Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್​​ಗಳ ಪರ ಫ್ಯಾನ್​ ಪೇಜ್​ ತೆರೆದಿದ್ದವರಲ್ಲಿ ಬಹುಪಾಲು ಅಪ್ರಾಪ್ತ ಬಾಲಕರು!

ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ರೌಡಿಶೀಟರ್​ಗಳ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್​ ಪೇಜ್​ ತೆರದು, ಅವರ ಪರವಾಗಿ ಪೋಸ್ಟ್​ ಹಾಕುವುದು ಹೆಚ್ಚಾಗಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಅಪರಾಧ ವಿಭಾಗ ಮಹತ್ವದ ಹೆಜ್ಜೆ ಇಟ್ಟಿದ್ದು, 60 ಖಾತೆಗಳನ್ನು ಬಂದ್​ ಮಾಡಿಸಿದ್ದಾರೆ.

ರೌಡಿಶೀಟರ್​​ಗಳ ಪರ ಫ್ಯಾನ್​ ಪೇಜ್​ ತೆರೆದಿದ್ದವರಲ್ಲಿ ಬಹುಪಾಲು ಅಪ್ರಾಪ್ತ ಬಾಲಕರು!
ಸಾಂದರ್ಭಿಕ ಚಿತ್ರ
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on: Jul 22, 2024 | 11:38 AM

ಬೆಂಗಳೂರು, ಜುಲೈ 22: ರೌಡಿಶೀಟರ್​​ಗಳ (Rowdy Sheeter) ಪರವಾಗಿ ಸಮಾಜಿಕ ಜಾಲತಾಣದಲ್ಲಿ (Social Media) ತೆರಯಲಾಗಿರುವ 60 ಇನ್ಸ್ಟಾಗ್ರಾಮ್ (Instagram) ಮತ್ತು ಯೂಟ್ಯೂಬ್ (YouTube) ಅಕೌಂಟ್​​ಗಳನ್ನು ಸಿಸಿಬಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಸಿಸಿಬಿ (CCB) ಜಂಟಿ ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರ ಸೂಚನೆ ಮೇರೆಗೆ ಕಾರ್ಯಾಚರಣೆ ನಡೆದಿದ್ದು, ಎಲ್ಲ ಪೇಜ್​ಗಳ ಅಡ್ಮಿನ್​​ ಬಹುಪಾಲು ಅಪ್ರಾಪ್ತ ಬಾಲಕರು ಎಂಬುವುದು ಆಘಾತಕಾರಿ ಅಂಶವಾಗಿದೆ.

ಸಿಸಿಬಿ ಅಧಿಕಾರಿಗಳು ಪೇಜ್ ಅಡ್ಮಿನ್​ ಅಪ್ರಾಪ್ತ ಬಾಲಕರು ಮತ್ತು ಅವರ ಪೋಷಕರನ್ನು ಕಚೇರಿಗೆ ಕರೆಸಿ “ಪೋಷಕರಿಗೆ ಮಕ್ಕಳ ಮೇಲೆ ನಿಗಾ ಇಡುವಂತೆ ಸೂಚನೆ ನೀಡಿದರು. ಹಾಗೆ ಬಾಲಕರಿಗೆ ಪೇಜ್​ಗಳನ್ನು ಬಂದ್​ ಮಾಡುವಂತೆ ಹೇಳಿದರು. ಅಲ್ಲದೆ ಇನ್ಮುಂದೆ ಇಂತಹ ಕೆಲಸ ಮಾಡದಂತೆ” ಎಚ್ಚರಿಕೆ ನೀಡಿದರು. ಇದೇ ವೇಳೆ ಅಧಿಕಾರಿಗಳು ಸುಮಾರು 60 ಹೆಚ್ಚು ಸಾಮಾಜಿಕ ಜಾಲತಾಣದ ಅಕೌಂಟ್​ಗಳನ್ನು ಬಂದ್ ಮಾಡಿಸಿದರು.

ಬಾಲಕರಿಗೆ ರೌಡಿಶೀಟರ್​ಗಳ ಸಂಪರ್ಕ ಹೇಗೆ

ವಿಲ್ಸನ್ ಗಾರ್ಡನ್ ನಾಗ, ಮಾರತ್ ಹಳ್ಳಿ ರೋಹಿತ್, ಸೈಲೆಂಟ್ ಸುನಿಲ್, ಕುಣಿಗಲ್ ಗಿರಿ ಸೇರಿದಂತೆ ಹಲವಾರು ರೌಡಿಗಳ ಶಿಷ್ಯರು ಬಾಲಕರನ್ನು ಸಂಪರ್ಕಿಸುತ್ತಾರೆ. ಬಾಲಕರಿಗೆ ಇನ್ಸ್ಟಾಗ್ರಾಮ್​​ನಲ್ಲಿ ಖಾತೆ ತೆರೆಯುವಂತೆ ಹೇಳುತ್ತಾರೆ. ಬಳಿಕ ರೌಡಿಶೀಟರ್​​ಗಳ ವಿಡಿಯೋಗಳನ್ನು ಅವರಿಗೆ ನೀಡಿ ಎಡಿಟ್ ಮಾಡಿ ಪೇಜ್​ನಲ್ಲಿ ಹಾಕುವಂತೆ ಸೂಚಿಸುತ್ತಾರೆ.

ಇದನ್ನೂ ಓದಿ: ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿರುವ ಬಾಂಗ್ಲಾದೇಶ ನಿವಾಸಿಗಳ ಮನೆ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ

ಬಾಲಕರು N BOSS, S BOSS, C BOSS ಅಂತ ಪೇಜ್ ತೆರಯುತ್ತಿದ್ದರು. ಬೆಂಗಳೂರು ಡಾನ್, ಅಂಡರ್ ವಲ್ಡ್ ಡಾನ್, ಅಂತ ಬಿಲ್ಡಪ್ ಕೊಟ್ಟು ಪೇಜ್​ನಲ್ಲಿ ಪೋಸ್ಟ್ ಮಾಡುತ್ತಿದ್ದರು. ಬೆಂಕಿ, ಲಾಂಗು ಮಚ್ಚು ಎಫೆಕ್ಟ್​ಗಳನ್ನ ಹಾಕಿ ಸಿನಿಮಾ ಸ್ಟೈಲ್​ನಲ್ಲಿ ರೌಡಿಗಳಿಗೆ ಬಿಲ್ಡಪ್ ಕೊಡುತ್ತಿದ್ದರು. ಒಂದು ವಿಡಿಯೋ ಎಡಿಟ್ ಮಾಡಿ ಪೋಸ್ಟ್ ಮಾಡಲು ರೌಡಿ ಶಿಷ್ಯಂದಿರು ಬಾಲಕರಿಗೆ 500 ರೂ. ನೀಡುತ್ತಿದ್ದರು. ಸಾಮಾಜದಲ್ಲಿ ರೌಡಿಗಳ ಹವಾ ಏನೆಂದು ತೋರಿಸುವ ಕಾರಣಕ್ಕೆ ಹೀಗೆ ಮಾಡಿಸುತ್ತಿದ್ದರು.

ಇದು ಅಡ್ಡದಾರಿ ಹಿಡಿಯುತ್ತಿರುವ ಯುವಕರಿಗೆ ಇನ್ನಷ್ಟು ಪ್ರೇರಣೆ ನೀಡಿದಂತಾಗುತ್ತದೆ. ಇಂತಹ ಪೇಜ್​ಗಳಿಂದಾಗಿ ಯುವಜನತೆ ರೌಡಿಸಂನತ್ತ ಆಕರ್ಷಿತರಾಗುತ್ತಾರೆ ಎಂದು ಸಾರ್ವಜನಿಕರು ಸಿಬಿ ಡಿಸಿಪಿ ಶ್ರೀನಿವಾಸ್​​ ಗೌಡ ಅವರಿಗೆ ಹಲವರು ದೂರು ನೀಡಿದ್ದರು. ಈ ದೂರು ಆಧಾರದ ಮೇಲೆ ಸಿಸಿಬಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಹಣ ಕೊಟ್ಟು ವಿಡಿಯೋ ಮಾಡಿಸುತಿದ್ದವರಿಗೆ ಸಿಸಿಬಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು