Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC ವೋಲ್ವೋ ಬಸ್​ಗಳಲ್ಲಿ ಸೊಳ್ಳೆ ಕಾಟ, ವಾಹನವನ್ನು ಪರಿಶೀಲನೆಗೆ ಸೂಚನೆ

ಬಿಎಂಟಿಸಿಯ ವೋಲ್ವೋ ಬಸ್​ನಲ್ಲಿ ಸೊಳ್ಳೆಗಳ ಕಾಟ ಇರುವ ಬಗ್ಗೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಎಂಟಿಸಿ ಘಟಕ-25, ಬಸ್ ಚಾಲನೆಗೂ ಮುನ್ನ ಪರಿಶೀಲಿಸುವಂತೆ ಆದೇಶಿಸಿದೆ.

BMTC ವೋಲ್ವೋ ಬಸ್​ಗಳಲ್ಲಿ ಸೊಳ್ಳೆ ಕಾಟ, ವಾಹನವನ್ನು ಪರಿಶೀಲನೆಗೆ ಸೂಚನೆ
ಸೊಳ್ಳೆ ಕಾಟ ದೂರು ಹಿನ್ನೆಲೆ BMTC ವೋಲ್ವೋ ಬಸ್​ ಪರಿಶೀಲನೆ ನಡೆಸಿದ ನಂತರ ಕಾರ್ಯಾಚರಣೆ ನಡೆಸಲು ಆದೇಶ
Follow us
Kiran HV
| Updated By: Rakesh Nayak Manchi

Updated on: Jul 21, 2023 | 8:30 PM

ಬೆಂಗಳೂರು, ಜುಲೈ 21: ಬಿಎಂಟಿಸಿಯ (BMTC) ವೋಲ್ವೋ ಬಸ್​ನಲ್ಲಿ ಸೊಳ್ಳೆಗಳ (Mosquitos) ಕಾಟ ಇರುವ ಬಗ್ಗೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಎಂಟಿಸಿ ಘಟಕ-25ರ ಹಿರಿಯ ಘಟಕ ವ್ಯವಸ್ಥಾಪಕರು ಬಸ್ ಚಾಲನೆಗೂ ಮುನ್ನ ಪರಿಶೀಲಿಸುವಂತೆ ಆದೇಶಿಸಿದ್ದಾರೆ. ಬಸ್​ನಲ್ಲಿ ಸೊಳ್ಳೆ‌ಗಳ ಕಾಟದ ಬಗ್ಗೆ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಡ್ರೈವರ್ ಕಂಡಕ್ಟರ್​ಗಳಿಗೆ‌ ಸೂಚನೆ ನೀಡಿದ್ದಾರೆ.

ಕಾರ್ಯಾಚರಣೆ ಮಾಡಿಕೊಂಡು ಒಂದು ಘಟಕದಲ್ಲಿ ನಿಲ್ಲಿಸಿದಾಗ ವಾಹನದ ಒಳಗೆ ಸೊಳ್ಳೆಗಳು ಸೇರಿಕೊಳ್ಳುತ್ತಿವೆ. ಮತ್ತೆ ಆ ಬಸ್​ಗಳನ್ನು ಕಾರ್ಯಾಚರಣೆಗೆ ತೆಗೆದುಕೊಂಡು ಹೋದಾಗ ಪ್ರಯಾಣಿಸುವ ಪ್ರಯಾನಿಕರಿಗೆ ಸೊಳ್ಳೆಗಳು ಕಚ್ಚಲಾರಂಭಿಸುತ್ತವೆ. ಈ ಬಗ್ಗೆ ಪ್ರಯಾಣಿಕರಿಂದ ದೂರುಗಳು ಬರುತ್ತಿವೆ ಎಂದು ಹಿರಿಯ ಘಟಕ ವ್ಯವಸ್ಥಾಪಕರು ಹೇಳಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಈ ಎರಡು ಹೊಸ ಮಾರ್ಗಗಳಲ್ಲೂ ಸಂಚರಿಸಲಿವೆ BMTC ಬಸ್​​: ಇಲ್ಲಿದೆ ಮಾಹಿತಿ

ಬಸ್​ಗಳನ್ನು ಕಾರ್ಯಾಚರಣೆಗೆ ತೆಗೆದುಕೊಂಡು ಹೋಗುವ ಮೊದಲು ಚಾಲನ ಸಿಬ್ಬಂದಿ ಬಸ್​ ಒಳಭಾಗದಲ್ಲಿ ಪರಿಶೀಲನೆ ನಡೆಸಬೇಕು, ಇಂಜಿನ್ ಸ್ಪಾರ್ಟ್ ಮಾಡಿ, ಎರಡು ಬಾಗಿಲುಗಳನ್ನು ಓಪನ್ ಮಾಡಿ ಬ್ಲೋವರ್ ಆನ್ ಮಾಡಬೇಕು. ಸೊಳ್ಳೆಗಳಿರುವುದು ಕಂಡು ಬಂದಲ್ಲಿ ಬಟ್ಟೆಯಿಂದ ಓಡಿಸಬೇಕು. ಸೊಳ್ಳೆಗಳು ಇಲ್ಲದೇ ಇರುವ ಬಗ್ಗೆ ಖಾತರಿಪಡಿಸಿಕೊಂಡ ನಂತರ ಬಸ್​ಗಳನ್ನು ರಸ್ತೆಗೆ ಇಳಿಸಲು ತೆಗೆದುಕೊಂಡು ಹೋಗಬೇಕು ಎಂದು ಆದೇಶಿಸಿದ್ದಾರೆ.

ಬಿಎಂಟಿಸಿ ಹವಾನಿಯಂತ್ರಿತ ಬಸ್​​ನಲ್ಲಿ ಸೊಳ್ಳೆ ಕಾಟವಿದೆ ಎಂದು ಸೋಷಿಯಲ್​ ಕಾಪ್ ಎಂಬ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿತ್ತು. ಪ್ರಯಾಣಿಕರೊಬ್ಬರ ಬೆರಳ ಮೇಲೆ ಕೂತ ಸೊಳ್ಳೆ ಮತ್ತು ಪ್ರಯಾಣದ ಟಿಕೆಟ್​ ಫೋಟೋ ಟ್ವೀಟರ್​ನಲ್ಲಿ ಹಂಚಿಕೊಳ್ಳಲಾಗಿತ್ತು. “ಬಿಎಂಟಿಸಿ ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ. ಕಾಂಗ್ರೆಸ್​ ಸರ್ಕಾರ ಬಿಎಂಟಿಸಿ ಎಸಿ ಬಸ್​ಗಳಲ್ಲಿ ಸೊಳ್ಳೆಗಳಿಗೆ ಉಚಿತ ಪ್ರಯಾಣ ಎಂದು ಘೋಷಿಸಿದೆಯಾ?” ಎಂದು ಪ್ರಶ್ನಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ