Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ವಶಕ್ಕೆ; ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ-ಈಶ್ವರ ಖಂಡ್ರೆ

ಕೋಟ್ಯಂತರ ರೂ. ಮೌಲ್ಯದ ಮರ ಕಡಿದ ಆರೋಪದ ಮೇಲೆ ವಿಕ್ರಂ ಸಿಂಹ ಎಂಬುವವರು ಬಂಧಿಸಲಾಗಿದೆ. ಇವರು ಶುಂಠಿ ಬೆಳೆಯಲು ಸದರಿ ಪ್ರಶ್ನಿತ ಜಮೀನಿನ ಕರಾರು ಮಾಡಿಕೊಂಡಿದ್ದಾರೆ. ಹೀಗಾಗಿ ಅವರನ್ನು ವಶಕ್ಕೆ ಪಡೆದು ಪ್ರಶ್ನಿಸುವುದು ಅಗತ್ಯವೆಂದು ಮನಗಂಡು ತನಿಖಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ವಶಕ್ಕೆ; ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ-ಈಶ್ವರ ಖಂಡ್ರೆ
ಈಶ್ವರ್​ ಖಂಡ್ರೆ
Follow us
ಕಿರಣ್​ ಹನಿಯಡ್ಕ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 30, 2023 | 8:36 PM

ಬೆಂಗಳೂರು, ಡಿ.30: ಬಿಜೆಪಿ ಸಂಸದ ಪ್ರತಾಪ್ ಸಿಂಹ(Pratap Simha)ಸಹೋದರ ವಿಕ್ರಮ್ ಸಿಂಹ ವಶಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ(Eshwara Khandre) ‘ಪ್ರಕೃತಿ, ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದರೆ, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯಲ್ಲಿ   ಕೋಟ್ಯಾಂತರ ರೂಪಾಯಿಯ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 50-60 ವರ್ಷದ ಬೃಹತ್ ಹಳೆಯ ಮರಗಳೂ ಇವೆ. ಈ ರೀತಿ ಸ್ವಾರ್ಥಕ್ಕಾಗಿ ಯಾರೇ ಮರ ಕಡಿದರೂ ಅದು ಅಪರಾಧ ಎಂದಿದ್ದಾರೆ.

ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ

ಈ ರೀತಿ ಅರಣ್ಯ ಸಂಪತ್ತನ್ನು ನಾಶಪಡಿಸಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು, ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ವೃಕ್ಷ ಸಂರಕ್ಷಣಾ ಕಾಯಿದೆಯಡಿ ಸರ್ಕಾರಿ ಜಾಗದಲ್ಲೇ ಆಗಲಿ, ಪಟ್ಟಾ ಜಮೀನಿನಲ್ಲೇ ಆಗಲಿ ಅನುಮತಿ ಪಡೆಯದೇ ಅಕ್ರಮವಾಗಿ ಮರ ಕಡಿಯುವುದು ಅಪರಾಧವಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ನಾನು ಯಾರ ಹೆಸರೂ ಹೇಳಲು ಇಚ್ಛಿಸುವುದಿಲ್ಲ.

ಇದನ್ನೂ ಓದಿ:ಕೋಟ್ಯಂತರ ರೂ. ಮೌಲ್ಯದ ಮರ ಕಡಿದ ಆರೋಪ: ಸಂಸದ ಪ್ರತಾಪ್ ಸಹೋದರ ವಿಕ್ರಮ್ ಸಿಂಹ ವಶಕ್ಕೆ

ಆದರೆ, ವಿಕ್ರಂ ಸಿಂಹ ಎಂಬುವವರು ಶುಂಠಿ ಬೆಳೆಯಲು ಸದರಿ ಪ್ರಶ್ನಿತ ಜಮೀನಿನ ಕರಾರು ಮಾಡಿಕೊಂಡಿದ್ದಾರೆ. ಹೀಗಾಗಿ ಅವರನ್ನು ವಶಕ್ಕೆ ಪಡೆದು ಪ್ರಶ್ನಿಸುವುದು ಅಗತ್ಯವೆಂದು ಮನಗಂಡು ತನಿಖಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ತಹಶೀಲ್ದಾರ್ ಅವರು ಪ್ರಕರಣ ಬೆಳಕಿಗೆ ತಂದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡು ಬಂದಿದೆ. ಕ್ಷಿಪ್ರವಾಗಿ ಕ್ರಮ ವಹಿಸದ ಮತ್ತು ನಿಯಮಾನುಸಾರ ಕ್ರಮ ಕೈಗೊಳ್ಳದೇ ಕರ್ತವ್ಯ ಲೋಪ ಎಸಗಿರುವ ಆರೋಪದಡಿ 5 ಅಧಿಕಾರಿ, ಸಿಬ್ಬಂದಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಸಚಿವ ಈಶ್ವರ್​ ಖಂಡ್ರೆ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ