AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಪ್ರೇಮಿಗಳ ದಿನದಂದು ಬೆಂಗಳೂರಿನಿಂದ ರಫ್ತಾದ ಗುಲಾಬಿ ಹೂವುಗಳ ಪ್ರಮಾಣವೆಷ್ಟು? ಇಲ್ಲಿದೆ ಅಚ್ಚರಿಯಾಗುವ ಅಂಕಿಅಂಶ

Rose | Valentine's Day: ಬೆಂಗಳೂರಿನ ಗುಲಾಬಿಗೆ ಪ್ರೇಮಿಗಳ ದಿನದ ಸಂದರ್ಭದಲ್ಲಿ ಉನ್ನತ ಬೇಡಿಕೆ ಇದೆ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಹೂವು ರಫ್ತಾಗಿದೆ. ಈ ಕುರಿತ ಅಂಕಿ ಅಂಶಗಳು ಇಲ್ಲಿವೆ.

ಈ ಬಾರಿ ಪ್ರೇಮಿಗಳ ದಿನದಂದು ಬೆಂಗಳೂರಿನಿಂದ ರಫ್ತಾದ ಗುಲಾಬಿ ಹೂವುಗಳ ಪ್ರಮಾಣವೆಷ್ಟು? ಇಲ್ಲಿದೆ ಅಚ್ಚರಿಯಾಗುವ ಅಂಕಿಅಂಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 20, 2022 | 6:20 PM

Share

ಬೆಂಗಳೂರು: ಪ್ರೇಮಿಗಳ ದಿನದಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (Bengaluru International Airport) ಬರೋಬ್ಬರಿ 5.15 ಲಕ್ಷ ಕೆ.ಜಿ ಗುಲಾಬಿ ಹೂಗಳ (Red Rose) ಸಾಗಣೆಯಾಗಿದ್ದು, ಇದು ಕಳೆದ ವರ್ಷಕ್ಕಿಂತ ಹೆಚ್ಚು ಎನ್ನಲಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರತಿವರ್ಷ ಪ್ರೇಮಿಗಳ ದಿನದಂದು (Valentine’s Day) 25 ವಿಮಾನ ನಿಲ್ದಾಣಗಳಿಗೆ ಗುಲಾಬಿಯನ್ನು ರಫ್ತು ಮಾಡಲಾಗುತ್ತದೆ. ಕಳೆದ ವರ್ಷ 2.17 ಲಕ್ಷ ಕೆ.ಜಿಯಷ್ಟು ರಫ್ತು ಮಾಡಲಾಗಿತ್ತು. ಈ ಬಾರಿ 5.15 ಲಕ್ಷ ಕೆ.ಜಿ. ರಫ್ತು ಮಾಡಲಾಗಿದ್ದು, ದುಪ್ಪಟ್ಟು ಹೆಚ್ಚಳ ಕಂಡಿದೆ. ಅದರಲ್ಲೂ ದೇಶೀಯ ಸಾಗಣೆಯಲ್ಲಿಯೇ 3.15 ಲಕ್ಷ ಕೆ.ಜಿ. ರಫ್ತು ಮಾಡಲಾಗಿದ್ದು, ಕಳೆದ ವರ್ಷ ಕೇವಲ 1.03 ಲಕ್ಷ ಕೆ.ಜಿ ಮಾತ್ರ ರಫ್ತು ಮಾಡಲಾಗಿತ್ತು ಎಂದು ಬಿಐಎಎಲ್ ಮುಖ್ಯ ಸ್ಟಾರ್ಟಜಿ ಡೆವಲಪರ್ ಆಫೀಸರ್ ಸಾತ್ಯಕಿ ರಂಗನಾಥ್ ತಿಳಿಸಿದ್ದಾರೆ. ಭಾರತ ಅದರಲ್ಲೂ ಕರ್ನಾಟಕ ಗುಲಾಬಿ ರಫ್ತು ಮಾಡುವಲ್ಲಿ ಮುಂಚೂಣಿಯಲ್ಲಿದೆ. ಪ್ರತಿ ವರ್ಷ ಗುಲಾಬಿ ರಫ್ತಿನ ಪ್ರಮಾಣ ಹೆಚ್ಚುತ್ತಲೇ ಇದೆ.

ಬೆಂಗಳೂರು ವಿಮಾನ ನಿಲ್ದಾಣದಿಂದ ದೆಹಲಿ, ಮುಂಬೈ, ಕೊಲ್ಕತ್ತ, ಗೌಹಾಟಿ, ಚಂಡೀಗಢ ಹಾಗೂ ಸಿಂಗಾಪುರ, ಲಂಡನ್, ದುಬೈ ಸೇರಿದಂತೆ ಅಂತರಾಷ್ಟ್ರೀಯ ತಾಣಗಳಿಗೆ ರಫ್ತು ಮಾಡಲಾಗಿದೆ. 2020-21ರ ವರ್ಷದಲ್ಲಿ ಬೆಂಗಳೂರು ವಿಮಾನ ನಿಲ್ದಾಣವು 60 ಸಾವಿರ ಮೆಟ್ರಿಕ್ ಟನ್‌ನಷ್ಟು ಕೋಲ್ಡ್ ಸ್ಟೋರೇಜ್ ಹೊಂದಿದ್ದು, ಕಡಿಮೆ ಬಾಳಿಕೆ ಅವಧಿಯ ಪದಾರ್ಥಗಳ ಸಾಗಣೆಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಗುಲಾಬಿ ಹೂವಿಗಿದೆ ಉನ್ನತ ಬೇಡಿಕೆ:

ಬೆಂಗಳೂರಿನ ಗುಲಾಬಿ ಹೂವುಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಬೇಡಿಕೆ ಇದೆ. ಈ ಕಾರಣದಿಂದ ಪ್ರತೀ ವರ್ಷ ರಫ್ತು ಹೆಚ್ಚುತ್ತಲೇ ಇದೆ. ಈ ವರ್ಷ ಬೆಂಗಳೂರಿನಲ್ಲಿಯೇ ಒಂದು ರೆಡ್ ರೋಜ್ ಗೆ ಸದ್ಯ 15 ರೂಪಾಯಿ ಯಿಂದ ಹಿಡಿದು 20 ರೂಪಾಯಿವರೆಗೂ ಮಾರಾಟವಾಗಿತ್ತು. ಇದಕ್ಕೆ ಬೇಡಿಕೆ ಹೇಗಿತ್ತೆಂದರೆ ವರ್ತಕರು ರೈತರ ತೋಟಕ್ಕೆ ತೆರಳಿ ಗುಲಾಬಿ ಹೂವುಗಳನ್ನು ಖರೀದಿಸಿದ್ದರು. ಈ ಕಾರಣದಿಂದ ಈ ಬಾರಿ ಗುಲಾಬಿ ಬೆಳೆದ ರೈತರ ಮೊಗದಲ್ಲಿ ಸಂತಸ ಮೂಡಿದೆ. ಇದೀಗ ರಫ್ತಿನ ಅಂಕಿ ಅಂಶಗಳೂ ಇದಕ್ಕೆ ಪೂರಕ ದಾಖಲೆ ನೀಡಿವೆ.

ಇದನ್ನೂ ಓದಿ:

ಗದಗ: ಎರಡು ಎಕರೆ ಜಮೀನಿನಲ್ಲಿ ಭರ್ಜರಿ ಗುಲಾಬಿ ಹೂವು ಬೆಳೆದ ಉಪನ್ಯಾಸಕ; ಲಕ್ಷ ಲಕ್ಷ ರೂಪಾಯಿ ಸಂಪಾದನೆ

ಬಿಇ ಪದವಿ ಪಡೆದ 114 ಮಂದಿ ಪೊಲೀಸ್ ಇಲಾಖೆಗೆ ಸೇರ್ಪಡೆ; ಸರ್ಕಾರಿ ಹುದ್ದೆಯತ್ತ ಮುಖ ಮಾಡಿದ ಯುವಕರು

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!