AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ: ಮಸ್ಕಿಟೋಗಳಿಂದ ಮುಕ್ತಿ ಕೊಡಿಸಿ ಅಂತ BMTCಗೆ ಟ್ಯಾಗ್ ಮಾಡಿ ಟ್ವೀಟ್

ಸೊಳ್ಳೆಗಳು ಬಿಎಂಟಿಸಿ ಎಸಿ ಬಸ್​​ ಪ್ರಯಾಣಿಕರಿಗೂ ತೊಂದರೆ ಕೊಡುತ್ತಿವೆ. ಹೌದು ಬಿಎಂಟಿಸಿ ಹವಾನಿಯಂತ್ರಿತ ಬಸ್​​ನಲ್ಲಿ ಸೊಳ್ಳೆ ಕಾಟವಿದೆ ಎಂದು ಸೋಷಿಯಲ್​ ಕಾಪ್​ ಎಂಬವರು ಟ್ವೀಟ್ ಮಾಡಿದ್ದಾರೆ.

ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ: ಮಸ್ಕಿಟೋಗಳಿಂದ ಮುಕ್ತಿ ಕೊಡಿಸಿ ಅಂತ BMTCಗೆ ಟ್ಯಾಗ್ ಮಾಡಿ ಟ್ವೀಟ್
ಬಿಎಂಟಿಸಿ ಬಸ್​ನಲ್ಲಿ ಸೊಳ್ಳೆ
Kiran Surya
| Edited By: |

Updated on:Jul 19, 2023 | 11:32 AM

Share

ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಸೊಳ್ಳೆಗಳ (Mosquito) ಕಾಟ ಜಾಸ್ತಿಯಾಗಿದೆ. ಅದರಲ್ಲಂತು ನಗರ ಮತ್ತು ಸುತ್ತಮುತ್ತಲಿನ ಪ್ರಮುಖ ಪ್ರದೇಶಗಳು ಮತ್ತು ವಿಶೇಷವಾಗಿ ಹೊರವರ್ತುಲ ರಸ್ತೆಯ ಹೊರವಲಯದಲ್ಲಿರುವ ಪ್ರಮುಖ ಪ್ರದೇಶಗಳ ಸೊಳ್ಳೆಗಳ ಕಾಟ ಜಾಸ್ತಿಯಾಗಿದೆ. ಮಳೆಗಾಲದ ಸಮಯದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾದ ಹಿನ್ನೆಲೆ ಮಲೇರಿಯಾ, ಡೆಂಗ್ಯೂ (Dengue) ಮತ್ತು ಚಿಕೂನ್‌ಗುನ್ಯಾದಂತಹ ರೋಗಗಳು ಹರಡುವ ಭಯ ನಗರವಾಸಿಗಳಲ್ಲಿದೆ. ಇದಗೀಗ ಸೊಳ್ಳೆಗಳು ಬಿಎಂಟಿಸಿ (BMTC) ಎಸಿ ಬಸ್​​ ಪ್ರಯಾಣಿಕರಿಗೂ ತೊಂದರೆ ಕೊಡುತ್ತಿವೆ. ಹೌದು ಬಿಎಂಟಿಸಿ ಹವಾನಿಯಂತ್ರಿತ ಬಸ್​​ನಲ್ಲಿ ಸೊಳ್ಳೆ ಕಾಟವಿದೆ ಎಂದು ಸೋಷಿಯಲ್​ ಕಾಪ್​ ಎಂಬವರು ಟ್ವೀಟ್ ​ ಮಾಡಿದ್ದಾರೆ.

ಸೋಷಿಯಲ್​ ಕಾಪ್​ ಎಂಬುವರು ತಮ್ಮ ಬೆರಳ ಮೇಲೆ ಕೂತ ಸೊಳ್ಳೆ ಮತ್ತು ಪ್ರಯಾಣದ ಟಿಕೆಟ್​ ಫೋಟೋ ಟ್ವೀಟರ್​ನಲ್ಲಿ ಹಂಚಿಕೊಂಡಿದ್ದು “ಬಿಎಂಟಿಸಿ ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ. ಕಾಂಗ್ರೆಸ್​ ಸರ್ಕಾರ ಬಿಎಂಟಿಸಿ ಎಸಿ ಬಸ್​ಗಳಲ್ಲಿ ಸೊಳ್ಳೆಗಳಿಗೆ ಉಚಿತ ಪ್ರಯಾಣ ಎಂದು ಘೋಷಿಸಿದೆಯಾ?” ಎಂದು ಪ್ರಶ್ನಿಸಿದ್ದಾರೆ​.

ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ ಸೊಳ್ಳೆಗಳಿಗೆ ಸಾಮಾನ್ಯ ಬಸ್​ಗಳಲ್ಲಿ ಜಾಗವಿಲ್ಲಿದೆ ಎಸಿ ಬಸ್​​ನಲ್ಲಿ ಪ್ರಯಾಣ ಮಾಡುತ್ತಿವೆ ಎಂದು ನೆಟ್ಟಿಗರು ಕಾಮೆಂಟ್​​ ಮಾಡಿ ಕುಹಕವಾಡಿದ್ದಾರೆ.

ಇದನ್ನೂ ಓದಿ: ಡೆಂಗ್ಯೂ: ಈ ಸರಳ ಅಡುಗೆ ಪದಾರ್ಥವು ಸೊಳ್ಳೆ ಕಡಿತದಿಂದ ನಿಮ್ಮನ್ನು ರಕ್ಷಿಸುತ್ತದೆ

ಮೊತ್ತಬ್ಬರು ಸಾಮಾನ್ಯ ಬಸ್​ನಲ್ಲಿ ಸೀಟ್​ಗಾಗಿ ಜನರು ಪರದಾಡುತ್ತಿದ್ದರೇ ನೀವು ಸೊಳ್ಳೆಗಳಿಂದ ಮುಕ್ತ ಸವಾರಿಯನ್ನು ಬಯಸುತ್ತೀದ್ದೀರಿ ಎಂದು ಶ್ರೀಕಾಂತ ಗೌಡ ಎಂಬ ಟ್ವಿಟರ್​ ಬಳಕೆದಾರರು ಕಾಮೆಂಟ್​ ಮಾಡಿದ್ದಾರೆ.

ಇನ್ನು ಬಿಎಂಟಿಸಿ ಕಂಪ್ಲೇಂಟ್ ರಿಸಿವ್ಡ್ ಅತೀ ಶೀಘ್ರದಲ್ಲಿ ಪರಿಹಾರ ಕೊಡುತ್ತೇವೆ ಅಂತ ಪ್ರತಿಕ್ರಿಯಿಸಿದೆ. ​

Published On - 11:31 am, Wed, 19 July 23

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು