AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM BS Yediyurappa ರಾಜೀನಾಮೆ ಸುಳಿವಿಗೆ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದೇನು?

ಮುಂದಿನ ನಡೆ ಬಗ್ಗೆ ಯಡಿಯೂರಪ್ಪ ಏನನ್ನೂ ಹೇಳಿಲ್ಲ. ಇಡೀ ಕುಟುಂಬಕ್ಕೆ ಶಕ್ತಿ ಕೊಟ್ಟಿರೋದು ಬಿಜೆಪಿ ಪಕ್ಷ. ಪಕ್ಷ ಏನೇ ಕ್ರಮ ಕೈಗೊಂಡರು ನಾವು ಬದ್ಧರಾಗಿರುತ್ತೇವೆ ಎಂದು ಸಂಸದ ರಾಘವೇಂದ್ರ ಟಿವಿ9ಗೆ ತಿಳಿಸಿದರು.

CM BS Yediyurappa ರಾಜೀನಾಮೆ ಸುಳಿವಿಗೆ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದೇನು?
ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ
TV9 Web
| Edited By: sandhya thejappa|

Updated on:Jul 22, 2021 | 11:41 AM

Share

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುವ ಸುಳಿವನ್ನು ನೀಡಿದ್ದು, ಈ ಬಗ್ಗೆ ಸಿಎಂ ಪುತ್ರ, ಸಂಸದ ಬಿ.ವೈ.ರಾಘವೇಂದ್ರ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಯಡಿಯೂರಪ್ಪ ವರಿಷ್ಠರಿಗೆ ಹೇಳಿದ್ದಾರೆ. ಯಾವುದೇ ಸ್ಥಾನಮಾನ ಬೇಕಾಗಿಲ್ಲ. 75 ವರ್ಷದ ನಂತರ ಸೇವೆ ಸಲ್ಲಿಸಲು ನನಗೆ ಅವಕಾಶ ಇದೆ ಎಂದು ಸಿಎಂ ಯಡಿಯೂರಪ್ಪ ಅವರೇ ಹೇಳಿದ್ದಾರೆ ಎಂದು ಮಾತನಾಡಿದ ಬಿ.ವೈ.ರಾಘವೇಂದ್ರ, ಯಡಿಯೂರಪ್ಪನವರು ಯುವಕರಂತೆ ಎಲ್ಲಾ ಸಮಯದಲ್ಲಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಮುಂದಿನ ನಡೆ ಬಗ್ಗೆ ಯಡಿಯೂರಪ್ಪ ಏನನ್ನೂ ಹೇಳಿಲ್ಲ. ಇಡೀ ಕುಟುಂಬಕ್ಕೆ ಶಕ್ತಿ ಕೊಟ್ಟಿರೋದು ಬಿಜೆಪಿ ಪಕ್ಷ. ಪಕ್ಷ ಏನೇ ಕ್ರಮ ಕೈಗೊಂಡರು ನಾವು ಬದ್ಧರಾಗಿರುತ್ತೇವೆ ಎಂದು ಸಂಸದ ರಾಘವೇಂದ್ರ ಟಿವಿ9ಗೆ ತಿಳಿಸಿದರು.

ಮೊದಲ ಸಲ ರಾಜೀನಾಮೆ ಸುಳಿವು ನೀಡಿದ ಬಿಎಸ್​ವೈ ಹೈಕಮಾಂಡ್ ಏನು ಹೇಳುತ್ತದೆಯೋ ಆ ತೀರ್ಮಾನ ನನ್ನದು. ರಾಷ್ಟ್ರೀಯ ನಾಯಕರು ಕೊಡುವ ಸೂಚನೆಯನ್ನು ಪಾಲಿಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಜುಲೈ 26ರಿಂದ ನನ್ನ ಕೆಲಸವನ್ನು ಮಾಡುತ್ತೇನೆ. ಬಿಜೆಪಿಯಲ್ಲಿ 75 ವರ್ಷ ದಾಟಿದವರಿಗೆ ಅಧಿಕಾರ ಕೊಟ್ಟಿಲ್ಲ. ಆದರೆ ನನ್ನ ಕೆಲಸವನ್ನು ಮೆಚ್ಚಿ ಅಧಿಕಾರವನ್ನು ಕೊಟ್ಟಿದ್ದಾರೆ. ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತರುವ ಸಂಕಲ್ಪ ನನ್ನದು ಎಂದು ಬಿಎಸ್​ವೈ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ.

ಇದನ್ನೂ ಓದಿ

CM BS Yediyurappa: ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ನಿರ್ಗಮನದ ಬಗ್ಗೆ ಸುಳಿವು: ರೇಣುಕಾಚಾರ್ಯ ಮೊದಲ ಪ್ರತಿಕ್ರಿಯೆ

Big Breaking: ಸಿಎಂ ಹುದ್ದೆಗೆ ರಾಜೀನಾಮೆ? ಸುಳಿವು ನೀಡಿದ ಬಿಎಸ್ ಯಡಿಯೂರಪ್ಪ

MP BY raghavendra React to BS Yediyurappa hints for his resignation to Chief Minister Post

Published On - 11:40 am, Thu, 22 July 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ