AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಪ್ರೇಮಿಗಳ ದಿನದಂದು ಬೆಂಗಳೂರಿನಿಂದ ರಫ್ತಾದ ಗುಲಾಬಿ ಹೂವುಗಳ ಪ್ರಮಾಣವೆಷ್ಟು? ಇಲ್ಲಿದೆ ಅಚ್ಚರಿಯಾಗುವ ಅಂಕಿಅಂಶ

Rose | Valentine's Day: ಬೆಂಗಳೂರಿನ ಗುಲಾಬಿಗೆ ಪ್ರೇಮಿಗಳ ದಿನದ ಸಂದರ್ಭದಲ್ಲಿ ಉನ್ನತ ಬೇಡಿಕೆ ಇದೆ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಹೂವು ರಫ್ತಾಗಿದೆ. ಈ ಕುರಿತ ಅಂಕಿ ಅಂಶಗಳು ಇಲ್ಲಿವೆ.

ಈ ಬಾರಿ ಪ್ರೇಮಿಗಳ ದಿನದಂದು ಬೆಂಗಳೂರಿನಿಂದ ರಫ್ತಾದ ಗುಲಾಬಿ ಹೂವುಗಳ ಪ್ರಮಾಣವೆಷ್ಟು? ಇಲ್ಲಿದೆ ಅಚ್ಚರಿಯಾಗುವ ಅಂಕಿಅಂಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 20, 2022 | 6:20 PM

Share

ಬೆಂಗಳೂರು: ಪ್ರೇಮಿಗಳ ದಿನದಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (Bengaluru International Airport) ಬರೋಬ್ಬರಿ 5.15 ಲಕ್ಷ ಕೆ.ಜಿ ಗುಲಾಬಿ ಹೂಗಳ (Red Rose) ಸಾಗಣೆಯಾಗಿದ್ದು, ಇದು ಕಳೆದ ವರ್ಷಕ್ಕಿಂತ ಹೆಚ್ಚು ಎನ್ನಲಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರತಿವರ್ಷ ಪ್ರೇಮಿಗಳ ದಿನದಂದು (Valentine’s Day) 25 ವಿಮಾನ ನಿಲ್ದಾಣಗಳಿಗೆ ಗುಲಾಬಿಯನ್ನು ರಫ್ತು ಮಾಡಲಾಗುತ್ತದೆ. ಕಳೆದ ವರ್ಷ 2.17 ಲಕ್ಷ ಕೆ.ಜಿಯಷ್ಟು ರಫ್ತು ಮಾಡಲಾಗಿತ್ತು. ಈ ಬಾರಿ 5.15 ಲಕ್ಷ ಕೆ.ಜಿ. ರಫ್ತು ಮಾಡಲಾಗಿದ್ದು, ದುಪ್ಪಟ್ಟು ಹೆಚ್ಚಳ ಕಂಡಿದೆ. ಅದರಲ್ಲೂ ದೇಶೀಯ ಸಾಗಣೆಯಲ್ಲಿಯೇ 3.15 ಲಕ್ಷ ಕೆ.ಜಿ. ರಫ್ತು ಮಾಡಲಾಗಿದ್ದು, ಕಳೆದ ವರ್ಷ ಕೇವಲ 1.03 ಲಕ್ಷ ಕೆ.ಜಿ ಮಾತ್ರ ರಫ್ತು ಮಾಡಲಾಗಿತ್ತು ಎಂದು ಬಿಐಎಎಲ್ ಮುಖ್ಯ ಸ್ಟಾರ್ಟಜಿ ಡೆವಲಪರ್ ಆಫೀಸರ್ ಸಾತ್ಯಕಿ ರಂಗನಾಥ್ ತಿಳಿಸಿದ್ದಾರೆ. ಭಾರತ ಅದರಲ್ಲೂ ಕರ್ನಾಟಕ ಗುಲಾಬಿ ರಫ್ತು ಮಾಡುವಲ್ಲಿ ಮುಂಚೂಣಿಯಲ್ಲಿದೆ. ಪ್ರತಿ ವರ್ಷ ಗುಲಾಬಿ ರಫ್ತಿನ ಪ್ರಮಾಣ ಹೆಚ್ಚುತ್ತಲೇ ಇದೆ.

ಬೆಂಗಳೂರು ವಿಮಾನ ನಿಲ್ದಾಣದಿಂದ ದೆಹಲಿ, ಮುಂಬೈ, ಕೊಲ್ಕತ್ತ, ಗೌಹಾಟಿ, ಚಂಡೀಗಢ ಹಾಗೂ ಸಿಂಗಾಪುರ, ಲಂಡನ್, ದುಬೈ ಸೇರಿದಂತೆ ಅಂತರಾಷ್ಟ್ರೀಯ ತಾಣಗಳಿಗೆ ರಫ್ತು ಮಾಡಲಾಗಿದೆ. 2020-21ರ ವರ್ಷದಲ್ಲಿ ಬೆಂಗಳೂರು ವಿಮಾನ ನಿಲ್ದಾಣವು 60 ಸಾವಿರ ಮೆಟ್ರಿಕ್ ಟನ್‌ನಷ್ಟು ಕೋಲ್ಡ್ ಸ್ಟೋರೇಜ್ ಹೊಂದಿದ್ದು, ಕಡಿಮೆ ಬಾಳಿಕೆ ಅವಧಿಯ ಪದಾರ್ಥಗಳ ಸಾಗಣೆಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಗುಲಾಬಿ ಹೂವಿಗಿದೆ ಉನ್ನತ ಬೇಡಿಕೆ:

ಬೆಂಗಳೂರಿನ ಗುಲಾಬಿ ಹೂವುಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಬೇಡಿಕೆ ಇದೆ. ಈ ಕಾರಣದಿಂದ ಪ್ರತೀ ವರ್ಷ ರಫ್ತು ಹೆಚ್ಚುತ್ತಲೇ ಇದೆ. ಈ ವರ್ಷ ಬೆಂಗಳೂರಿನಲ್ಲಿಯೇ ಒಂದು ರೆಡ್ ರೋಜ್ ಗೆ ಸದ್ಯ 15 ರೂಪಾಯಿ ಯಿಂದ ಹಿಡಿದು 20 ರೂಪಾಯಿವರೆಗೂ ಮಾರಾಟವಾಗಿತ್ತು. ಇದಕ್ಕೆ ಬೇಡಿಕೆ ಹೇಗಿತ್ತೆಂದರೆ ವರ್ತಕರು ರೈತರ ತೋಟಕ್ಕೆ ತೆರಳಿ ಗುಲಾಬಿ ಹೂವುಗಳನ್ನು ಖರೀದಿಸಿದ್ದರು. ಈ ಕಾರಣದಿಂದ ಈ ಬಾರಿ ಗುಲಾಬಿ ಬೆಳೆದ ರೈತರ ಮೊಗದಲ್ಲಿ ಸಂತಸ ಮೂಡಿದೆ. ಇದೀಗ ರಫ್ತಿನ ಅಂಕಿ ಅಂಶಗಳೂ ಇದಕ್ಕೆ ಪೂರಕ ದಾಖಲೆ ನೀಡಿವೆ.

ಇದನ್ನೂ ಓದಿ:

ಗದಗ: ಎರಡು ಎಕರೆ ಜಮೀನಿನಲ್ಲಿ ಭರ್ಜರಿ ಗುಲಾಬಿ ಹೂವು ಬೆಳೆದ ಉಪನ್ಯಾಸಕ; ಲಕ್ಷ ಲಕ್ಷ ರೂಪಾಯಿ ಸಂಪಾದನೆ

ಬಿಇ ಪದವಿ ಪಡೆದ 114 ಮಂದಿ ಪೊಲೀಸ್ ಇಲಾಖೆಗೆ ಸೇರ್ಪಡೆ; ಸರ್ಕಾರಿ ಹುದ್ದೆಯತ್ತ ಮುಖ ಮಾಡಿದ ಯುವಕರು

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್