AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯದ ದೃಷ್ಟಿಯಿಂದ ಸಿಎಂ ಬೊಮ್ಮಾಯಿ ಮನೆಯಲ್ಲೇ ಇರಲಿ; ಕನಿಷ್ಠ 20 ದಿನ ರೆಸ್ಟ್ ಪಡೆಯಲಿ: ಎಂಪಿ ಕುಮಾರಸ್ವಾಮಿ

ಇಪ್ಪತ್ತು ದಿನ ಸಿಎಂ ರೆಸ್ಟ್ ತೆಗೆದುಕೊಂಡರೆ ಬಹಳ ಒಳ್ಳೆಯದು. ಬಸವರಾಜ ಬೊಮ್ಮಾಯಿಯವರು ನಮ್ಮ ನೆಚ್ಚಿನ ಸಿಎಂ ಎಂದು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಆರೋಗ್ಯದ ದೃಷ್ಟಿಯಿಂದ ಸಿಎಂ ಬೊಮ್ಮಾಯಿ ಮನೆಯಲ್ಲೇ ಇರಲಿ; ಕನಿಷ್ಠ 20 ದಿನ ರೆಸ್ಟ್ ಪಡೆಯಲಿ: ಎಂಪಿ ಕುಮಾರಸ್ವಾಮಿ
ಮಂಡಿ ನೋವಿಗೆ ನಾಟಿ ಚಿಕಿತ್ಸೆ ಪಡೆದ ಸಿಎಂ ಬಸವರಾಜ ಬೊಮ್ಮಾಯಿ
TV9 Web
| Updated By: ganapathi bhat|

Updated on: Dec 28, 2021 | 4:27 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮಂಡಿ ನೋವು ವಿಚಾರವಾಗಿ ವಿಧಾನಸೌಧದಲ್ಲಿ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕನಿಷ್ಠ 20 ದಿನಗಳ ಕಾಲ ಸಿಎಂ ಮನೆಯಲ್ಲಿ ರೆಸ್ಟ್ ಪಡೆಯಲಿ. ಆರೋಗ್ಯದ ದೃಷ್ಟಿಯಿಂದ ಬೊಮ್ಮಾಯಿ ಮನೆಯಲ್ಲೇ ಇರಲಿ. ಸ್ವಲ್ಪ ದಿನ ಮನೆಯಿಂದಲೇ ಆಡಳಿತ ಕಾರ್ಯ ನಿರ್ವಹಿಸಲಿ. ಸಿಎಂ ಬೊಮ್ಮಾಯಿಗೆ ಅಧಿಕಾರಿಗಳು, ಜನ ಸಹಕಾರ ಕೊಡಲಿ ಎಂದು ಹೇಳಿದ್ದಾರೆ.

ಯಾವುದೇ ಸಭೆಗೆ ಬೊಮ್ಮಾಯಿ ಅವರನ್ನ ಸ್ವಲ್ಪ ದಿನ ಕರೆಯದಿರಲಿ. ಬೊಮ್ಮಾಯಿ ಅವರನ್ನ ಅಧಿಕಾರಿಗಳು, ಜನರು ಸಭೆಗೆ ಕರೆಯದಿರಲಿ. ಸಂಪೂರ್ಣವಾಗಿ ಗುಣಮುಖರಾಗಲಿ ಎನ್ನುವುದೇ ನಮ್ಮ ಆಶಯ. ಇಪ್ಪತ್ತು ದಿನ ಸಿಎಂ ರೆಸ್ಟ್ ತೆಗೆದುಕೊಂಡರೆ ಬಹಳ ಒಳ್ಳೆಯದು. ಬಸವರಾಜ ಬೊಮ್ಮಾಯಿಯವರು ನಮ್ಮ ನೆಚ್ಚಿನ ಸಿಎಂ ಎಂದು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ವರ್ಷಪೂತಿ ದಿನಾಲು 15 ಗಂಟೆ ಕೆಲಸ ಮಾಡೊ ಸಂಕಲ್ಪ ಮಾಡಿದ್ದೀನಿ: ಬಸವರಾಜ ಬೊಮ್ಮಾಯಿ ಪಕ್ಷದ ಸಂಘಟನೆ, ಮುಂಬರುವ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗುತ್ತೆ. ಕಾರ್ಯಕಾರಣಿಯಲ್ಲಿ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತೆ. ಸಂಪುಟ ವಿಸ್ತರಣೆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳುತ್ತೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಸಿಎಂ ವಿಶ್ರಾಂತಿ ಪಡೆದು ಕೆಲಸ‌ ಮಾಡಲಿ ಎನ್ನೋ ಶಾಸಕ ಎಂ.ಪಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿಯೂ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಎಂ.ಪಿ ಕುಮಾರಸ್ವಾಮಿಗೆ ನನ್ಮೇಲೆ ಬಹಳ ಪ್ರೀತಿ ಇದೆ. ವರ್ಷಪೂತಿ ದಿನಾಲು 15 ಗಂಟೆ ಕೆಲಸ ಮಾಡೊ ಸಂಕಲ್ಪ ಮಾಡಿದ್ದೀನಿ. 2023 ಕ್ಕೆ ಬಿಜೆಪಿ ಅಧಿಕಾರಕ್ಕೆ ತರೋದೆ ನನ್ನ ಗುರಿ. ಈಗಿನಿಂದಲೇ ಅದನ್ನ ಸ್ಟಾಟ್೯ ಮಾಡ್ತಿನಿ. ಅರುಣ್ ಸಿಂಗ್ ಸೇರಿದಂತೆ ಕೇಂದ್ರ ವರಿಷ್ಟರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ‌. ಅವರಿಗೆ ಅದಕ್ಕಾಗಿ ಧನ್ಯವಾದ ಹೇಳ್ತೆನೆ. ನಾವೆಲ್ಲಾ ಸೇರಿ ಸಾಮೂಹಿಕವಾಗಿ ಚುನಾವಣೆ ಎದುರಿಸುತ್ತೆವೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಬಸರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾರ್ಯಕಾರಿಣಿಯಲ್ಲಿ ಹಲವು ಮಹತ್ವದ ವಿಚಾರಗಳ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. 365 ದಿನವೂ ದಣಿವರಿಯದೆ ಕೆಲಸ ಮಾಡುವ ಶಕ್ತಿ ಇದೆ. ಪ್ರತಿ ದಿನ 15 ಗಂಟೆಗಳ ಕಾಲ ಕೆಲಸ ಮಾಡುವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಗೈರಾಗಿ ದೆಹಲಿಗೆ ಹಾರಿದ ರಮೇಶ್ ಜಾರಕಿಹೊಳಿ; ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡದ ಬೊಮ್ಮಾಯಿ

ಇದನ್ನೂ ಓದಿ: CM Basavaraj Bommai: ಮಂಡಿ ನೋವಿಗೆ ನಾಟಿ ಚಿಕಿತ್ಸೆ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ