AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC ವೋಲ್ವೋ ಬಸ್​ಗಳಲ್ಲಿ ಸೊಳ್ಳೆ ಕಾಟ, ವಾಹನವನ್ನು ಪರಿಶೀಲನೆಗೆ ಸೂಚನೆ

ಬಿಎಂಟಿಸಿಯ ವೋಲ್ವೋ ಬಸ್​ನಲ್ಲಿ ಸೊಳ್ಳೆಗಳ ಕಾಟ ಇರುವ ಬಗ್ಗೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಎಂಟಿಸಿ ಘಟಕ-25, ಬಸ್ ಚಾಲನೆಗೂ ಮುನ್ನ ಪರಿಶೀಲಿಸುವಂತೆ ಆದೇಶಿಸಿದೆ.

BMTC ವೋಲ್ವೋ ಬಸ್​ಗಳಲ್ಲಿ ಸೊಳ್ಳೆ ಕಾಟ, ವಾಹನವನ್ನು ಪರಿಶೀಲನೆಗೆ ಸೂಚನೆ
ಸೊಳ್ಳೆ ಕಾಟ ದೂರು ಹಿನ್ನೆಲೆ BMTC ವೋಲ್ವೋ ಬಸ್​ ಪರಿಶೀಲನೆ ನಡೆಸಿದ ನಂತರ ಕಾರ್ಯಾಚರಣೆ ನಡೆಸಲು ಆದೇಶ
Kiran HV
| Edited By: Rakesh Nayak Manchi|

Updated on: Jul 21, 2023 | 8:30 PM

Share

ಬೆಂಗಳೂರು, ಜುಲೈ 21: ಬಿಎಂಟಿಸಿಯ (BMTC) ವೋಲ್ವೋ ಬಸ್​ನಲ್ಲಿ ಸೊಳ್ಳೆಗಳ (Mosquitos) ಕಾಟ ಇರುವ ಬಗ್ಗೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಎಂಟಿಸಿ ಘಟಕ-25ರ ಹಿರಿಯ ಘಟಕ ವ್ಯವಸ್ಥಾಪಕರು ಬಸ್ ಚಾಲನೆಗೂ ಮುನ್ನ ಪರಿಶೀಲಿಸುವಂತೆ ಆದೇಶಿಸಿದ್ದಾರೆ. ಬಸ್​ನಲ್ಲಿ ಸೊಳ್ಳೆ‌ಗಳ ಕಾಟದ ಬಗ್ಗೆ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಡ್ರೈವರ್ ಕಂಡಕ್ಟರ್​ಗಳಿಗೆ‌ ಸೂಚನೆ ನೀಡಿದ್ದಾರೆ.

ಕಾರ್ಯಾಚರಣೆ ಮಾಡಿಕೊಂಡು ಒಂದು ಘಟಕದಲ್ಲಿ ನಿಲ್ಲಿಸಿದಾಗ ವಾಹನದ ಒಳಗೆ ಸೊಳ್ಳೆಗಳು ಸೇರಿಕೊಳ್ಳುತ್ತಿವೆ. ಮತ್ತೆ ಆ ಬಸ್​ಗಳನ್ನು ಕಾರ್ಯಾಚರಣೆಗೆ ತೆಗೆದುಕೊಂಡು ಹೋದಾಗ ಪ್ರಯಾಣಿಸುವ ಪ್ರಯಾನಿಕರಿಗೆ ಸೊಳ್ಳೆಗಳು ಕಚ್ಚಲಾರಂಭಿಸುತ್ತವೆ. ಈ ಬಗ್ಗೆ ಪ್ರಯಾಣಿಕರಿಂದ ದೂರುಗಳು ಬರುತ್ತಿವೆ ಎಂದು ಹಿರಿಯ ಘಟಕ ವ್ಯವಸ್ಥಾಪಕರು ಹೇಳಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಈ ಎರಡು ಹೊಸ ಮಾರ್ಗಗಳಲ್ಲೂ ಸಂಚರಿಸಲಿವೆ BMTC ಬಸ್​​: ಇಲ್ಲಿದೆ ಮಾಹಿತಿ

ಬಸ್​ಗಳನ್ನು ಕಾರ್ಯಾಚರಣೆಗೆ ತೆಗೆದುಕೊಂಡು ಹೋಗುವ ಮೊದಲು ಚಾಲನ ಸಿಬ್ಬಂದಿ ಬಸ್​ ಒಳಭಾಗದಲ್ಲಿ ಪರಿಶೀಲನೆ ನಡೆಸಬೇಕು, ಇಂಜಿನ್ ಸ್ಪಾರ್ಟ್ ಮಾಡಿ, ಎರಡು ಬಾಗಿಲುಗಳನ್ನು ಓಪನ್ ಮಾಡಿ ಬ್ಲೋವರ್ ಆನ್ ಮಾಡಬೇಕು. ಸೊಳ್ಳೆಗಳಿರುವುದು ಕಂಡು ಬಂದಲ್ಲಿ ಬಟ್ಟೆಯಿಂದ ಓಡಿಸಬೇಕು. ಸೊಳ್ಳೆಗಳು ಇಲ್ಲದೇ ಇರುವ ಬಗ್ಗೆ ಖಾತರಿಪಡಿಸಿಕೊಂಡ ನಂತರ ಬಸ್​ಗಳನ್ನು ರಸ್ತೆಗೆ ಇಳಿಸಲು ತೆಗೆದುಕೊಂಡು ಹೋಗಬೇಕು ಎಂದು ಆದೇಶಿಸಿದ್ದಾರೆ.

ಬಿಎಂಟಿಸಿ ಹವಾನಿಯಂತ್ರಿತ ಬಸ್​​ನಲ್ಲಿ ಸೊಳ್ಳೆ ಕಾಟವಿದೆ ಎಂದು ಸೋಷಿಯಲ್​ ಕಾಪ್ ಎಂಬ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿತ್ತು. ಪ್ರಯಾಣಿಕರೊಬ್ಬರ ಬೆರಳ ಮೇಲೆ ಕೂತ ಸೊಳ್ಳೆ ಮತ್ತು ಪ್ರಯಾಣದ ಟಿಕೆಟ್​ ಫೋಟೋ ಟ್ವೀಟರ್​ನಲ್ಲಿ ಹಂಚಿಕೊಳ್ಳಲಾಗಿತ್ತು. “ಬಿಎಂಟಿಸಿ ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ. ಕಾಂಗ್ರೆಸ್​ ಸರ್ಕಾರ ಬಿಎಂಟಿಸಿ ಎಸಿ ಬಸ್​ಗಳಲ್ಲಿ ಸೊಳ್ಳೆಗಳಿಗೆ ಉಚಿತ ಪ್ರಯಾಣ ಎಂದು ಘೋಷಿಸಿದೆಯಾ?” ಎಂದು ಪ್ರಶ್ನಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ