AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತಲಲ್ಲಿ ಮಲಗಿದ್ದ ಬಾಲಕಿ ಮೇಲೆ ಟೆಂಪೊ ಹತ್ತಿಸಿದ ಚಾಲಕ, ಮಗ ಸೊಸೆಯಿಂದ ರಕ್ಷಿಸುವಂತೆ ತಾಯಿ ಮನವಿ

ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬಾಲಕಿ ಸಾವನ್ನಪ್ಪಿದ್ದಾರೆ. ಟೆಂಪೊ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿ.ಟಿ.ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕತ್ತಲಲ್ಲಿ ಮಲಗಿದ್ದ ಬಾಲಕಿ ಮೇಲೆ ಟೆಂಪೊ ಹತ್ತಿಸಿದ ಚಾಲಕ, ಮಗ ಸೊಸೆಯಿಂದ ರಕ್ಷಿಸುವಂತೆ ತಾಯಿ ಮನವಿ
ಮಗ ಸೊಸೆಯಿಂದ ರಕ್ಷಿಸುವಂತೆ ತಾಯಿ ಮನವಿ
TV9 Web
| Edited By: |

Updated on:Mar 29, 2022 | 11:46 AM

Share

ರಾಯಚೂರು: ಮದುವೆಗೆ ನಿರಾಕರಿಸಿದ ಪ್ರೇಯಸಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹತ್ಯೆ ನಡೆದ 33 ದಿನದ ಬಳಿಕ ಪಾಗಲ್ ಪ್ರೇಮಿ ಶವ ಪತ್ತೆ ಆಗಿದೆ. ಪ್ರೇಯಸಿ ಹತ್ಯೆಗೈದಿದ್ದ ಸ್ಥಳದಲ್ಲಿಯೇ ಪ್ರಿಯಕರನ ಶವ ಪತ್ತೆ ಆಗಿದೆ. ರಾಯಚೂರು ಜಿಲ್ಲೆ ಮಸ್ಕಿಯಲ್ಲಿ ಭೂಮಿಕಾ (15) ಎಂಬಾಕೆಯ ಕೊಲೆ ನಡೆದಿತ್ತು. ಫೆಬ್ರವರಿ 25 ರಂದು ಭೂಮಿಕಾ ರಮೇಶ್ ಹತ್ಯೆ ಮಾಡಿದ್ದ. ಭೂಮಿಕಾ ಹತ್ಯೆ ಬಳಿಕ ಪ್ರಿಯಕರ ರಮೇಶ್ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಭೂಮಿಕಾ ಹತ್ಯೆಯಾದ 2-3 ದಿನಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ. ಭೂಮಿಕಾ ಕೊಲೆಯಾದ ಜಾಗದಲ್ಲಿ ರಮೇಶ್ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಪೊದೆಯಲ್ಲಿ ಬಿದ್ದಿದ್ದ ಮೃತದೇಹದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರಿಂದ ಇದೀಗ ಪರಿಶೀಲನೆ ನಡೆಸಲಾಗಿದೆ. ಮಸ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕತ್ತಲಲ್ಲಿ ಮಲಗಿದ್ದ ಬಾಲಕಿ ಮೇಲೆ ಟೆಂಪೊ ಹತ್ತಿಸಿದ್ದ ಚಾಲಕ

ಬೆಂಗಳೂರಿನ ಸಿಟಿ ಮಾರ್ಕೆಟ್‌ನಲ್ಲಿ ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಕತ್ತಲಲ್ಲಿ ಮಲಗಿದ್ದ ಬಾಲಕಿ ಮೇಲೆ ಟೆಂಪೊ ಹತ್ತಿಸಿಲಾಗಿದೆ. ಕೂಡಲೇ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬಾಲಕಿ ಸಾವನ್ನಪ್ಪಿದ್ದಾರೆ. ಟೆಂಪೊ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿ.ಟಿ.ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಶಿವನ್ಯ (7) ಕುಟುಂಬಸ್ಥರು ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ. ಬೆಂಗಳೂರಿನ ಹುಸ್ಕೂರು ಜಾತ್ರೆಗೆ ಕುಟುಂಬಸ್ಥರು ಬಂದಿದ್ದರು. ಅಲಂಕಾರಿಕ ವಸ್ತುಗಳನ್ನ ಮಾರಲು ಜಾತ್ರೆಗೆ ಬಂದಿದ್ದರು. ಊರಿಗೆ ಹಿಂತಿರುಗಲು ಸಿಟಿ ಮಾರ್ಕೆಟ್​ಗೆ ರಾತ್ರಿ ಬಂದಿದ್ದರು. ರಾತ್ರಿ ಬಸ್ ಸಿಗದೆ ತೆಂಗಿನ ಕಾಯಿ ಮಂಡಿ ಬಳಿ ಮಲಗಿದ್ದರು. ಕೆ.ಆರ್​. ಮಾರ್ಕೆಟ್​ಗೆ ಟೆಂಪೊದಲ್ಲಿ ಹೂವು ತಂದಿದ್ದ ಚಾಲಕ, ಅನ್​ಲೋಡ್ ಮಾಡಿ ಟೆಂಪೊ ರಿವರ್ಸ್ ತೆಗೆದಿದ್ದ. ರಸ್ತೆ ಬದಿ ಮಲಗಿದ್ದ ಬಾಲಕಿಯನ್ನ ಗಮನಿಸದ ಚಾಲಕ, ಬಾಲಕಿಯನ್ನ ಗಮನಿಸದೆ ಬಾಲಕಿ ಮೇಲೆ ವಾಹನ ಹರಿದಿದೆ. ಬಾಲಕಿ ಜೋರಾಗಿ ಕಿರುಚುತ್ತಿದ್ದಂತೆ ಚಾಲಕ ಪರಾರಿಯಾಗಿದ್ದ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಶಿವನ್ಯ (7) ಸಾವನ್ನಪ್ಪಿದ್ದಾರೆ. ಸಿಟಿ ಮಾರ್ಕೆಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮಗ, ಸೊಸೆಯಿಂದ ರಕ್ಷಣೆ ಕೊಡುವಂತೆ ತಾಯಿ ಮನವಿ

ಮಗ, ಸೊಸೆಯಿಂದ ರಕ್ಷಣೆ ಕೊಡುವಂತೆ ತಾಯಿ ಮನವಿ ಮಾಡಿದ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮಾವಿನಕೆರೆ ಎಂಬಲ್ಲಿ ನಡೆದಿದೆ. ತಿಪಟೂರು ಉಪವಿಭಾಗಾಧಿಕಾರಿ ದಿಗ್ವಿಜಯ ಬೋಡಕೆರಿಗೆ ನಂಜಮ್ಮ ಎಂಬುವವರಿಂದ ಮನವಿ ಮಾಡಲಾಗಿದೆ. ಮಗ ಸತೀಶ್, ಸೊಸೆ ಪ್ರಮೀಳಾ ನಿತ್ಯ ಕಿರುಕುಳ ನೀಡುತ್ತಿದ್ದಾರೆ. ಮನೆಯಲ್ಲಿ ಮಲಗುವುದಕ್ಕೆ ಬಿಡದೆ ಕಿರುಕುಳ ನೀಡುತ್ತಿದ್ದಾರೆ. ಕೊಲೆ ಮಾಡುವುದಕ್ಕೂ ಯತ್ನಿಸಿದ್ದಾರೆಂದು ತಾಯಿ ಆರೋಪ ಮಾಡಿದ್ದಾರೆ. ಸ್ಥಳೀಯ ಠಾಣೆಗೆ ದೂರು ನೀಡಿದರೂ ಪ್ರಯೋಜನವಿಲ್ಲ. ದಯವಿಟ್ಟು ನನ್ನ ಜೀವಕ್ಕೆ ರಕ್ಷಣೆ ಕೊಡಿ ಎಂದು ತಾಯಿ ಮನವಿ ಮಾಡಿದ್ದಾರೆ.

ಕಲಬುರಗಿ: ಇತ್ತ 10 ಲಕ್ಷ ರೂಪಾಯಿ ವರದಕ್ಷಿಣೆಗಾಗಿ ಕಿರುಕುಳ ಹಿನ್ನೆಲೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಂಜೀವನ್ ಯಾಕಾಪುರ್‌ ಎಂಬಾತನಿಗೆ 2 ವರ್ಷ ಜೈಲು ಶಿಕ್ಷೆ, 20 ಸಾವಿರ ದಂಡ ವಿಧಿಸಿ ಕಲಬುರಗಿ ಜೆಎಂಎಫ್‌ಸಿ ನ್ಯಾಯಾಲಯದ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮಂಡ್ಯ: ಕೊಂಡೋತ್ಸವ ವೀಕ್ಷಣೆ ವೇಳೆ ಛಾವಣಿ ಕುಸಿತ; ಮಹಿಳೆ ಸಾವು, ಹಲವರಿಗೆ ಗಾಯ

ಇದನ್ನೂ ಓದಿ: SSLC ಪರೀಕ್ಷೆಗೆ ನೇಮಕಗೊಂಡಿದ್ದ ಮುಖ್ಯ ಶಿಕ್ಷಕ ಹೃದಯಾಘಾತದಿಂದ ಸಾವು

Published On - 8:39 am, Tue, 29 March 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು