AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC ವೋಲ್ವೋ ಬಸ್​ಗಳಲ್ಲಿ ಸೊಳ್ಳೆ ಕಾಟ, ವಾಹನವನ್ನು ಪರಿಶೀಲನೆಗೆ ಸೂಚನೆ

ಬಿಎಂಟಿಸಿಯ ವೋಲ್ವೋ ಬಸ್​ನಲ್ಲಿ ಸೊಳ್ಳೆಗಳ ಕಾಟ ಇರುವ ಬಗ್ಗೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಎಂಟಿಸಿ ಘಟಕ-25, ಬಸ್ ಚಾಲನೆಗೂ ಮುನ್ನ ಪರಿಶೀಲಿಸುವಂತೆ ಆದೇಶಿಸಿದೆ.

BMTC ವೋಲ್ವೋ ಬಸ್​ಗಳಲ್ಲಿ ಸೊಳ್ಳೆ ಕಾಟ, ವಾಹನವನ್ನು ಪರಿಶೀಲನೆಗೆ ಸೂಚನೆ
ಸೊಳ್ಳೆ ಕಾಟ ದೂರು ಹಿನ್ನೆಲೆ BMTC ವೋಲ್ವೋ ಬಸ್​ ಪರಿಶೀಲನೆ ನಡೆಸಿದ ನಂತರ ಕಾರ್ಯಾಚರಣೆ ನಡೆಸಲು ಆದೇಶ
Kiran HV
| Edited By: |

Updated on: Jul 21, 2023 | 8:30 PM

Share

ಬೆಂಗಳೂರು, ಜುಲೈ 21: ಬಿಎಂಟಿಸಿಯ (BMTC) ವೋಲ್ವೋ ಬಸ್​ನಲ್ಲಿ ಸೊಳ್ಳೆಗಳ (Mosquitos) ಕಾಟ ಇರುವ ಬಗ್ಗೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಎಂಟಿಸಿ ಘಟಕ-25ರ ಹಿರಿಯ ಘಟಕ ವ್ಯವಸ್ಥಾಪಕರು ಬಸ್ ಚಾಲನೆಗೂ ಮುನ್ನ ಪರಿಶೀಲಿಸುವಂತೆ ಆದೇಶಿಸಿದ್ದಾರೆ. ಬಸ್​ನಲ್ಲಿ ಸೊಳ್ಳೆ‌ಗಳ ಕಾಟದ ಬಗ್ಗೆ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಡ್ರೈವರ್ ಕಂಡಕ್ಟರ್​ಗಳಿಗೆ‌ ಸೂಚನೆ ನೀಡಿದ್ದಾರೆ.

ಕಾರ್ಯಾಚರಣೆ ಮಾಡಿಕೊಂಡು ಒಂದು ಘಟಕದಲ್ಲಿ ನಿಲ್ಲಿಸಿದಾಗ ವಾಹನದ ಒಳಗೆ ಸೊಳ್ಳೆಗಳು ಸೇರಿಕೊಳ್ಳುತ್ತಿವೆ. ಮತ್ತೆ ಆ ಬಸ್​ಗಳನ್ನು ಕಾರ್ಯಾಚರಣೆಗೆ ತೆಗೆದುಕೊಂಡು ಹೋದಾಗ ಪ್ರಯಾಣಿಸುವ ಪ್ರಯಾನಿಕರಿಗೆ ಸೊಳ್ಳೆಗಳು ಕಚ್ಚಲಾರಂಭಿಸುತ್ತವೆ. ಈ ಬಗ್ಗೆ ಪ್ರಯಾಣಿಕರಿಂದ ದೂರುಗಳು ಬರುತ್ತಿವೆ ಎಂದು ಹಿರಿಯ ಘಟಕ ವ್ಯವಸ್ಥಾಪಕರು ಹೇಳಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಈ ಎರಡು ಹೊಸ ಮಾರ್ಗಗಳಲ್ಲೂ ಸಂಚರಿಸಲಿವೆ BMTC ಬಸ್​​: ಇಲ್ಲಿದೆ ಮಾಹಿತಿ

ಬಸ್​ಗಳನ್ನು ಕಾರ್ಯಾಚರಣೆಗೆ ತೆಗೆದುಕೊಂಡು ಹೋಗುವ ಮೊದಲು ಚಾಲನ ಸಿಬ್ಬಂದಿ ಬಸ್​ ಒಳಭಾಗದಲ್ಲಿ ಪರಿಶೀಲನೆ ನಡೆಸಬೇಕು, ಇಂಜಿನ್ ಸ್ಪಾರ್ಟ್ ಮಾಡಿ, ಎರಡು ಬಾಗಿಲುಗಳನ್ನು ಓಪನ್ ಮಾಡಿ ಬ್ಲೋವರ್ ಆನ್ ಮಾಡಬೇಕು. ಸೊಳ್ಳೆಗಳಿರುವುದು ಕಂಡು ಬಂದಲ್ಲಿ ಬಟ್ಟೆಯಿಂದ ಓಡಿಸಬೇಕು. ಸೊಳ್ಳೆಗಳು ಇಲ್ಲದೇ ಇರುವ ಬಗ್ಗೆ ಖಾತರಿಪಡಿಸಿಕೊಂಡ ನಂತರ ಬಸ್​ಗಳನ್ನು ರಸ್ತೆಗೆ ಇಳಿಸಲು ತೆಗೆದುಕೊಂಡು ಹೋಗಬೇಕು ಎಂದು ಆದೇಶಿಸಿದ್ದಾರೆ.

ಬಿಎಂಟಿಸಿ ಹವಾನಿಯಂತ್ರಿತ ಬಸ್​​ನಲ್ಲಿ ಸೊಳ್ಳೆ ಕಾಟವಿದೆ ಎಂದು ಸೋಷಿಯಲ್​ ಕಾಪ್ ಎಂಬ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿತ್ತು. ಪ್ರಯಾಣಿಕರೊಬ್ಬರ ಬೆರಳ ಮೇಲೆ ಕೂತ ಸೊಳ್ಳೆ ಮತ್ತು ಪ್ರಯಾಣದ ಟಿಕೆಟ್​ ಫೋಟೋ ಟ್ವೀಟರ್​ನಲ್ಲಿ ಹಂಚಿಕೊಳ್ಳಲಾಗಿತ್ತು. “ಬಿಎಂಟಿಸಿ ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ. ಕಾಂಗ್ರೆಸ್​ ಸರ್ಕಾರ ಬಿಎಂಟಿಸಿ ಎಸಿ ಬಸ್​ಗಳಲ್ಲಿ ಸೊಳ್ಳೆಗಳಿಗೆ ಉಚಿತ ಪ್ರಯಾಣ ಎಂದು ಘೋಷಿಸಿದೆಯಾ?” ಎಂದು ಪ್ರಶ್ನಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ