ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ ಕೇಸ್​: ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಿಷ್ಟು

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್, ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ಅಕ್ರಮವಾಗಿ ಮರ ಕಡಿದಿರುವುದು ನಿಜ ಅಲ್ವಾ.​ ಅನುಮತಿ ಇಲ್ಲದೆ ಮರ ಕಡಿದಿದ್ದಾರೆ, ಆದ್ದರಿಂದ ಕ್ರಮ ಆಗಿದೆ ಎಂದು ಹೇಳಿದ್ದಾರೆ. ಪ್ರಕರಣದಲ್ಲಿ ಅನವಶ್ಯಕವಾಗಿ ರಾಜಕೀಯ ಬಣ್ಣ ಕೊಡುತ್ತಿದ್ದಾರೆ ಎಂದಿದ್ದಾರೆ.

ಬೆಂಗಳೂರು, ಡಿಸೆಂಬರ್​ 31: ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ಅಕ್ರಮವಾಗಿ ಮರ ಕಡಿದಿರುವುದು ನಿಜ ಅಲ್ವಾ.​ ಅನುಮತಿ ಇಲ್ಲದೆ ಮರ ಕಡಿದಿದ್ದಾರೆ, ಆದ್ದರಿಂದ ಕ್ರಮ ಆಗಿದೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ (G Parameshwara) ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಿಎಂ ಹೆಸರು ತರುವುದು ಬೇಡ. ಪ್ರಕರಣದಲ್ಲಿ ಅನವಶ್ಯಕವಾಗಿ ರಾಜಕೀಯ ಬಣ್ಣ ಕೊಡುತ್ತಿದ್ದಾರೆ ಎಂದಿದ್ದಾರೆ.

ಕೊವಿಡ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ

ಹೊಸ ವರ್ಷಾಚರಣೆ ವಿಚಾರವಾಗಿ ಮಾತನಾಡಿದ ಅವರು, ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ಆಗಬಾರದು. ವಾರದ ಹಿಂದೆಯೇ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ಆಗಿದೆ. ಪ್ರತಿ ವರ್ಷ ಬೆಂಗಳೂರು ನಗರದಲ್ಲಿ ಸಾವಿರಾರು ಜನ ಸೇರುತ್ತಾರೆ. ಎಂ.ಜಿ.ರೋಡ್, ಬ್ರಿಗೇಡ್ ರೋಡ್​ನಲ್ಲಿ ಹೆಚ್ಚಿನ ಜನ ಸೇರುತ್ತಾರೆ. ಹೀಗಾಗಿ ವಿಶೇಷ ಗಮನ ಕೊಡಬೇಕು ಅಂತಾ ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಹೊಸ ವರ್ಷ ಆಚರಣೆಗೆ ಬೆಂಗಳೂರು ಸೇರಿ ಹಲವೆಡೆ ಭರ್ಜರಿ ಸಿದ್ದತೆ; ಇಲ್ಲಿದೆ ವಿವರ

ಈ ಬಾರಿ ಎಲ್ಲರೂ ಸಂತೋಷದಿಂದ ಹೊಸ ವರ್ಷಾಚರಣೆ ಮಾಡಲಿ. ಕೊವಿಡ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. 60 ವರ್ಷ ಮೇಲ್ಪಟ್ಟವರು ಮಾಸ್ಕ್ ಹಾಕಿಕೊಳ್ಳಬೇಕು ಎಂದು ಹೇಳಿದ್ದಾರೆ.

ವಿಶೇಷ ಸ್ಥಾನಮಾನದ ಬಗ್ಗೆ ಸಿಎಂ ನಿರ್ಧಾರ ಕೈಗೊಂಡಿದ್ದಾರೆ

ರೆಬೆಲ್ ಕಾಂಗ್ರೆಸ್​ ಶಾಸಕರಿಗೆ ವಿಶೇಷ ಸ್ಥಾನಮಾನ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ವಿಶೇಷ ಸ್ಥಾನಮಾನದ ಬಗ್ಗೆ ಸಿಎಂ ನಿರ್ಧಾರ ಕೈಗೊಂಡಿದ್ದಾರೆ. ಇಲಾಖೆಗಳಲ್ಲಿ ಮುಖ್ಯಮಂತ್ರಿಗಳು ಎಲ್ಲವನ್ನೂ ನೋಡಲಾಗಲ್ಲ. ಆರ್ಥಿಕ ಇಲಾಖೆ ಕಡೆ ವಿಶೇಷ ಗಮನ ಕೊಡಬೇಕಾಗುತ್ತೆ. ಸಿಎಂ ಅವರು ಪರಿಣಿತರಿದ್ದಾರೆ ಎಂದರು.

ಹೆಚ್​ಡಿ ಕುಮಾರಸ್ವಾಮಿ ಗೃಹ ಸಚಿವ ಜಿ.ಪರಮೇಶ್ವರ್ ತಿರುಗೇಟು

ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ವಿಚಾರವಾಗಿ ಮಾತನಾಡಿದ್ದು, ಹೆಚ್​ಡಿ ಕುಮಾರಸ್ವಾಮಿ ಬಗ್ಗೆ ಮಾತನಾಡದೆ ಇರೋದೇ ಒಳ್ಳೇದು. ಕುಮಾರಸ್ವಾಮಿಯನ್ನ ಹಾಗೇ ಬಿಟ್ಟುಬಿಡೋದೇ ವಾಸಿ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us