಶೀಯ ಸಾಗಣೆಯಲ್ಲಿಯೇ 3.15 ಲಕ್ಷ ಕೆ.ಜಿ. ರಫ್ತು ಮಾಡಲಾಗಿದ್ದು, ಕಳೆದ ವರ್ಷ ಕೇವಲ 1.03 ಲಕ್ಷ ಕೆ.ಜಿ ಮಾತ್ರ ರಫ್ತು ಮಾಡಲಾಗಿತ್ತು ಎಂದು ಬಿಐಎಎಲ್ ಮುಖ್ಯ ಸ್ಟಾರ್ಟಜಿ ಡೆವಲಪರ್ ಆಫೀಸರ್ ಸಾತ್ಯಕಿ ರಂಗನಾಥ್ ತಿಳಿಸಿದ್ದಾರೆ. ಭಾರತ ಅದರಲ್ಲೂ ಕರ್ನಾಟಕ ಗುಲಾಬಿ ರಫ್ತು ಮಾಡುವಲ್ಲಿ ಮುಂಚೂಣಿಯಲ್ಲಿದೆ. ಪ್ರತಿ ವರ್ಷ ಗುಲಾಬಿ ರಫ್ತಿನ ಪ್ರಮಾಣ ಹೆಚ್ಚುತ್ತಲೇ ಇದೆ.

ಬೆಂಗಳೂರು ವಿಮಾನ ನಿಲ್ದಾಣದಿಂದ ದೆಹಲಿ, ಮುಂಬೈ, ಕೊಲ್ಕತ್ತ, ಗೌಹಾಟಿ, ಚಂಡೀಗಢ ಹಾಗೂ ಸಿಂಗಾಪುರ, ಲಂಡನ್, ದುಬೈ ಸೇರಿದಂತೆ ಅಂತರಾಷ್ಟ್ರೀಯ ತಾಣಗಳಿಗೆ ರಫ್ತು ಮಾಡಲಾಗಿದೆ. 2020-21ರ ವರ್ಷದಲ್ಲಿ ಬೆಂಗಳೂರು ವಿಮಾನ ನಿಲ್ದಾಣವು 60 ಸಾವಿರ ಮೆಟ್ರಿಕ್ ಟನ್‌ನಷ್ಟು ಕೋಲ್ಡ್ ಸ್ಟೋರೇಜ್ ಹೊಂದಿದ್ದು, ಕಡಿಮೆ ಬಾಳಿಕೆ ಅವಧಿಯ ಪದಾರ್ಥಗಳ ಸಾಗಣೆಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಗುಲಾಬಿ ಹೂವಿಗಿದೆ ಉನ್ನತ ಬೇಡಿಕೆ:

ಬೆಂಗಳೂರಿನ ಗುಲಾಬಿ ಹೂವುಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಬೇಡಿಕೆ ಇದೆ. ಈ ಕಾರಣದಿಂದ ಪ್ರತೀ ವರ್ಷ ರಫ್ತು ಹೆಚ್ಚುತ್ತಲೇ ಇದೆ. ಈ ವರ್ಷ ಬೆಂಗಳೂರಿನಲ್ಲಿಯೇ ಒಂದು ರೆಡ್ ರೋಜ್ ಗೆ ಸದ್ಯ 15 ರೂಪಾಯಿ ಯಿಂದ ಹಿಡಿದು 20 ರೂಪಾಯಿವರೆಗೂ ಮಾರಾಟವಾಗಿತ್ತು. ಇದಕ್ಕೆ ಬೇಡಿಕೆ ಹೇಗಿತ್ತೆಂದರೆ ವರ್ತಕರು ರೈತರ ತೋಟಕ್ಕೆ ತೆರಳಿ ಗುಲಾಬಿ ಹೂವುಗಳನ್ನು ಖರೀದಿಸಿದ್ದರು. ಈ ಕಾರಣದಿಂದ ಈ ಬಾರಿ ಗುಲಾಬಿ ಬೆಳೆದ ರೈತರ ಮೊಗದಲ್ಲಿ ಸಂತಸ ಮೂಡಿದೆ. ಇದೀಗ ರಫ್ತಿನ ಅಂಕಿ ಅಂಶಗಳೂ ಇದಕ್ಕೆ ಪೂರಕ ದಾಖಲೆ ನೀಡಿವೆ.

ಇದನ್ನೂ ಓದಿ:

ಗದಗ: ಎರಡು ಎಕರೆ ಜಮೀನಿನಲ್ಲಿ ಭರ್ಜರಿ ಗುಲಾಬಿ ಹೂವು ಬೆಳೆದ ಉಪನ್ಯಾಸಕ; ಲಕ್ಷ ಲಕ್ಷ ರೂಪಾಯಿ ಸಂಪಾದನೆ

ಬಿಇ ಪದವಿ ಪಡೆದ 114 ಮಂದಿ ಪೊಲೀಸ್ ಇಲಾಖೆಗೆ ಸೇರ್ಪಡೆ; ಸರ್ಕಾರಿ ಹುದ್ದೆಯತ್ತ ಮುಖ ಮಾಡಿದ ಯುವಕರು

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?