AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC ವೋಲ್ವೋ ಬಸ್​ಗಳಲ್ಲಿ ಸೊಳ್ಳೆ ಕಾಟ, ವಾಹನವನ್ನು ಪರಿಶೀಲನೆಗೆ ಸೂಚನೆ

ಬಿಎಂಟಿಸಿಯ ವೋಲ್ವೋ ಬಸ್​ನಲ್ಲಿ ಸೊಳ್ಳೆಗಳ ಕಾಟ ಇರುವ ಬಗ್ಗೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಎಂಟಿಸಿ ಘಟಕ-25, ಬಸ್ ಚಾಲನೆಗೂ ಮುನ್ನ ಪರಿಶೀಲಿಸುವಂತೆ ಆದೇಶಿಸಿದೆ.

BMTC ವೋಲ್ವೋ ಬಸ್​ಗಳಲ್ಲಿ ಸೊಳ್ಳೆ ಕಾಟ, ವಾಹನವನ್ನು ಪರಿಶೀಲನೆಗೆ ಸೂಚನೆ
ಸೊಳ್ಳೆ ಕಾಟ ದೂರು ಹಿನ್ನೆಲೆ BMTC ವೋಲ್ವೋ ಬಸ್​ ಪರಿಶೀಲನೆ ನಡೆಸಿದ ನಂತರ ಕಾರ್ಯಾಚರಣೆ ನಡೆಸಲು ಆದೇಶ
Kiran HV
| Edited By: |

Updated on: Jul 21, 2023 | 8:30 PM

Share

ಬೆಂಗಳೂರು, ಜುಲೈ 21: ಬಿಎಂಟಿಸಿಯ (BMTC) ವೋಲ್ವೋ ಬಸ್​ನಲ್ಲಿ ಸೊಳ್ಳೆಗಳ (Mosquitos) ಕಾಟ ಇರುವ ಬಗ್ಗೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಎಂಟಿಸಿ ಘಟಕ-25ರ ಹಿರಿಯ ಘಟಕ ವ್ಯವಸ್ಥಾಪಕರು ಬಸ್ ಚಾಲನೆಗೂ ಮುನ್ನ ಪರಿಶೀಲಿಸುವಂತೆ ಆದೇಶಿಸಿದ್ದಾರೆ. ಬಸ್​ನಲ್ಲಿ ಸೊಳ್ಳೆ‌ಗಳ ಕಾಟದ ಬಗ್ಗೆ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಡ್ರೈವರ್ ಕಂಡಕ್ಟರ್​ಗಳಿಗೆ‌ ಸೂಚನೆ ನೀಡಿದ್ದಾರೆ.

ಕಾರ್ಯಾಚರಣೆ ಮಾಡಿಕೊಂಡು ಒಂದು ಘಟಕದಲ್ಲಿ ನಿಲ್ಲಿಸಿದಾಗ ವಾಹನದ ಒಳಗೆ ಸೊಳ್ಳೆಗಳು ಸೇರಿಕೊಳ್ಳುತ್ತಿವೆ. ಮತ್ತೆ ಆ ಬಸ್​ಗಳನ್ನು ಕಾರ್ಯಾಚರಣೆಗೆ ತೆಗೆದುಕೊಂಡು ಹೋದಾಗ ಪ್ರಯಾಣಿಸುವ ಪ್ರಯಾನಿಕರಿಗೆ ಸೊಳ್ಳೆಗಳು ಕಚ್ಚಲಾರಂಭಿಸುತ್ತವೆ. ಈ ಬಗ್ಗೆ ಪ್ರಯಾಣಿಕರಿಂದ ದೂರುಗಳು ಬರುತ್ತಿವೆ ಎಂದು ಹಿರಿಯ ಘಟಕ ವ್ಯವಸ್ಥಾಪಕರು ಹೇಳಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಈ ಎರಡು ಹೊಸ ಮಾರ್ಗಗಳಲ್ಲೂ ಸಂಚರಿಸಲಿವೆ BMTC ಬಸ್​​: ಇಲ್ಲಿದೆ ಮಾಹಿತಿ

ಬಸ್​ಗಳನ್ನು ಕಾರ್ಯಾಚರಣೆಗೆ ತೆಗೆದುಕೊಂಡು ಹೋಗುವ ಮೊದಲು ಚಾಲನ ಸಿಬ್ಬಂದಿ ಬಸ್​ ಒಳಭಾಗದಲ್ಲಿ ಪರಿಶೀಲನೆ ನಡೆಸಬೇಕು, ಇಂಜಿನ್ ಸ್ಪಾರ್ಟ್ ಮಾಡಿ, ಎರಡು ಬಾಗಿಲುಗಳನ್ನು ಓಪನ್ ಮಾಡಿ ಬ್ಲೋವರ್ ಆನ್ ಮಾಡಬೇಕು. ಸೊಳ್ಳೆಗಳಿರುವುದು ಕಂಡು ಬಂದಲ್ಲಿ ಬಟ್ಟೆಯಿಂದ ಓಡಿಸಬೇಕು. ಸೊಳ್ಳೆಗಳು ಇಲ್ಲದೇ ಇರುವ ಬಗ್ಗೆ ಖಾತರಿಪಡಿಸಿಕೊಂಡ ನಂತರ ಬಸ್​ಗಳನ್ನು ರಸ್ತೆಗೆ ಇಳಿಸಲು ತೆಗೆದುಕೊಂಡು ಹೋಗಬೇಕು ಎಂದು ಆದೇಶಿಸಿದ್ದಾರೆ.

ಬಿಎಂಟಿಸಿ ಹವಾನಿಯಂತ್ರಿತ ಬಸ್​​ನಲ್ಲಿ ಸೊಳ್ಳೆ ಕಾಟವಿದೆ ಎಂದು ಸೋಷಿಯಲ್​ ಕಾಪ್ ಎಂಬ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿತ್ತು. ಪ್ರಯಾಣಿಕರೊಬ್ಬರ ಬೆರಳ ಮೇಲೆ ಕೂತ ಸೊಳ್ಳೆ ಮತ್ತು ಪ್ರಯಾಣದ ಟಿಕೆಟ್​ ಫೋಟೋ ಟ್ವೀಟರ್​ನಲ್ಲಿ ಹಂಚಿಕೊಳ್ಳಲಾಗಿತ್ತು. “ಬಿಎಂಟಿಸಿ ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ. ಕಾಂಗ್ರೆಸ್​ ಸರ್ಕಾರ ಬಿಎಂಟಿಸಿ ಎಸಿ ಬಸ್​ಗಳಲ್ಲಿ ಸೊಳ್ಳೆಗಳಿಗೆ ಉಚಿತ ಪ್ರಯಾಣ ಎಂದು ಘೋಷಿಸಿದೆಯಾ?” ಎಂದು ಪ್ರಶ್ನಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ